ಕೊವಿಡ್ ರೋಗಿಗಳ ಹೆಣ ಎಸೆಯಲು ಮುಂಬೈನಲ್ಲಿ ಯಾವುದೇ ನದಿ ಇಲ್ಲ: ಮೇಯರ್ ಕಿಶೋರಿ ಪೆಡನೆಕರ್

Mayor Kishori Pednekar: ಮುಂಬೈ ಎಂದಿಗೂ ಸಾವುಗಳ ಸಂಖ್ಯೆಯನ್ನು ಕಡಿಮೆ ಎಂದು ವರದಿ ಮಾಡುವುದಿಲ್ಲ. ಮೃತದೇಹಗಳನ್ನು ಎಸೆಯಲು ನಮ್ಮಲ್ಲಿ ನದಿಗಳು ಎಂದು ಹೇಳುವ ಮೂಲಕ ಬಿಜೆಪಿ ಆಡಳಿತದ ಬಿಹಾರ ಮತ್ತು ಉತ್ತರ ಪ್ರದೇಶ ಸರ್ಕಾರಕ್ಕೆ ಟಾಂಗ್ ನೀಡಿದ ಮುಂಬೈ ಮೇಯರ್.

ಕೊವಿಡ್ ರೋಗಿಗಳ ಹೆಣ ಎಸೆಯಲು ಮುಂಬೈನಲ್ಲಿ ಯಾವುದೇ ನದಿ ಇಲ್ಲ: ಮೇಯರ್ ಕಿಶೋರಿ ಪೆಡನೆಕರ್
ಮೇಯರ್ ಕಿಶೋರಿ ಪೆಡನೆಕರ್
Follow us
| Edited By: Rashmi Kallakatta

Updated on:Jun 10, 2021 | 5:39 PM

ಮುಂಬೈ: ಮುಂಬೈನಲ್ಲಿ ಕೊವಿಡ್ -19 ಸಾವುಗಳ ಸಂಖ್ಯೆ ಕಡಿಮೆ ಎಂದು ವರದಿ ಮಾಡುತ್ತಿಲ್ಲ ಎಂದು ಮುಂಬೈ ಮೇಯರ್ ಕಿಶೋರಿ ಪೆಡನೆಕರ್ ಗುರುವಾರ ಹೇಳಿದ್ದಾರೆ.  ಮುಂಬೈ ಎಂದಿಗೂ ಹಾಗೆ ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ. ಈ ರೀತಿ ಹೇಳುವ ಮೂಲಕ ಮುಂಬೈ ಮೇಯರ್,ಬಿಜೆಪಿ ಆಡಳಿತದ ಉತ್ತರ ಪ್ರದೇಶ ಮತ್ತು ಬಿಹಾರ ಸರ್ಕಾರಕ್ಕೆ ಟಾಂಗ್ ನೀಡಿದ್ದಾರೆ. ಕಳೆದ ತಿಂಗಳು ಈ ರಾಜ್ಯಗಳಲ್ಲಿ   ಶವಗಳು ನದಿಯಲ್ಲಿ ತೇಲುತ್ತಿರುವುದು ಕಂಡುಬಂದವು ಮತ್ತು ಕೆಲವು ನದಿಯ ದಂಡೆಗೆ ಬಂದು ಬಡಿದ್ದಿತ್ತು. ಮೃತದೇಹಗಳನ್ನು ಎಸೆಯಲು ನಮ್ಮಲ್ಲಿ ನದಿಗಳಿಲ್ಲ ಎಂದಿದ್ದಾರೆ ಮೇಯರ್.

ಬಿಹಾರ ತನ್ನ ಕೋವಿಡ್ -19 ಸಾವು ಪ್ರಕರಣಗಳ ಮಾಹಿತಿ ಪರಿಷ್ಕರಿಸಿದ ಕಾರಣ ಭಾರತದಲ್ಲಿ ಕೊವಿಡ್ ಸಾವಿನ ಸಂಖ್ಯೆ ಏರಿಕೆ ಕಂಡಿದೆ. ಇದರ ಬೆನ್ನಲ್ಲೇ ಮುಂಬೈ ಮೇಯರ್ ಈ ರೀತಿ ಹೇಳಿದ್ದಾರೆ. ಬಿಹಾರ ಕೊವಿಡ್ ಸಾವಿನ ಸಂಖ್ಯೆ ಪರಿಷ್ಕರಣೆ ಮಾಡಿದ್ದರಿಂದ ಸುಮಾರು 4,000 ಸಾವು ಪ್ರಕರಣ ಹೆಚ್ಚಾಗಿದೆ. ಇದು ಗುರುವಾರ ಒಟ್ಟು ಸಂಖ್ಯೆಗೆ ಸೇರ್ಪಡೆಯಾಗಿದೆ. ಪರಿಷ್ಕರಣೆಯ ನಂತರ, ರಾಜ್ಯದಲ್ಲಿ ಒಟ್ಟು ಕೊವಿಡ್ -19 ಸಾವುಗಳ ಸಂಖ್ಯೆ ಮಂಗಳವಾರದವರೆಗೆ 9,429 ಆಗಿತ್ತು. ಪರಿಷ್ಕರಣೆ ಮೊದಲು, ಈ ಸಂಖ್ಯೆ 5,458 ಆಗಿತ್ತು. ಆದಾಗ್ಯೂ ಈ ಸಾವುಗಳು ಯಾವಾಗ ಸಂಭವಿಸಿದವು ಎಂಬುದು ತಿಳಿದಿಲ್ಲ.

ಸಾಂಕ್ರಾಮಿಕ ರೋಗದಿಂದ ಹೆಚ್ಚು ಹಾನಿಗೊಳಗಾದ ರಾಜ್ಯವಾದ ಮಹಾರಾಷ್ಟ್ರದಲ್ಲಿ ಕೊವಿಡ್ -19  ಪ್ರಕರಣಗಳು ಮತ್ತು ದೈನಂದಿನ ಸಾವು ಇಳಿಮುಖವಾಗಿದ್ದು ಪರಿಸ್ಥಿತಿ ಸ್ಥಿರ ಸುಧಾರಣೆ ಕಂಡುಬಂದಿದೆ . ಕಳೆದ ಕೆಲವು ದಿನಗಳಲ್ಲಿ ಮುಂಬೈನಲ್ಲಿ ಸಾವಿನ ಸಂಖ್ಯೆ 30 ಕ್ಕಿಂತ ಕಡಿಮೆಯಾಗಿದೆ. ಬಿಜೆಪಿ ಮುಖಂಡ ದೇವೇಂದ್ರ ಫಡಣವಿಸ್ ಈ ಹಿಂದೆ ನಾಗರಿಕ ಸಂಸ್ಥೆ ಮತ್ತು ಮಹಾರಾಷ್ಟ್ರ ಸರ್ಕಾರವು ಮರಣ ಪ್ರಮಾಣದ ಲೆಕ್ಕದಲ್ಲಿ ಮೋಸ ಮಾಡುತ್ತಿದೆ ಎಂದು ಆರೋಪಿಸಿದ್ದರು.

ಮೇ ತಿಂಗಳಲ್ಲಿ ಉತ್ತರ ಪ್ರದೇಶ ಮತ್ತು ಬಿಹಾರದ ಗಂಗಾನದಿಯಲ್ಲಿ ಶವಗಳು ತೇಲುತ್ತಿರುವ ವರದಿಗಳು ಹೊರಬಂದಿತ್ತು . ಕೊವಿಡ್‌ನಿಂದ ಸಾವಗೀಡಾದವರ ಶವಗಳನ್ನು ನದಿಯಲ್ಲಿ ಎಸೆಯಲಾಯಿತು ಎಂದು ಶಂಕಿಸಲಾಗಿದೆ. ಮೇ 17 ರಂದು ಕೇಂದ್ರವು ಗಂಗಾ ಮತ್ತು ಇನ್ನಾವುದೇ ನದಿಯಲ್ಲಿ ಶವಗಳನ್ನು ಎಸೆಯುವುದನ್ನು ತಡೆಯಲು ಉತ್ತರ ಪ್ರದೇಶ ಮತ್ತು ಬಿಹಾರವನ್ನು ಕೇಳಿತು. ಅದೇ ವೇಳೆ ಮಾಧ್ಯಮ ವರದಿಗಳನ್ನು “ಅನಪೇಕ್ಷಿತ ಮತ್ತು ಆತಂಕಕಾರಿ” ಎಂದು ಕರೆದಿತ್ತು.

ಇದನ್ನೂ ಓದಿ: ಗಂಗಾನದಿಯಲ್ಲಿ ಸಾಲುಸಾಲಾಗಿ ತೇಲಿ ಬರುತ್ತಿರುವ ಶವಗಳು; 2 ರಾಜ್ಯಗಳಿಗೆ ಖಡಕ್ ಸೂಚನೆ ನೀಡಿದ ಕೇಂದ್ರ ಸರ್ಕಾರ

Coronavirus Cases in India: ಸತತ ಮೂರನೇ ದಿನ 1 ಲಕ್ಷಕ್ಕಿಂತ ಕಡಿಮೆ ಹೊಸ ಕೊವಿಡ್ ಪ್ರಕರಣ, 6148 ಮಂದಿ ಸಾವು

(We don’t have rivers to dump the bodies Mumbai mayor Kishori Pednekar jibe at BJP ruled Uttar Pradesh and Bihar)

Published On - 5:34 pm, Thu, 10 June 21

ತಾಜಾ ಸುದ್ದಿ
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ