AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಂಗಕ್ಕೆ ಅಗೌರವ ತೋರುವ ಉದ್ದೇಶವಿಲ್ಲ; NCERT ಪಠ್ಯಪುಸ್ತಕ ವಿವಾದದ ತನಿಖೆಗೆ ಕೇಂದ್ರ ಸರ್ಕಾರ ಆದೇಶ

ನ್ಯಾಯಾಂಗದಲ್ಲಿನ ಭ್ರಷ್ಟಾಚಾರ ಎಂಬ ವಿವಾದಾತ್ಮಕ ಪಠ್ಯವನ್ನು ಶಾಲಾ ಪುಸ್ತಕದಲ್ಲಿ ಸೇರಿಸಿರುವುದರಿಂದ ಉಂಟಾಗಿರುವ ಹಾನಿಯನ್ನು ತಡೆಯಲು NCERT ಪ್ರಯತ್ನಿಸುತ್ತಿದೆ. ಈಗಾಗಲೇ ಈ ಬಗ್ಗೆ ಸುಪ್ರೀಂ ಕೋರ್ಟ್ ಕೂಡ ತರಾಟೆಗೆ ತೆಗೆದುಕೊಂಡಿದೆ. ಇದರ ನಡುವೆ ಇಂದು ಪ್ರತಿಕ್ರಿಯೆ ನೀಡಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ನ್ಯಾಯಾಂಗವನ್ನು ಅಗೌರವಿಸುವ ಉದ್ದೇಶ ಕೇಂದ್ರ ಸರ್ಕಾರಕ್ಕೆ ಇಲ್ಲ ಎಂದು ಹೇಳಿದ್ದಾರೆ. ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ ಪ್ರಕಟಿಸಿದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಂಬ ಪಠ್ಯವನ್ನು ಸೇರಿಸಿದ್ದರಿಂದ ವಿವಾದ ಭುಗಿಲೆದ್ದಿತು.

ನ್ಯಾಯಾಂಗಕ್ಕೆ ಅಗೌರವ ತೋರುವ ಉದ್ದೇಶವಿಲ್ಲ; NCERT ಪಠ್ಯಪುಸ್ತಕ ವಿವಾದದ ತನಿಖೆಗೆ ಕೇಂದ್ರ ಸರ್ಕಾರ ಆದೇಶ
Dharmendra Pradhan
ಸುಷ್ಮಾ ಚಕ್ರೆ
|

Updated on: Feb 26, 2026 | 9:47 PM

Share

ನವದೆಹಲಿ, ಫೆಬ್ರವರಿ 26: ಸುಪ್ರೀಂ ಕೋರ್ಟ್ “ನ್ಯಾಯಾಂಗದಲ್ಲಿ ಭ್ರಷ್ಟಾಚಾರ” ಎಂಬ ವಿವಾದಾತ್ಮಕ ಅಧ್ಯಾಯವನ್ನು NCERT 8​​ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಸೇರಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿತ್ತು. ಈ ಬಗ್ಗೆ ನ್ಯಾಯಾಂಗ ನಿಂದನೆ ನೋಟಿಸ್‌ಗಳನ್ನು ನೀಡಿದ ನಂತರ ಪ್ರತಿಕ್ರಿಯಿಸಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸರ್ಕಾರವು ನ್ಯಾಯಾಲಯದ ನಿರ್ದೇಶನಗಳನ್ನು ಸಂಪೂರ್ಣವಾಗಿ ಪಾಲಿಸುತ್ತದೆ, ನಮ್ಮ ಸರ್ಕಾರಕ್ಕೆ ನ್ಯಾಯಾಂಗವನ್ನು ಅಗೌರವಿಸುವ ಉದ್ದೇಶವಿಲ್ಲ ಎಂದು ಹೇಳಿದ್ದಾರೆ.

ನ್ಯಾಯಾಂಗದ ಬಗ್ಗೆ ಬಹಳ ಗೌರವವಿದೆ. ಆಗಿರುವ ಅಚಾತುರ್ಯವನ್ನು ತಕ್ಷಣ ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಲು ಈಗಾಗಲೇ ಆದೇಶಿಸಲಾಗಿದೆ. 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಪಠ್ಯ ಸೇರಿಸಿದ್ದರಿಂದ ಸುಪ್ರೀಂ ಕೋರ್ಟ್ ಆ ಪುಸ್ತಕದ ಮೇಲೆ ಸಂಪೂರ್ಣ ನಿಷೇಧ ಹೇರಿತು.

ಇದನ್ನೂ ಓದಿ: ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದ ಟ್ರಂಪ್; ಅಮೆರಿಕದ ಸುಂಕ ಮತ್ತೆ ಶೇ. 15ಕ್ಕೆ ಹೆಚ್ಚಳ

ಈ ವಿಷಯವನ್ನು ತಮ್ಮ ಗಮನಕ್ಕೆ ತಂದ ತಕ್ಷಣ ತ್ವರಿತ ಕ್ರಮ ಕೈಗೊಳ್ಳಲು ಆದೇಶಿಸಿದ್ದೇನೆ ಎಂದು ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದರು. ಪುಸ್ತಕದ ಎಲ್ಲಾ ಪ್ರತಿಗಳನ್ನು ಹಿಂಪಡೆಯಲು ಮತ್ತು ಅವು ಶಾಲೆಗಳಿಗೆ ತಲುಪದಂತೆ ನೋಡಿಕೊಳ್ಳಲು NCERTಗೆ ಸೂಚಿಸಲಾಗಿದೆ ಎಂದು ಅವರು ದೃಢಪಡಿಸಿದ್ದಾರೆ.

ಅಧ್ಯಾಯವನ್ನು ಹೇಗೆ ತಯಾರಿಸಲಾಗಿದೆ ಮತ್ತು ಅನುಮೋದಿಸಲಾಗಿದೆ ಎಂಬುದರ ಕುರಿತು ತನಿಖೆ ನಡೆಸಲಾಗುವುದು ಎಂದು ಅವರು ಘೋಷಿಸಿದರು. ಇಂತಹ ದೋಷ ಮರುಕಳಿಸುವುದಿಲ್ಲ ಎಂದು ನ್ಯಾಯಾಂಗಕ್ಕೆ ಭರವಸೆ ನೀಡಿದ ಅವರು ಹೊಣೆಗಾರರೆಂದು ಕಂಡುಬಂದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?
‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ
‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ
ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್
ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ