AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನ್​ ನಿರಾಶ್ರಿತರಿಗೆ ಅಗತ್ಯ ನೆರವು ನೀಡೋಣ, ಹಿಂದು-ಸಿಖ್​​ ಸಮುದಾಯಕ್ಕೂ ಸಹಾಯ ಮಾಡೋಣ: ಪಿಎಂ ಮೋದಿ

ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗೆ ಸಂಬಂಧ ಇನ್ನೂ ಪ್ರಧಾನಿ ನರೇಂದ್ರ ಮೋದಿ ಯಾವುದೇ ಬಹಿರಂಗ ಹೇಳಿಕೆ ನೀಡಿಲ್ಲ. ಆದರೆ ನಿನ್ನೆ ತಡರಾತ್ರಿವರೆಗೂ ವಿವಿಧ ಸಚಿವರು, ಅಧಿಕಾರಿಗಳೊಟ್ಟಿಗೆ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಫ್ಘಾನ್​ ನಿರಾಶ್ರಿತರಿಗೆ ಅಗತ್ಯ ನೆರವು ನೀಡೋಣ, ಹಿಂದು-ಸಿಖ್​​ ಸಮುದಾಯಕ್ಕೂ ಸಹಾಯ ಮಾಡೋಣ: ಪಿಎಂ ಮೋದಿ
ಭದ್ರತಾ ಸಂಪುಟ ಸಮಿತಿ ಸಭೆ ನಡೆಸಿದ ಪ್ರಧಾನಿ ಮೋದಿ
TV9 Web
| Edited By: |

Updated on:Aug 18, 2021 | 10:52 AM

Share

ಅಫ್ಘಾನಿಸ್ತಾನವೀಗ ತಾಲೀಬಾನ್​ ವಶವಾಗಿದೆ. ಅಲ್ಲಿರುವ ಭಾರತೀಯರನ್ನು ಸುರಕ್ಷಿತವಾಗಿ ಮರಳಿ ಕರೆದುಕೊಂಡು ಬರುವುದು ದೊಡ್ಡ ಸವಾಲಿನ ಕೆಲಸವಾಗಿದ್ದರೂ, ಕೇಂದ್ರ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಂಡಿದೆ. ಅಫ್ಘಾನ್​​ನಲ್ಲಿರುವ ಭಾರತೀಯರಿಗಾಗಿ ಸಹಾಯವಾಣಿಯನ್ನೂ ಪ್ರಾರಂಭಿಸಿದೆ. ಅಫ್ಘಾನಿಸ್ತಾನದಲ್ಲಿ ಇಷ್ಟೆಲ್ಲ ದೊಡ್ಡ ಬೆಳವಣಿಗೆಗಳಾಗುತ್ತಿದ್ದರೂ, ಈಗಾಗಲೇ ಹಲವು ದೇಶಗಳ ನಾಯಕರು ಪ್ರತಿಕ್ರಿಯಿಸಿದ್ದರೂ ಭಾರತದ ಪ್ರಧಾನಿ ನರೇಂದ್ರ ಮೋದಿ ಯಾವುದೇ ಹೇಳಿಕೆಯನ್ನೂ ನೀಡಿಲ್ಲ. ಆದರೆ ನಿನ್ನೆ ಅಫ್ಘಾನ್​ ಬೆಳವಣಿಗೆ ಸಂಬಂಧ ಭದ್ರತಾ ಸಂಪುಟ ಸಮಿತಿ (CCS)ಯ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಅಫ್ಘಾನಿಸ್ತಾನದಲ್ಲಿ ಇರುವ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳಿ ಮತ್ತು ನಿರಾಶ್ರಿತರಾಗಿ, ಭಾರತದ ನೆರವು ಬಯಸುತ್ತಿರುವ ಅಫ್ಘಾನ್​ ಸಹೋದರ, ಸೋದರಿಯರ ಸಹಾಯಕ್ಕೆ ನಿಲ್ಲಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿರುವ ಭಾರತೀಯರ ರಕ್ಷಣೆಯೊಂದೇ ನಮ್ಮ ಉದ್ದೇಶವಾಗಿರಬಾರದು. ಇದೀಗ ನಿರಾಶ್ರಿತರಾಗಿ, ಭಾರತಕ್ಕೆ ಬರಲು ಇಚ್ಛಿಸುತ್ತಿರುವ ಅಲ್ಲಿನ ಅಲ್ಪಸಂಖ್ಯಾತರಾದ ಹಿಂದು ಮತ್ತು ಸಿಖ್​ ಸಮುದಾಯವನ್ನೂ ನಾವು ಸುರಕ್ಷಿತ ಮಾಡಬೇಕು. ಅದರೊಂದಿಗೆ ಅಫ್ಘಾನ್​​ ಜನರಿಗೂ ನಮ್ಮ ಕೈಲಾದ ನೆರವು ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ಸಭೆಯಲ್ಲಿ ಹೇಳಿದ್ದಾರೆಂದು ಮೂಲಗಳು ತಿಳಿಸಿವೆ.

ಅಫ್ಘಾನಿಸ್ತಾನದ ಕಾಬೂಲ್​​ನಲ್ಲಿದ್ದ ಭಾರತೀಯ ರಾಯಭಾರಿ ರುದ್ರೇಂದ್ರ ಟಂಡನ್​ ಸೇರಿ, ಧೂತಾವಾಸ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 140 ಸಿಬ್ಬಂದಿ, ಇಂಡೋ-ಟಿಬೆಟಿಯನ್​ ಬಾರ್ಡರ್​ ಪೊಲೀಸ್​​, ನಾಲ್ವರು ಭಾರತೀಯ ಮಾಧ್ಯಮ ಸಿಬ್ಬಂದಿ ನಿನ್ನೆ ಸಂಜೆ ಹೊತ್ತಿಗೆ ಕಾಬೂಲ್​​ನಿಂದ ದೆಹಲಿಗೆ ಬಂದಿದ್ದಾರೆ. ರಾಯಭಾರಿ ರುದ್ರೇಂದ್ರ ಟಂಡನ್​ ಅವರು ಪ್ರಧಾನಿ ನರೇಂದ್ರ ಮೋದಿ ಕರೆದಿದ್ದ ಭದ್ರತಾ ಸಂಪುಟ ಸಮಿತಿ ಸಭೆಯಲ್ಲೂ ಪಾಲ್ಗೊಂಡು, ಅಫ್ಘಾನ್​ ಪರಿಸ್ಥಿತಿಯ ಬಗ್ಗೆ ಮೋದಿಯವರಿಗೆ ವಿವರಿಸಿದ್ದಾರೆ ಎನ್ನಲಾಗಿದೆ.

ಈ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್​, ವಿದೇಶಾಂಗ ವ್ಯವಹಾರಗಳ ಸಚಿವ ಎಸ್​.ಜಯಶಂಕರ್​, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿ ಇನ್ನೂ ಹಲವು ಪ್ರಮುಖರು ಇದ್ದರು. ಸಭೆಯಲ್ಲಿ ಅಪ್ಘಾನಿಸ್ತಾನದ ಪರಿಸ್ಥಿತಿಯ ಬಗ್ಗೆ ಭದ್ರತಾ ಸಂಪುಟ ಸಮಿತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಎಲ್ಲ ರೀತಿಯ ಮಾಹಿತಿಯನ್ನೂ ನೀಡಿದೆ.

ಇದನ್ನೂ ಓದಿ: ಶನಿ ಗ್ರಹದಂತೆ ಕಂಡ ಚಂದ್ರ! ಅಚ್ಚರಿಯ ವಿದ್ಯಮಾನದ ಈ ಚಿತ್ರವನ್ನು ನೋಡಿ

Alia Bhatt: ಚಿತ್ರೀಕರಣದ ಸೆಟ್​ಗೆ ರಿಕ್ಷಾದಲ್ಲಿ ಬಂದ ಆಲಿಯಾ; ಅದೇನು ದೊಡ್ಡ ವಿಷಯ ಅಲ್ಲ ಎಂದು ಕುಟುಕಿದ ನೆಟ್ಟಿಗರು

Published On - 10:28 am, Wed, 18 August 21

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ