AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆಗೆ ಕೇವಲ 400 ದಿನಗಳು ಬಾಕಿ ಉಳಿದಿವೆ‌, ಎಲ್ಲ ಮತದಾರರನ್ನು ತಲುಪಿ: ಪ್ರಧಾನಿ ಮೋದಿ

BJP National Executive ಬಿಜೆಪಿಯು ಇನ್ನು ಮುಂದೆ ಕೇವಲ ರಾಜಕೀಯ ಚಳವಳಿಯಾಗಿರದೆ ಸಾಮಾಜಿಕ ಆಂದೋಲನವಾಗಿದೆ ಅದು ಸಾಮಾಜಿಕ-ಆರ್ಥಿಕ ಪರಿಸ್ಥಿತಿಗಳನ್ನು ಪರಿವರ್ತಿಸಲು ಕೆಲಸ ಮಾಡುತ್ತಿದೆ ಎಂದು ಅಧಿವೇಶನದಲ್ಲಿ ಭಾಗವಹಿಸಿದ್ದ 350 ಸಚಿವರು, ಮುಖಂಡರು ಮತ್ತು ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ಕೇವಲ 400 ದಿನಗಳು ಬಾಕಿ ಉಳಿದಿವೆ‌, ಎಲ್ಲ ಮತದಾರರನ್ನು ತಲುಪಿ: ಪ್ರಧಾನಿ ಮೋದಿ
ಇಂದು ಕರ್ನಾಟಕಕ್ಕೆ ಪ್ರಧಾನಿ ಮೋದಿImage Credit source: ANI
TV9 Web
| Edited By: |

Updated on: Jan 17, 2023 | 8:45 PM

Share

ದೆಹಲಿ: ಮಂಗಳವಾರ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ (BJP National Executive) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 2024ರ ಸಾರ್ವತ್ರಿಕ ಚುನಾವಣೆಯ ಕುರಿತು ಸೂಚನೆ ನೀಡಿದ್ದು, ಮತದಾರರ ಜತೆ ಸಂಪರ್ಕವನ್ನು ಹೆಚ್ಚಿಸುವಂತೆ ಪಕ್ಷದ ನಾಯಕರನ್ನು ಒತ್ತಾಯಿಸಿದ್ದಾರೆ.ಲೋಕಸಭಾ ಚುನಾವಣೆಯವರೆಗೆ (Lok Sabha Election) ನಮಗೆ 400 ದಿನಗಳಿವೆ. ನಾವು ಜನರ ಸೇವೆಗಾಗಿ ಎಲ್ಲವನ್ನೂ ಮಾಡಬೇಕಾಗಿದೆ. ನಾವು ಇತಿಹಾಸವನ್ನು ರಚಿಸಬೇಕಾಗಿದೆ” ಎಂದು ಸಭೆಯಲ್ಲಿ ಮೋದಿ ಹೇಳಿರುವುದಾಗಿ ಬಿಜೆಪಿಯ ಹಿರಿಯ ನಾಯಕ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.18-25 ವಯಸ್ಸಿನ ಜನರ ಬಗ್ಗೆ ನಾವು ಗಮನ ಹರಿಸಬೇಕು. ಅವರಿಗೆ ಇತಿಹಾಸ ಮತ್ತು ಹಿಂದಿನ ಸರ್ಕಾರಗಳ ದುರಾಡಳಿತದ ಬಗ್ಗೆ ತಿಳಿದಿಲ್ಲ. ನಾವು ಉತ್ತಮ ಆಡಳಿತ ಕಡೆಗೆ ಹೇಗೆ ಸಾಗುತ್ತಿದ್ದೇವೆ ಎಂಬುದರ ಬಗ್ಗೆ ಅವರಿಗೆ ತಿಳಿದಿಲ್ಲ. ನಾವು ಅವರಿಗೆ ಅರಿವು ಮೂಡಿಸಬೇಕು ಮತ್ತು ಅವರಿಗೆ ಪ್ರಜಾಸತ್ತಾತ್ಮಕ ಮಾರ್ಗಗಳನ್ನು ಪರಿಚಯಿಸಬೇಕು. ಉತ್ತಮ ಆಡಳಿತದ ಭಾಗವಾಗಲು ಅವರಿಗೆ ಸಹಾಯ ಮಾಡಬೇಕು. ಗಡಿ ಪ್ರದೇಶಗಳು ಸೇರಿದಂತೆ ಗ್ರಾಮಗಳಲ್ಲಿ ಸಂಘಟನೆಯನ್ನು ಬಲಪಡಿಸುವತ್ತ ಪಕ್ಷವು ಗಮನಹರಿಸಬೇಕು ಅದರ ನಾಯಕರು “ಎಲ್ಲಾ ಹಂತದ ಜನರನ್ನು ಭೇಟಿ ಮಾಡಬೇಕು” ಎಂದು ಪ್ರಧಾನಿ ಹೇಳಿರುವುದಾಗಿ ಫಡ್ನವಿಸ್ ಹೇಳಿದ್ದಾರೆ.

ಬಿಜೆಪಿಯು ಇನ್ನು ಮುಂದೆ ಕೇವಲ ರಾಜಕೀಯ ಚಳವಳಿಯಾಗಿರದೆ ಸಾಮಾಜಿಕ ಆಂದೋಲನವಾಗಿದೆ ಅದು ಸಾಮಾಜಿಕ-ಆರ್ಥಿಕ ಪರಿಸ್ಥಿತಿಗಳನ್ನು ಪರಿವರ್ತಿಸಲು ಕೆಲಸ ಮಾಡುತ್ತಿದೆ ಎಂದು ಅಧಿವೇಶನದಲ್ಲಿ ಭಾಗವಹಿಸಿದ್ದ 350 ಸಚಿವರು, ಮುಖಂಡರು ಮತ್ತು ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: BJP President : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅಧಿಕಾರಾವಧಿ ವಿಸ್ತರಣೆ

ಭಾರತದ ಅತ್ಯುತ್ತಮ ಯುಗ (“ಸರ್ವೋತ್ತಮ ಕಾಲ”) ಬರಲಿದೆ, “ನಾವು ಅದರ ಅಭಿವೃದ್ಧಿಗೆ ನಮ್ಮನ್ನು ಅರ್ಪಿಸಿಕೊಳ್ಳಬೇಕು” ಎಂದು ಪ್ರಧಾನಿ ಮೋದಿ ಹೇಳಿದರು. ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಎರಡನೇ ದಿನದಂದು, ಪಕ್ಷವು ಮುಂದಿನ ವರ್ಷ ಜೂನ್‌ವರೆಗೆ ಪಕ್ಷದ ಮುಖ್ಯಸ್ಥರಾಗಿ ಜೆಪಿ ನಡ್ಡಾ ಅಧಿಕಾರಾವಧಿಯನ್ನು ವಿಸ್ತರಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?