AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kargil Vijay Diwas: ಕಾರ್ಗಿಲ್​ ಯುದ್ಧದಲ್ಲಿ ಗೆಲುವು ತಂದುಕೊಟ್ಟ ಯೋಧರ ತ್ಯಾಗ ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ

PM Narendra Modi: ಟ್ವೀಟ್ ಮಾಡಿದ ಪ್ರಧಾನಿ ಮೋದಿ, ಕಾರ್ಗಿಲ್​ ವಿಜಯ ದಿವಸ್​​​ದ ಈ ದಿನದಂದು ನಾವು ಅಂದು ಹೋರಾಡಿದ ಯೋಧರ ತ್ಯಾಗ, ಶೌರ್ಯವನ್ನು ನೆನಪಿಸಿಕೊಳ್ಳಬೇಕು. ಅಂದು ರಾಷ್ಟ್ರರಕ್ಷಣೆಗಾಗಿ ಜೀವವನ್ನೇ ಸಮರ್ಪಿಸಿದವರಿಗೆ ಗೌರವ ಸಲ್ಲಿಸಬೇಕು ಎಂದು ಹೇಳಿದ್ದಾರೆ.

Kargil Vijay Diwas: ಕಾರ್ಗಿಲ್​ ಯುದ್ಧದಲ್ಲಿ ಗೆಲುವು ತಂದುಕೊಟ್ಟ ಯೋಧರ ತ್ಯಾಗ ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
TV9 Web
| Edited By: |

Updated on:Jul 26, 2021 | 10:30 AM

Share

ನವದೆಹಲಿ: ಇಂದು ಕಾರ್ಗಿಲ್​ ವಿಜಯ ದಿವಸ್(Kargil Vijay Diwas) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಟ್ವೀಟ್​ ಮಾಡಿ, ಅಂದು ಕಾರ್ಗಿಲ್ ಯುದ್ಧ (Kargil War)ದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸಿದ್ದಾರೆ. ಕಾರ್ಗಿಲ್​ ಯುದ್ಧದಲ್ಲಿ ಗೆಲುವು ತಂದುಕೊಟ್ಟ ಯೋಧರ ಶೌರ್ಯ, ತ್ಯಾಗವನ್ನು ನೆನಪಿಸಿಕೊಂಡ ಅವರು, ಅಂದಿನ ಯೋಧರ ಧೈರ್ಯ ಇಂದೂ ಕೂಡ ದೇಶವನ್ನು ಮುನ್ನಡೆಸುತ್ತಿದೆ ಎಂದು ಹೇಳಿದ್ದಾರೆ.

ಟ್ವೀಟ್ ಮಾಡಿದ ಪ್ರಧಾನಿ ಮೋದಿ, ಕಾರ್ಗಿಲ್​ ವಿಜಯ ದಿವಸ್​​​ದ ಈ ದಿನದಂದು ನಾವು ಅಂದು ಹೋರಾಡಿದ ಯೋಧರ ತ್ಯಾಗ, ಶೌರ್ಯವನ್ನು ನೆನಪಿಸಿಕೊಳ್ಳಬೇಕು. ಅಂದು ರಾಷ್ಟ್ರರಕ್ಷಣೆಗಾಗಿ ಜೀವವನ್ನೇ ಸಮರ್ಪಿಸಿದವರಿಗೆ ಗೌರವ ಸಲ್ಲಿಸಬೇಕು ಎಂದು ಹೇಳಿದ್ದಾರೆ. ಇನ್ನು ಈ ಬಗ್ಗೆ ಭಾನುವಾರ ಮನ್​ ಕೀ ಬಾತ್​ನಲ್ಲಿ ಕೂಡ ಮಾತನಾಡಿದ್ದ ಅವರು, ದೇಶ ಜುಲೈ 26ರಂದು ಕಾರ್ಗಿಲ್​ ವಿಜಯ ದಿವಸ್​​​ನ್ನು ಆಚರಿಸುತ್ತದೆ. ಯುದ್ಧದಲ್ಲಿ ಜಯತಂದುಕೊಟ್ಟ ಸೈನಿಕರಿಗೆ ದೇಶದ ಪ್ರತಿಯೊಬ್ಬರೂ ಗೌರವ ಸಲ್ಲಿಸಬೇಕು ಎಂದಿದ್ದರು. ಹಾಗೇ, ಭಾರತದ ಸೇನಾ ಬಲವನ್ನು ಶ್ಲಾಘಿಸಿದ್ದ ಅವರು, ಈ ಬಾರಿ ಭಾರತ ಕಾರ್ಗಿಲ್​ ವಿಜಯ ದಿವಸ್​ದ ಅಮೃತ ಮಹೋತ್ಸವವನ್ನು ಆಚರಿಸುತ್ತಿದೆ. ಕಾರ್ಗಿಲ್ ವಿಜಯದಿನದಂದು ಕಾರ್ಗಿಲ್​ ಕುರಿತಾದ ರೋಮಾಂಚನಕಾರಿ ಕತೆಗಳನ್ನು, ಯೋಧರ ಶೌರ್ಯದ ಕತೆಗಳನ್ನು ಜನರು ಓದಬೇಕು ಎಂದೂ ಮನ್​ ಕೀ ಬಾತ್​ನಲ್ಲಿ ತಿಳಿಸಿದ್ದರು.

ಈ ಬಾರಿ ಕಾರ್ಗಿಲ್​ ವಿಜಯ್​ ದಿವಸ್​ದ 22ನೇ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದೆ. ಇದನ್ನು ಕೇಂದ್ರ ಸರ್ಕಾರ ಅಮೃತ ಮಹೋತ್ಸವ ಅಂದರೆ ಜನರ ಚಳವಳಿಯನ್ನಾಗಿ ಆಚರಿಸುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ರಾಷ್ಟ್ರೀಯ ಅನುಷ್ಠಾನ ಸಮಿತಿ ನಿರ್ವಹಣೆ ಮಾಡಲಿದೆ.

ಇದನ್ನೂ ಓದಿ: Kargil Vijay Diwas: ಕಾರ್ಗಿಲ್​ ಯುದ್ಧದ ಗೆಲುವಿಗೆ 22 ವರ್ಷ; ಭಾರತದ ಧೀರ ಯೋಧರ ಸಾಹಸಗಾಥೆಯ ಕಿರು ಪರಿಚಯ ಇಲ್ಲಿದೆ

ಕೃಷ್ಣಾ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕ; ರಕ್ಷಣೆಗೆ ಸ್ಥಳೀಯರ ಹರಸಾಹಸ

Published On - 10:29 am, Mon, 26 July 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ