AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kargil Vijay Diwas: ಕಾರ್ಗಿಲ್​ ಯುದ್ಧದಲ್ಲಿ ಗೆಲುವು ತಂದುಕೊಟ್ಟ ಯೋಧರ ತ್ಯಾಗ ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ

PM Narendra Modi: ಟ್ವೀಟ್ ಮಾಡಿದ ಪ್ರಧಾನಿ ಮೋದಿ, ಕಾರ್ಗಿಲ್​ ವಿಜಯ ದಿವಸ್​​​ದ ಈ ದಿನದಂದು ನಾವು ಅಂದು ಹೋರಾಡಿದ ಯೋಧರ ತ್ಯಾಗ, ಶೌರ್ಯವನ್ನು ನೆನಪಿಸಿಕೊಳ್ಳಬೇಕು. ಅಂದು ರಾಷ್ಟ್ರರಕ್ಷಣೆಗಾಗಿ ಜೀವವನ್ನೇ ಸಮರ್ಪಿಸಿದವರಿಗೆ ಗೌರವ ಸಲ್ಲಿಸಬೇಕು ಎಂದು ಹೇಳಿದ್ದಾರೆ.

Kargil Vijay Diwas: ಕಾರ್ಗಿಲ್​ ಯುದ್ಧದಲ್ಲಿ ಗೆಲುವು ತಂದುಕೊಟ್ಟ ಯೋಧರ ತ್ಯಾಗ ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
TV9 Web
| Edited By: |

Updated on:Jul 26, 2021 | 10:30 AM

Share

ನವದೆಹಲಿ: ಇಂದು ಕಾರ್ಗಿಲ್​ ವಿಜಯ ದಿವಸ್(Kargil Vijay Diwas) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಟ್ವೀಟ್​ ಮಾಡಿ, ಅಂದು ಕಾರ್ಗಿಲ್ ಯುದ್ಧ (Kargil War)ದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸಿದ್ದಾರೆ. ಕಾರ್ಗಿಲ್​ ಯುದ್ಧದಲ್ಲಿ ಗೆಲುವು ತಂದುಕೊಟ್ಟ ಯೋಧರ ಶೌರ್ಯ, ತ್ಯಾಗವನ್ನು ನೆನಪಿಸಿಕೊಂಡ ಅವರು, ಅಂದಿನ ಯೋಧರ ಧೈರ್ಯ ಇಂದೂ ಕೂಡ ದೇಶವನ್ನು ಮುನ್ನಡೆಸುತ್ತಿದೆ ಎಂದು ಹೇಳಿದ್ದಾರೆ.

ಟ್ವೀಟ್ ಮಾಡಿದ ಪ್ರಧಾನಿ ಮೋದಿ, ಕಾರ್ಗಿಲ್​ ವಿಜಯ ದಿವಸ್​​​ದ ಈ ದಿನದಂದು ನಾವು ಅಂದು ಹೋರಾಡಿದ ಯೋಧರ ತ್ಯಾಗ, ಶೌರ್ಯವನ್ನು ನೆನಪಿಸಿಕೊಳ್ಳಬೇಕು. ಅಂದು ರಾಷ್ಟ್ರರಕ್ಷಣೆಗಾಗಿ ಜೀವವನ್ನೇ ಸಮರ್ಪಿಸಿದವರಿಗೆ ಗೌರವ ಸಲ್ಲಿಸಬೇಕು ಎಂದು ಹೇಳಿದ್ದಾರೆ. ಇನ್ನು ಈ ಬಗ್ಗೆ ಭಾನುವಾರ ಮನ್​ ಕೀ ಬಾತ್​ನಲ್ಲಿ ಕೂಡ ಮಾತನಾಡಿದ್ದ ಅವರು, ದೇಶ ಜುಲೈ 26ರಂದು ಕಾರ್ಗಿಲ್​ ವಿಜಯ ದಿವಸ್​​​ನ್ನು ಆಚರಿಸುತ್ತದೆ. ಯುದ್ಧದಲ್ಲಿ ಜಯತಂದುಕೊಟ್ಟ ಸೈನಿಕರಿಗೆ ದೇಶದ ಪ್ರತಿಯೊಬ್ಬರೂ ಗೌರವ ಸಲ್ಲಿಸಬೇಕು ಎಂದಿದ್ದರು. ಹಾಗೇ, ಭಾರತದ ಸೇನಾ ಬಲವನ್ನು ಶ್ಲಾಘಿಸಿದ್ದ ಅವರು, ಈ ಬಾರಿ ಭಾರತ ಕಾರ್ಗಿಲ್​ ವಿಜಯ ದಿವಸ್​ದ ಅಮೃತ ಮಹೋತ್ಸವವನ್ನು ಆಚರಿಸುತ್ತಿದೆ. ಕಾರ್ಗಿಲ್ ವಿಜಯದಿನದಂದು ಕಾರ್ಗಿಲ್​ ಕುರಿತಾದ ರೋಮಾಂಚನಕಾರಿ ಕತೆಗಳನ್ನು, ಯೋಧರ ಶೌರ್ಯದ ಕತೆಗಳನ್ನು ಜನರು ಓದಬೇಕು ಎಂದೂ ಮನ್​ ಕೀ ಬಾತ್​ನಲ್ಲಿ ತಿಳಿಸಿದ್ದರು.

ಈ ಬಾರಿ ಕಾರ್ಗಿಲ್​ ವಿಜಯ್​ ದಿವಸ್​ದ 22ನೇ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದೆ. ಇದನ್ನು ಕೇಂದ್ರ ಸರ್ಕಾರ ಅಮೃತ ಮಹೋತ್ಸವ ಅಂದರೆ ಜನರ ಚಳವಳಿಯನ್ನಾಗಿ ಆಚರಿಸುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ರಾಷ್ಟ್ರೀಯ ಅನುಷ್ಠಾನ ಸಮಿತಿ ನಿರ್ವಹಣೆ ಮಾಡಲಿದೆ.

ಇದನ್ನೂ ಓದಿ: Kargil Vijay Diwas: ಕಾರ್ಗಿಲ್​ ಯುದ್ಧದ ಗೆಲುವಿಗೆ 22 ವರ್ಷ; ಭಾರತದ ಧೀರ ಯೋಧರ ಸಾಹಸಗಾಥೆಯ ಕಿರು ಪರಿಚಯ ಇಲ್ಲಿದೆ

ಕೃಷ್ಣಾ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕ; ರಕ್ಷಣೆಗೆ ಸ್ಥಳೀಯರ ಹರಸಾಹಸ

Published On - 10:29 am, Mon, 26 July 21

Follow Us
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ