AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನ್​ ನಿರಾಶ್ರಿತರಿಗೆ ಅಗತ್ಯ ನೆರವು ನೀಡೋಣ, ಹಿಂದು-ಸಿಖ್​​ ಸಮುದಾಯಕ್ಕೂ ಸಹಾಯ ಮಾಡೋಣ: ಪಿಎಂ ಮೋದಿ

ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗೆ ಸಂಬಂಧ ಇನ್ನೂ ಪ್ರಧಾನಿ ನರೇಂದ್ರ ಮೋದಿ ಯಾವುದೇ ಬಹಿರಂಗ ಹೇಳಿಕೆ ನೀಡಿಲ್ಲ. ಆದರೆ ನಿನ್ನೆ ತಡರಾತ್ರಿವರೆಗೂ ವಿವಿಧ ಸಚಿವರು, ಅಧಿಕಾರಿಗಳೊಟ್ಟಿಗೆ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಫ್ಘಾನ್​ ನಿರಾಶ್ರಿತರಿಗೆ ಅಗತ್ಯ ನೆರವು ನೀಡೋಣ, ಹಿಂದು-ಸಿಖ್​​ ಸಮುದಾಯಕ್ಕೂ ಸಹಾಯ ಮಾಡೋಣ: ಪಿಎಂ ಮೋದಿ
ಭದ್ರತಾ ಸಂಪುಟ ಸಮಿತಿ ಸಭೆ ನಡೆಸಿದ ಪ್ರಧಾನಿ ಮೋದಿ
TV9 Web
| Edited By: |

Updated on:Aug 18, 2021 | 10:52 AM

Share

ಅಫ್ಘಾನಿಸ್ತಾನವೀಗ ತಾಲೀಬಾನ್​ ವಶವಾಗಿದೆ. ಅಲ್ಲಿರುವ ಭಾರತೀಯರನ್ನು ಸುರಕ್ಷಿತವಾಗಿ ಮರಳಿ ಕರೆದುಕೊಂಡು ಬರುವುದು ದೊಡ್ಡ ಸವಾಲಿನ ಕೆಲಸವಾಗಿದ್ದರೂ, ಕೇಂದ್ರ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಂಡಿದೆ. ಅಫ್ಘಾನ್​​ನಲ್ಲಿರುವ ಭಾರತೀಯರಿಗಾಗಿ ಸಹಾಯವಾಣಿಯನ್ನೂ ಪ್ರಾರಂಭಿಸಿದೆ. ಅಫ್ಘಾನಿಸ್ತಾನದಲ್ಲಿ ಇಷ್ಟೆಲ್ಲ ದೊಡ್ಡ ಬೆಳವಣಿಗೆಗಳಾಗುತ್ತಿದ್ದರೂ, ಈಗಾಗಲೇ ಹಲವು ದೇಶಗಳ ನಾಯಕರು ಪ್ರತಿಕ್ರಿಯಿಸಿದ್ದರೂ ಭಾರತದ ಪ್ರಧಾನಿ ನರೇಂದ್ರ ಮೋದಿ ಯಾವುದೇ ಹೇಳಿಕೆಯನ್ನೂ ನೀಡಿಲ್ಲ. ಆದರೆ ನಿನ್ನೆ ಅಫ್ಘಾನ್​ ಬೆಳವಣಿಗೆ ಸಂಬಂಧ ಭದ್ರತಾ ಸಂಪುಟ ಸಮಿತಿ (CCS)ಯ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಅಫ್ಘಾನಿಸ್ತಾನದಲ್ಲಿ ಇರುವ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳಿ ಮತ್ತು ನಿರಾಶ್ರಿತರಾಗಿ, ಭಾರತದ ನೆರವು ಬಯಸುತ್ತಿರುವ ಅಫ್ಘಾನ್​ ಸಹೋದರ, ಸೋದರಿಯರ ಸಹಾಯಕ್ಕೆ ನಿಲ್ಲಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿರುವ ಭಾರತೀಯರ ರಕ್ಷಣೆಯೊಂದೇ ನಮ್ಮ ಉದ್ದೇಶವಾಗಿರಬಾರದು. ಇದೀಗ ನಿರಾಶ್ರಿತರಾಗಿ, ಭಾರತಕ್ಕೆ ಬರಲು ಇಚ್ಛಿಸುತ್ತಿರುವ ಅಲ್ಲಿನ ಅಲ್ಪಸಂಖ್ಯಾತರಾದ ಹಿಂದು ಮತ್ತು ಸಿಖ್​ ಸಮುದಾಯವನ್ನೂ ನಾವು ಸುರಕ್ಷಿತ ಮಾಡಬೇಕು. ಅದರೊಂದಿಗೆ ಅಫ್ಘಾನ್​​ ಜನರಿಗೂ ನಮ್ಮ ಕೈಲಾದ ನೆರವು ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ಸಭೆಯಲ್ಲಿ ಹೇಳಿದ್ದಾರೆಂದು ಮೂಲಗಳು ತಿಳಿಸಿವೆ.

ಅಫ್ಘಾನಿಸ್ತಾನದ ಕಾಬೂಲ್​​ನಲ್ಲಿದ್ದ ಭಾರತೀಯ ರಾಯಭಾರಿ ರುದ್ರೇಂದ್ರ ಟಂಡನ್​ ಸೇರಿ, ಧೂತಾವಾಸ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 140 ಸಿಬ್ಬಂದಿ, ಇಂಡೋ-ಟಿಬೆಟಿಯನ್​ ಬಾರ್ಡರ್​ ಪೊಲೀಸ್​​, ನಾಲ್ವರು ಭಾರತೀಯ ಮಾಧ್ಯಮ ಸಿಬ್ಬಂದಿ ನಿನ್ನೆ ಸಂಜೆ ಹೊತ್ತಿಗೆ ಕಾಬೂಲ್​​ನಿಂದ ದೆಹಲಿಗೆ ಬಂದಿದ್ದಾರೆ. ರಾಯಭಾರಿ ರುದ್ರೇಂದ್ರ ಟಂಡನ್​ ಅವರು ಪ್ರಧಾನಿ ನರೇಂದ್ರ ಮೋದಿ ಕರೆದಿದ್ದ ಭದ್ರತಾ ಸಂಪುಟ ಸಮಿತಿ ಸಭೆಯಲ್ಲೂ ಪಾಲ್ಗೊಂಡು, ಅಫ್ಘಾನ್​ ಪರಿಸ್ಥಿತಿಯ ಬಗ್ಗೆ ಮೋದಿಯವರಿಗೆ ವಿವರಿಸಿದ್ದಾರೆ ಎನ್ನಲಾಗಿದೆ.

ಈ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್​, ವಿದೇಶಾಂಗ ವ್ಯವಹಾರಗಳ ಸಚಿವ ಎಸ್​.ಜಯಶಂಕರ್​, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿ ಇನ್ನೂ ಹಲವು ಪ್ರಮುಖರು ಇದ್ದರು. ಸಭೆಯಲ್ಲಿ ಅಪ್ಘಾನಿಸ್ತಾನದ ಪರಿಸ್ಥಿತಿಯ ಬಗ್ಗೆ ಭದ್ರತಾ ಸಂಪುಟ ಸಮಿತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಎಲ್ಲ ರೀತಿಯ ಮಾಹಿತಿಯನ್ನೂ ನೀಡಿದೆ.

ಇದನ್ನೂ ಓದಿ: ಶನಿ ಗ್ರಹದಂತೆ ಕಂಡ ಚಂದ್ರ! ಅಚ್ಚರಿಯ ವಿದ್ಯಮಾನದ ಈ ಚಿತ್ರವನ್ನು ನೋಡಿ

Alia Bhatt: ಚಿತ್ರೀಕರಣದ ಸೆಟ್​ಗೆ ರಿಕ್ಷಾದಲ್ಲಿ ಬಂದ ಆಲಿಯಾ; ಅದೇನು ದೊಡ್ಡ ವಿಷಯ ಅಲ್ಲ ಎಂದು ಕುಟುಕಿದ ನೆಟ್ಟಿಗರು

Published On - 10:28 am, Wed, 18 August 21

Follow Us
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!