AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ ಜಾತಿ ಗಣತಿ ಬೇಕು ಎಂದು ಒತ್ತಾಯಿಸಿದ ನಿತೀಶ್ ಕುಮಾರ್; ದೇಶದಾದ್ಯಂತ ಬೇಕು ಎಂದ ತೇಜಸ್ವಿ ಯಾದವ್

Caste Census: ಸಭೆಯ ನಂತರ ಮಾತನಾಡಿದ ತೇಜಸ್ವಿ "ನಮ್ಮ ನಿಯೋಗವು ಇಂದು (ಬಿಹಾರ) ರಾಜ್ಯದಲ್ಲಿ ಮಾತ್ರವಲ್ಲದೆ ಇಡೀ ದೇಶದಲ್ಲಿ ಜಾತಿ ಗಣತಿಗಾಗಿ ಪ್ರಧಾನಿಯನ್ನು ಭೇಟಿ ಮಾಡಿದೆ. ನಾವು ಈಗ ಈ ಕುರಿತು ನಿರ್ಧಾರಕ್ಕಾಗಿ ಕಾಯುತ್ತಿದ್ದೇವೆ ಎಂದಿದ್ದಾರೆ.

ಬಿಹಾರದಲ್ಲಿ ಜಾತಿ ಗಣತಿ ಬೇಕು ಎಂದು ಒತ್ತಾಯಿಸಿದ ನಿತೀಶ್ ಕುಮಾರ್; ದೇಶದಾದ್ಯಂತ ಬೇಕು ಎಂದ ತೇಜಸ್ವಿ ಯಾದವ್
ನಿತೀಶ್ ಕುಮಾರ್
TV9 Web
| Edited By: |

Updated on: Aug 23, 2021 | 1:29 PM

Share

ದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ( Nitish Kumar), ಆರ್‌ಜೆಡಿಯ ತೇಜಸ್ವಿ ಯಾದವ್ (Tejashwi Yadav), ಎಚ್‌ಎಎಮ್‌ನ ಜಿತನ್ ರಾಮ್ ಮಾಂಝಿ  ಮತ್ತು ವಿಐಪಿಯ ಮುಖೇಶ್ ಸಹಾನಿ ಸೇರಿದಂತೆ ಬಿಹಾರದ 10 ರಾಜಕೀಯ ಪಕ್ಷಗಳ ನಾಯಕರ ನಿಯೋಗವು ನವದೆಹಲಿಯಲ್ಲಿ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಜಾತಿ ಆಧಾರಿತ ಜನಗಣತಿ (caste census) ನಡೆಸುವ ಕುರಿತು ಚರ್ಚಿಸಿದೆ. ” ನಿಯೋಗದ ಎಲ್ಲ ಸದಸ್ಯರ ಮಾತನ್ನು ಪ್ರಧಾನಿ ಆಲಿಸಿದರು. ನಾವು ಅದರ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಪ್ರಧಾನ ಮಂತ್ರಿಯನ್ನು ಒತ್ತಾಯಿಸಿದ್ದೇವೆ ಮತ್ತು ಜಾತಿ ಗಣತಿ ಕುರಿತು ರಾಜ್ಯ ವಿಧಾನಸಭೆಯಲ್ಲಿ ಎರಡು ಬಾರಿ ನಿರ್ಣಯಗಳನ್ನು ಹೇಗೆ ಅಂಗೀಕರಿಸಲಾಗಿದೆ ಎಂಬುದರ ಕುರಿತು ನಾವು ಅವರಿಗೆ ತಿಳಿಸಿದ್ದೇವೆ ಎಂದು ನಿತೀಶ್ ಕುಮಾರ್ ದೆಹಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಸಭೆಯ ನಂತರ ಮಾತನಾಡಿದ ತೇಜಸ್ವಿ “ನಮ್ಮ ನಿಯೋಗವು ಇಂದು (ಬಿಹಾರ) ರಾಜ್ಯದಲ್ಲಿ ಮಾತ್ರವಲ್ಲದೆ ಇಡೀ ದೇಶದಲ್ಲಿ ಜಾತಿ ಗಣತಿಗಾಗಿ ಪ್ರಧಾನಿಯನ್ನು ಭೇಟಿ ಮಾಡಿದೆ. ನಾವು ಈಗ ಈ ಕುರಿತು ನಿರ್ಧಾರಕ್ಕಾಗಿ ಕಾಯುತ್ತಿದ್ದೇವೆ ಎಂದಿದ್ದಾರೆ.

ಬಿಜೆಪಿ ಹೊರತುಪಡಿಸಿ ಬಿಹಾರದ ಎಲ್ಲಾ ಪಕ್ಷಗಳು 2021 ರ ಜನಗಣತಿಯಲ್ಲಿ ಜಾತಿ ಸಂಖ್ಯೆಗಳ ಎಣಿಕೆಗೆ ಬೇಡಿಕೆ ಇಟ್ಟಿವೆ. ಈ ಬೇಡಿಕೆಯನ್ನು ಪಾಲಿಸಲು ಕೇಂದ್ರ ಸರ್ಕಾರ ಇಲ್ಲಿಯವರೆಗೆ ನಿರಾಕರಿಸಿದ್ದರೆ, ಬಿಹಾರ ಉಪ ಸಿಎಂ ರೇಣು ದೇವಿ ಸೇರಿದಂತೆ ಕೆಲವು ಬಿಜೆಪಿ ಸದಸ್ಯರು ಜಾತಿ ಜನಗಣತಿಗೆ ಬೆಂಬಲ ನೀಡಿದ್ದಾರೆ.

ಈ ವಿಷಯವನ್ನು ಮತ್ತಷ್ಟು ಚರ್ಚಿಸಲು ನಿತೀಶ್ ಕುಮಾರ್ ಬಿಹಾರದಿಂದ 11 ಸದಸ್ಯರ ನಿಯೋಗದ ನೇತೃತ್ವ ವಹಿಸಿಕೊಂಡಿದ್ದಾರೆ. ಅಂದಹಾಗೆ ನಿತೀಶ್ ಮತ್ತು ತೇಜಸ್ವಿ ವೇದಿಕೆ ಹಂಚಿಕೊಳ್ಳುತ್ತಿರುವುದು ಇದೇ ಮೊದಲು. ಸಂವಿಧಾನ ತಿದ್ದುಪಡಿ ವಿಧೇಯಕದ ಮೇಲಿನ ಚರ್ಚೆಯಲ್ಲಿ ಜಾತಿ ಜನಗಣತಿ ಮತ್ತು ಶೇಕಡಾ 50 ಕ್ಕಿಂತ ಹೆಚ್ಚಿನ ಮೀಸಲಾತಿಗಳನ್ನು ತೆಗೆದುಕೊಳ್ಳುವ ಶಾಸನಗಳು ಸುಪ್ರೀಂಕೋರ್ಟ್ ತೀರ್ಪನ್ನು ಅತಿಕ್ರಮಿಸಲು ಮತ್ತು ರಾಜ್ಯಗಳಿಗೆ ತಮ್ಮದೇ ಆದ ಒಬಿಸಿ ಪಟ್ಟಿಗಳನ್ನು ರಚಿಸುವ ಹಕ್ಕನ್ನು ಮರುಸ್ಥಾಪಿಸಲು ಪ್ರಯತ್ನಿಸಿದವು.

ಜಾತಿ ಗಣತಿಗಾಗಿ ತೀವ್ರಗೊಳ್ಳುತ್ತಿರುವ ಬೇಡಿಕೆಯ ಬಗ್ಗೆ ಬಿಜೆಪಿ ಸಂದಿಗ್ಧ ಸ್ಥಿತಿಯಲ್ಲಿದೆ. ಕೇಂದ್ರ ಸಚಿವ ಭೂಪೇಂದರ್ ಯಾದವ್ ಅವರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಸರ್ಕಾರವು ಈ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ.

“ಜಾತಿ ಆಧಾರಿತ ಜನಗಣತಿಯನ್ನು ನಡೆಸುವುದು ಬಿಹಾರದ ಬಹುಕಾಲದ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ನಾವು ಇಂದು ಪ್ರಧಾನಿಯನ್ನು ಭೇಟಿ ಮಾಡುತ್ತಿದ್ದೇವೆ” ಎಂದು ಎಚ್ಎಎಂ ಅಧ್ಯಕ್ಷ ಮತ್ತು ಮಾಜಿ ಬಿಹಾರ ಸಿಎಂ ಜಿತನ್ ರಾಮ್ ಮಾಂಝಿ ಹೇಳಿದ್ದಾರೆ.

ಇದನ್ನೂ ಓದಿ:  ಜಾತಿ ಆಧಾರಿತ ಜನಗಣತಿ ಕನಿಷ್ಠ ಒಮ್ಮೆ ಮಾಡಲೇಬೇಕು: ನಿತೀಶ್ ಕುಮಾರ್

ಇದನ್ನೂ ಓದಿ: School Reopening: ನಿಮ್ಮ ಹತ್ತಿರದ ಯಾವುದೇ ಶಾಲೆಗೆ ಹೋಗಿ ಪಾಠ ಕೇಳಿ; ವಲಸೆ ಮಕ್ಕಳಿಗೆ ಶಿಕ್ಷಣ ಸಚಿವರಿಂದ ಶುಭ ಸುದ್ದಿ

(We urged the PM to take an appropriate decision on caste census bihar CM Nitish Kumar )

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ