AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ರಾಜೀನಾಮೆ ನೀಡಬೇಕೇ ಅಥವಾ ಜೈಲಿನಿಂದ ಸರ್ಕಾರ ನಡೆಸಬೇಕೇ, ಜನರನ್ನು ಕೇಳಿ’: ಕೇಜ್ರಿವಾಲ್

Arvind Kejriwal: ಎಎಪಿ ದೇಶದ ಮೂರನೇ ಅತಿದೊಡ್ಡ ಪಕ್ಷವಾಗಿದೆ ಎಂದು ಕೇಜ್ರಿವಾಲ್ ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸಿದ್ದಾರೆ. "ದೆಹಲಿಯಲ್ಲಿ ಏನು ಬೇಕಾದರೂ ಮಾಡಬಹುದು. ಆದರೆ ದೆಹಲಿಯಲ್ಲಿ ಗೆಲ್ಲುವುದಿಲ್ಲ ಎಂದು ಅವರಿಗೆ ಈಗ ತಿಳಿದಿದೆ. ಹಾಗಾಗಿ ಅವರು ಶರಾಬ್ ಘೋಟಾಲಾವನ್ನು (ಮದ್ಯ ಹಗರಣ ಪ್ರಕರಣ) ತಂದಿದ್ದಾರೆ. ಇಡಿ, ಸಿಬಿಐ ಬಳಿ ಯಾವುದೇ ಸಾಕ್ಷ್ಯಗಳಿಲ್ಲ ಮತ್ತು ಇದನ್ನು ಸುಪ್ರೀಂ ಕೋರ್ಟ್ ಕೂಡಾ ಹೇಳಿದೆ.

'ನಾನು ರಾಜೀನಾಮೆ ನೀಡಬೇಕೇ ಅಥವಾ ಜೈಲಿನಿಂದ ಸರ್ಕಾರ ನಡೆಸಬೇಕೇ, ಜನರನ್ನು ಕೇಳಿ': ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Nov 17, 2023 | 7:05 PM

Share

ದೆಹಲಿ ನವೆಂಬರ್ 17: ಮದ್ಯ ನೀತಿ ಪ್ರಕರಣದ (liquor probe) ತನಿಖೆಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟರೆ ಎಎಪಿ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ನಡೆಯುತ್ತಿರುವ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೇ ಅಥವಾ ಜೈಲಿನಿಂದ ಸರ್ಕಾರವನ್ನು ನಡೆಸಬೇಕೇ ಎಂಬ ಬಗ್ಗೆ ಪಕ್ಷದ ಸಂಸದರು ಮತ್ತು ಶಾಸಕರೊಂದಿಗೆ ಚರ್ಚಿಸುತ್ತಿರುವುದಾಗಿ ಶುಕ್ರವಾರ ಹೇಳಿದ್ದಾರೆ.  “ನನಗೆ ಅಧಿಕಾರದ ಲಾಲಸೆ ಇಲ್ಲ. 49ನೇ ದಿನಕ್ಕೆ ನಾನು ರಾಜೀನಾಮೆ ನೀಡಿದ್ದೇನೆ. ಯಾರೂ ನನ್ನ ರಾಜೀನಾಮೆ ಕೇಳಲಿಲ್ಲ. ಆದರೆ ಬಿಜೆಪಿಯ(BJP) ಷಡ್ಯಂತ್ರಗಳಲ್ಲಿ ನಾವು ಸಿಲುಕಿಕೊಳ್ಳದಂತೆ ನಾವು ನೋಡಿಕೊಳ್ಳಬೇಕು” ಎಂದು ಕೇಜ್ರಿವಾಲ್ ತಮ್ಮ ಪಕ್ಷದ ಕಾರ್ಯಕರ್ತರನ್ನು ಒತ್ತಾಯಿಸಿದರು. ಈ ಬಗ್ಗೆ ದೆಹಲಿ ಜನರ ಅಭಿಪ್ರಾಯವನ್ನು ತೆಗೆದುಕೊಳ್ಳಬೇಕು. ದೆಹಲಿಯ ಪ್ರತಿ ಮನೆಗೆ ಹೋಗಿ ಈ ಬಗ್ಗೆ ಜನರ ಅಭಿಪ್ರಾಯವನ್ನು ತೆಗೆದುಕೊಳ್ಳಿ. ನಾನು ಜೈಲಿನಲ್ಲಿದ್ದರೂ ಬಿಜೆಪಿ ಈ ಬಾರಿ ದೆಹಲಿಯಿಂದ ಒಂದು ಲೋಕಸಭಾ ಸ್ಥಾನವನ್ನು ಪಡೆಯಬಾರದು ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ದೆಹಲಿಯಲ್ಲಿ ಯಾವುದೇ ಮದ್ಯದ ಹಗರಣವಿಲ್ಲ, ಗುಜರಾತ್, ಹರ್ಯಾಣದಲ್ಲಿ ಮದ್ಯದ ಹಗರಣಗಳಿವೆ. ಆದರೆ ಆಪ್ ನಾಯಕರನ್ನು ಜೈಲಿಗೆ ಹಾಕದ ಹೊರತು ಎಎಪಿ ವಿರುದ್ಧ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ಬಿಜೆಪಿ ಅರ್ಥಮಾಡಿಕೊಂಡಿದೆ. ಆದರೆ ಇಂದು ನಾನು ನಿಮ್ಮನ್ನು ಬಂಧಿಸಲು ಹೇಳುತ್ತಿದ್ದೇನೆ. ನಾನು ಮತ್ತು ಎಎಪಿ ಜೈಲಿನಿಂದ ಗೆಲ್ಲುವುದನ್ನು ನೋಡುತ್ತೇನೆ ಎಂದು ಕೇಜ್ರಿವಾಲ್ ಪಕ್ಷದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಹೇಳಿದರು.

ಎಎಪಿ ದೇಶದ ಮೂರನೇ ಅತಿದೊಡ್ಡ ಪಕ್ಷವಾಗಿದೆ ಎಂದು ಕೇಜ್ರಿವಾಲ್ ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸಿದ್ದಾರೆ. “ದೆಹಲಿಯಲ್ಲಿ ಏನು ಬೇಕಾದರೂ ಮಾಡಬಹುದು. ಆದರೆ ದೆಹಲಿಯಲ್ಲಿ ಗೆಲ್ಲುವುದಿಲ್ಲ ಎಂದು ಅವರಿಗೆ ಈಗ ತಿಳಿದಿದೆ. ಹಾಗಾಗಿ ಅವರು ಶರಾಬ್ ಘೋಟಾಲಾವನ್ನು (ಮದ್ಯ ಹಗರಣ ಪ್ರಕರಣ) ತಂದಿದ್ದಾರೆ. ಇಡಿ, ಸಿಬಿಐ ಬಳಿ ಯಾವುದೇ ಸಾಕ್ಷ್ಯಗಳಿಲ್ಲ ಮತ್ತು ಇದನ್ನು ಸುಪ್ರೀಂ ಕೋರ್ಟ್ ಕೂಡಾ ಹೇಳಿದೆ. ಅವರು ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿದ್ದಾರೆ. ಸತ್ಯೇಂದ್ರ ಜೈನ್, ಸಂಜಯ್ ಸಿಂಗ್, ವಿಜಯ್ ನಾಯರ್ ಮತ್ತು ಈಗ ಅವರು ನನ್ನನ್ನು ಬಂಧಿಸಲು ಬಯಸಿದ್ದಾರೆ ಎಂದು ಕೇಜ್ರಿವಾಲ್ ಹೇಳಿದರು.

ಎಎಪಿ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪಕ್ಷವಾಗಿದೆ, ದೇಶವಲ್ಲ. ಅವರು ನಮ್ಮ ಹೆಸರನ್ನು ಹಾಕುತ್ತಿದ್ದಾರೆಯೇ ಎಂದು ನಾವು ಗಿನ್ನೆಸ್ ಬುಕ್ ಆಫ್ ದಿ ರೆಕಾರ್ಡ್ ಕೇಳಬೇಕು. ಮೊದಲು ದೆಹಲಿ ಮತ್ತು ಪಂಜಾಬ್ ನಂತರ ನಾವು ಗೋವಾ ಮತ್ತು ಗುಜರಾತ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದೇವೆ. ನಾವು ರಾಷ್ಟ್ರೀಯ ಪಕ್ಷವಾಗಿ,ಮೂರನೇ ಅತಿದೊಡ್ಡ ಪಕ್ಷವಾಗಿ ಮಾರ್ಪಟ್ಟಿದ್ದೇವೆ. ಎಎಪಿ ಶೀಘ್ರದಲ್ಲೇ ಬಿಜೆಪಿ ಮತ್ತು ಕಾಂಗ್ರೆಸ್ ಅನ್ನು ಬಿಟ್ಟು ದೇಶವನ್ನು ಆಳುತ್ತದೆ ಎಂದು ನನ್ನ ಹೃದಯ ಹೇಳುತ್ತದೆ. ಈಗ ನಿಮ್ಮ ವಿರುದ್ಧ ದೊಡ್ಡ ಷಡ್ಯಂತ್ರಗಳನ್ನು ರೂಪಿಸಲಾಗುವುದು ಎಂದು ಕೇಜ್ರಿವಾಲ್ ತಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದರು.

ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಅವರು ಬಿಜೆಪಿಗೆ ಸೇರಿದರೆ 24 ಗಂಟೆಗಳಲ್ಲಿ ಜಾಮೀನು ಪಡೆಯುತ್ತಾರೆ. ಚುನಾವಣಾ ಪೂರ್ವದಲ್ಲಿ ಪ್ರಾದೇಶಿಕ ಪಕ್ಷಗಳ ಎಲ್ಲಾ ನಾಯಕರನ್ನು ಅವರು ಪ್ರಚಾರ ಮಾಡದಂತೆ ಗುರಿಯಾಗಿಸಲಾಗುತ್ತದೆ ಎಂದು ಹೇಳಿದರು. “ಅವರು ಮಮತಾ ಬ್ಯಾನರ್ಜಿ, ತೇಜಸ್ವಿ ಯಾದವ್ ಮತ್ತು ಹೇಮಂತ್ ಸೊರೆನ್ ಅವರನ್ನು ಬಂಧಿಸಲು ಯೋಜಿಸಿದ್ದಾರೆ. ಇದರಿಂದ ಬಿಜೆಪಿ ಈ ರಾಜ್ಯಗಳಲ್ಲಿ ಮುನ್ನಡೆಯಬಹುದು” ಎಂದು ಕೇಜ್ರಿವಾಲ್ ಹೇಳಿದರು.

ಇದನ್ನೂ ಓದಿ: ಇಡಿ ಸಮನ್ಸ್​​​ಗೆ ಹಾಜರಾಗದ ಕೇಜ್ರಿವಾಲ್: ಆಪ್ ವಿರುದ್ಧ ನವಜೋತ್ ಸಿಂಗ್ ಸಿಧು ಗುಡುಗು

ಈ ತಿಂಗಳ ಆರಂಭದಲ್ಲಿ, ಮದ್ಯದ ತನಿಖೆಗೆ ಸಂಬಂಧಿಸಿದಂತೆ ಇಡಿ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಿತ್ತು. ಕೇಜ್ರಿವಾಲ್ ಅವರನ್ನು ಬಂಧಿಸಿದರೆ ಪರ್ಯಾಯ ಯೋಜನೆ ಸಿದ್ಧವಾಗಿರುವಾಗಲೇ ಕೇಜ್ರಿವಾಲ್ ಸಮನ್ಸ್ ತಿರಸ್ಕರಿಸಿದರು. “ನಾವು ಜೈಲು ಬಗ್ಗೆ ಹೆದರುವುದಿಲ್ಲ. ಇದು ನಮಗೆ ಆಭರಣದಂತೆ. ನಾನು ಜೈಲಿನಲ್ಲಿ 15 ದಿನಗಳನ್ನು ಕಳೆದಿದ್ದೇನೆ. ಅಲ್ಲಿ ವ್ಯವಸ್ಥೆಗಳು ಉತ್ತಮವಾಗಿವೆ. ನೀವು ಎಂದಾದರೂ ಬಂಧಿಸಿದರೆ ನೀವು ಭಯಪಡಬೇಡಿ. ಭಗತ್ ಸಿಂಗ್ ಹಲವಾರು ವರ್ಷ ಜೈಲಿನಲ್ಲಿದ್ದರು ಮನೀಶ್ ಸಿಸೋಡಿಯಾ ಎಂಟು ತಿಂಗಳು ಮತ್ತು ಸತ್ಯೇಂದ್ರ ಜೈನ್ ಒಂದು ವರ್ಷಕ್ಕೂ ಹೆಚ್ಚು ಕಾಲ ಅಲ್ಲಿರುವುದಾದರೆ ಬಂಧನಕ್ಕೆ ನಾನು ಏನು ಹೆದರಬೇಕು? ಎಂದು ಕೇಜ್ರಿವಾಲ್ ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:05 pm, Fri, 17 November 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ