AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ಮುಕ್ತ ಮನಸ್ಸಿನಿಂದ ಬಂದರೆ ನಾವು ಮಾತುಕತೆಗೆ ಸಿದ್ಧ: ಪ್ರತಿಭಟನಾ ರೈತರ ಸಂದೇಶ

ರೈತ ಸಂಘಟನೆಗಳು ಸರ್ಕಾರದ ಜೊತೆ ಮಾತನಾಡಲು ಸಿದ್ಧವಿವೆ. ಆದರೆ, ಸರ್ಕಾರ ಮಾತುಕತೆಗೆ ಮುಕ್ತ ಮನಸ್ಸಿನಿಂದ ಬರಬೇಕು. ಈ ಮೊದಲು ಇಟ್ಟು ಬೇಡಿಕೆಗಳನ್ನೇ ನಮ್ಮ ಮುಂದೆ ಇಡಬಾರದು ಎನ್ನುವ ಷರತ್ತನ್ನು ರೈತರು ಇಟ್ಟಿದ್ದಾರೆ.

ಸರ್ಕಾರ ಮುಕ್ತ ಮನಸ್ಸಿನಿಂದ ಬಂದರೆ ನಾವು ಮಾತುಕತೆಗೆ ಸಿದ್ಧ: ಪ್ರತಿಭಟನಾ ರೈತರ ಸಂದೇಶ
ಪ್ರತಿಭಟನಾ ರೈತರು
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Dec 23, 2020 | 8:47 PM

Share

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಒಂದು ತಿಂಗಳು ಪೂರೈಸುತ್ತಾ ಬಂದಿದೆ. ಸರ್ಕಾರ ಈಗಾಗಲೇ ಕೆಲ ಸುತ್ತಿನ ಮಾತುಕತೆ ನಡೆಸಿದರೂ ಅದು ಫಲ ಕೊಡಲಿಲ್ಲ. ಈ ಬೆನ್ನಲ್ಲೇ ಪ್ರತಿಭಟನಾ ರೈತರು, ಸರ್ಕಾರ ಮುಕ್ತ ಮನಸ್ಸಿನಿಂದ ಬಂದರೆ ನಾವು ಮಾತುಕತೆಗೆ ಸಿದ್ಧ ಎನ್ನುವ ಸಂದೇಶ ರವಾನೆ ಮಾಡಿದ್ದಾರೆ.

ರೈತ ಸಂಘಟನೆಗಳು ಸರ್ಕಾರದ ಜೊತೆ ಮಾತನಾಡಲು ಸಿದ್ಧವಿವೆ. ಆದರೆ, ಸರ್ಕಾರ ಮಾತುಕತೆಗೆ ಮುಕ್ತ ಮನಸ್ಸಿನಿಂದ ಬರಬೇಕು. ಈ ಮೊದಲು ಇಟ್ಟು ಬೇಡಿಕೆಗಳನ್ನೇ ನಮ್ಮ ಮುಂದೆ ಇಡಬಾರದು. ನಾವು ಒಪ್ಪ ಬಹುದಾದ ಬೇಡಿಕೆ ನಮ್ಮ ಮುಂದಿಟ್ಟರೆ ನಾವು ಪ್ರತಿಭಟನೆ ಕೈ ಬಿಡುತ್ತೇವೆ ಎಂದು ಪ್ರತಿಭಟನೆಯಲ್ಲಿ ತೊಡಗಿರುವ ಸ್ವರಾಜ್​ ಇಂಡಿಯಾ ನಾಯಕ ಯೋಗೇಂದ್ರ ಯಾದವ್​ ಹೇಳಿದ್ದಾರೆ.

ಮತ್ತೊಂದು ಪ್ರತಿಭಟನಾ ನಿರತ ಗುಂಪಿನ ರೈತ ಶಿವಕುಮಾರ್​ ಕಕ್ಕ ಮಾತನಾಡಿ, ಪ್ರತಿಭಟನಾ ರೈತರು ಕೃಷಿ ತಿದ್ದುಪಡಿ ಕಾಯ್ದೆಯನ್ನು ಎಂದಿಗೂ ಒಪ್ಪುವುದಿಲ್ಲ. ಅದನ್ನು ಕೈ ಬಿಡುವ ನಿರ್ಧಾರಕ್ಕೆ ಸರ್ಕಾರ ಬರಬೇಕು. ರೈತರ ಬೇಡಿಕೆಗೆ ಕೇಂದ್ರ ಸರ್ಕಾರ ಸ್ಪಂದಿಸಬೇಕಿದೆ ಎಂದು ಹೇಳಿದರು.

ಕಳೆದ ಮೂರುವಾರಗಳಿಂದ ದೆಹಲಿ ಹೊರಭಾಗದಲ್ಲಿ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಅನುಮೋದಿಸಿರುವ ಕೃಷಿ ಕಾಯ್ದೆಯ ವಿರುದ್ಧ ಹೋರಾಟ ನಡೆಸುತ್ತಿರುವ ರೈತರಿಗೆ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ಕೇಂದ್ರದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಈ ಮೊದಲಿನಿಂದಲೂ ಕೇಳಿಕೊಳ್ಳುತ್ತಾ ಬರುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

‘ಮೋದಿ ಮಧ್ಯಸ್ಥಿಕೆ ವಹಿಸಿದರೆ ರೈತರ ಪ್ರತಿಭಟನೆಗೆ ನಿಮಿಷದೊಳಗೆ ಅಂತ್ಯ ಹಾಡಬಹುದು’

Published On - 8:42 pm, Wed, 23 December 20

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ