AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನ್​ ನಿರಾಶ್ರಿತರಿಗೆ ಅಗತ್ಯ ನೆರವು ನೀಡೋಣ, ಹಿಂದು-ಸಿಖ್​​ ಸಮುದಾಯಕ್ಕೂ ಸಹಾಯ ಮಾಡೋಣ: ಪಿಎಂ ಮೋದಿ

ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗೆ ಸಂಬಂಧ ಇನ್ನೂ ಪ್ರಧಾನಿ ನರೇಂದ್ರ ಮೋದಿ ಯಾವುದೇ ಬಹಿರಂಗ ಹೇಳಿಕೆ ನೀಡಿಲ್ಲ. ಆದರೆ ನಿನ್ನೆ ತಡರಾತ್ರಿವರೆಗೂ ವಿವಿಧ ಸಚಿವರು, ಅಧಿಕಾರಿಗಳೊಟ್ಟಿಗೆ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಫ್ಘಾನ್​ ನಿರಾಶ್ರಿತರಿಗೆ ಅಗತ್ಯ ನೆರವು ನೀಡೋಣ, ಹಿಂದು-ಸಿಖ್​​ ಸಮುದಾಯಕ್ಕೂ ಸಹಾಯ ಮಾಡೋಣ: ಪಿಎಂ ಮೋದಿ
ಭದ್ರತಾ ಸಂಪುಟ ಸಮಿತಿ ಸಭೆ ನಡೆಸಿದ ಪ್ರಧಾನಿ ಮೋದಿ
TV9 Web
| Edited By: |

Updated on:Aug 18, 2021 | 10:52 AM

Share

ಅಫ್ಘಾನಿಸ್ತಾನವೀಗ ತಾಲೀಬಾನ್​ ವಶವಾಗಿದೆ. ಅಲ್ಲಿರುವ ಭಾರತೀಯರನ್ನು ಸುರಕ್ಷಿತವಾಗಿ ಮರಳಿ ಕರೆದುಕೊಂಡು ಬರುವುದು ದೊಡ್ಡ ಸವಾಲಿನ ಕೆಲಸವಾಗಿದ್ದರೂ, ಕೇಂದ್ರ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಂಡಿದೆ. ಅಫ್ಘಾನ್​​ನಲ್ಲಿರುವ ಭಾರತೀಯರಿಗಾಗಿ ಸಹಾಯವಾಣಿಯನ್ನೂ ಪ್ರಾರಂಭಿಸಿದೆ. ಅಫ್ಘಾನಿಸ್ತಾನದಲ್ಲಿ ಇಷ್ಟೆಲ್ಲ ದೊಡ್ಡ ಬೆಳವಣಿಗೆಗಳಾಗುತ್ತಿದ್ದರೂ, ಈಗಾಗಲೇ ಹಲವು ದೇಶಗಳ ನಾಯಕರು ಪ್ರತಿಕ್ರಿಯಿಸಿದ್ದರೂ ಭಾರತದ ಪ್ರಧಾನಿ ನರೇಂದ್ರ ಮೋದಿ ಯಾವುದೇ ಹೇಳಿಕೆಯನ್ನೂ ನೀಡಿಲ್ಲ. ಆದರೆ ನಿನ್ನೆ ಅಫ್ಘಾನ್​ ಬೆಳವಣಿಗೆ ಸಂಬಂಧ ಭದ್ರತಾ ಸಂಪುಟ ಸಮಿತಿ (CCS)ಯ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಅಫ್ಘಾನಿಸ್ತಾನದಲ್ಲಿ ಇರುವ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳಿ ಮತ್ತು ನಿರಾಶ್ರಿತರಾಗಿ, ಭಾರತದ ನೆರವು ಬಯಸುತ್ತಿರುವ ಅಫ್ಘಾನ್​ ಸಹೋದರ, ಸೋದರಿಯರ ಸಹಾಯಕ್ಕೆ ನಿಲ್ಲಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿರುವ ಭಾರತೀಯರ ರಕ್ಷಣೆಯೊಂದೇ ನಮ್ಮ ಉದ್ದೇಶವಾಗಿರಬಾರದು. ಇದೀಗ ನಿರಾಶ್ರಿತರಾಗಿ, ಭಾರತಕ್ಕೆ ಬರಲು ಇಚ್ಛಿಸುತ್ತಿರುವ ಅಲ್ಲಿನ ಅಲ್ಪಸಂಖ್ಯಾತರಾದ ಹಿಂದು ಮತ್ತು ಸಿಖ್​ ಸಮುದಾಯವನ್ನೂ ನಾವು ಸುರಕ್ಷಿತ ಮಾಡಬೇಕು. ಅದರೊಂದಿಗೆ ಅಫ್ಘಾನ್​​ ಜನರಿಗೂ ನಮ್ಮ ಕೈಲಾದ ನೆರವು ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ಸಭೆಯಲ್ಲಿ ಹೇಳಿದ್ದಾರೆಂದು ಮೂಲಗಳು ತಿಳಿಸಿವೆ.

ಅಫ್ಘಾನಿಸ್ತಾನದ ಕಾಬೂಲ್​​ನಲ್ಲಿದ್ದ ಭಾರತೀಯ ರಾಯಭಾರಿ ರುದ್ರೇಂದ್ರ ಟಂಡನ್​ ಸೇರಿ, ಧೂತಾವಾಸ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 140 ಸಿಬ್ಬಂದಿ, ಇಂಡೋ-ಟಿಬೆಟಿಯನ್​ ಬಾರ್ಡರ್​ ಪೊಲೀಸ್​​, ನಾಲ್ವರು ಭಾರತೀಯ ಮಾಧ್ಯಮ ಸಿಬ್ಬಂದಿ ನಿನ್ನೆ ಸಂಜೆ ಹೊತ್ತಿಗೆ ಕಾಬೂಲ್​​ನಿಂದ ದೆಹಲಿಗೆ ಬಂದಿದ್ದಾರೆ. ರಾಯಭಾರಿ ರುದ್ರೇಂದ್ರ ಟಂಡನ್​ ಅವರು ಪ್ರಧಾನಿ ನರೇಂದ್ರ ಮೋದಿ ಕರೆದಿದ್ದ ಭದ್ರತಾ ಸಂಪುಟ ಸಮಿತಿ ಸಭೆಯಲ್ಲೂ ಪಾಲ್ಗೊಂಡು, ಅಫ್ಘಾನ್​ ಪರಿಸ್ಥಿತಿಯ ಬಗ್ಗೆ ಮೋದಿಯವರಿಗೆ ವಿವರಿಸಿದ್ದಾರೆ ಎನ್ನಲಾಗಿದೆ.

ಈ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್​, ವಿದೇಶಾಂಗ ವ್ಯವಹಾರಗಳ ಸಚಿವ ಎಸ್​.ಜಯಶಂಕರ್​, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿ ಇನ್ನೂ ಹಲವು ಪ್ರಮುಖರು ಇದ್ದರು. ಸಭೆಯಲ್ಲಿ ಅಪ್ಘಾನಿಸ್ತಾನದ ಪರಿಸ್ಥಿತಿಯ ಬಗ್ಗೆ ಭದ್ರತಾ ಸಂಪುಟ ಸಮಿತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಎಲ್ಲ ರೀತಿಯ ಮಾಹಿತಿಯನ್ನೂ ನೀಡಿದೆ.

ಇದನ್ನೂ ಓದಿ: ಶನಿ ಗ್ರಹದಂತೆ ಕಂಡ ಚಂದ್ರ! ಅಚ್ಚರಿಯ ವಿದ್ಯಮಾನದ ಈ ಚಿತ್ರವನ್ನು ನೋಡಿ

Alia Bhatt: ಚಿತ್ರೀಕರಣದ ಸೆಟ್​ಗೆ ರಿಕ್ಷಾದಲ್ಲಿ ಬಂದ ಆಲಿಯಾ; ಅದೇನು ದೊಡ್ಡ ವಿಷಯ ಅಲ್ಲ ಎಂದು ಕುಟುಕಿದ ನೆಟ್ಟಿಗರು

Published On - 10:28 am, Wed, 18 August 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್