AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​​ಮಸ್ ವೇಳೆ ಚರ್ಚ್​ಗೆ ಭೇಟಿಕೊಟ್ಟರೆ ಥಳಿಸುತ್ತೇವೆ -ಹಿಂದೂಗಳಿಗೆ ಭಜರಂಗ ದಳದ ವಾರ್ನಿಂಗ್​

ಕ್ರಿಸ್​​ಮಸ್​ ಸಮಯದಲ್ಲಿ ಚರ್ಚ್​​ಗಳಿಗೆ ಭೇಟಿ ನೀಡುವ ಹಿಂದೂಗಳನ್ನು ಥಳಿಸುತ್ತೇವೆ ಎಂದು ಭಜರಂಗ ದಳದ ನಾಯಕ ನೀಡಿರುವ ಹೇಳಿಕೆ ಈಗ ವೈರಲ್​ ಆಗಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ.

ಕ್ರಿಸ್​​ಮಸ್ ವೇಳೆ ಚರ್ಚ್​ಗೆ ಭೇಟಿಕೊಟ್ಟರೆ ಥಳಿಸುತ್ತೇವೆ -ಹಿಂದೂಗಳಿಗೆ ಭಜರಂಗ ದಳದ ವಾರ್ನಿಂಗ್​
ಪ್ರಾತಿನಿಧಿಕ ಚಿತ್ರ
Skanda
|

Updated on: Dec 06, 2020 | 12:44 PM

Share

ಡಿಸ್ಪೂರ್: ಕ್ರಿಸ್​​ಮಸ್​ ಸಮಯದಲ್ಲಿ ಚರ್ಚ್​​ಗಳಿಗೆ ಭೇಟಿ ನೀಡುವ ಹಿಂದೂಗಳನ್ನು ಥಳಿಸುತ್ತೇವೆ ಎಂದು ಭಜರಂಗ ದಳದ ನಾಯಕ ನೀಡಿರುವ ಹೇಳಿಕೆ ಈಗ ವೈರಲ್​ ಆಗಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ.

ಅಸ್ಸಾಂನ ಕಚರ್​ ಜಿಲ್ಲೆಯ ಸಿಲ್ಚಾರ್​ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಜರಂಗ ದಳದ ನಾಯಕ ಹಾಗೂ ವಿಶ್ವ ಹಿಂದೂ ಪರಿಷತ್​ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಿಥು ನಾಥ್​ ಈ ಹೇಳಿಕೆ ನೀಡಿದ್ದಾರೆ. ಈ ಬಾರಿ ಕ್ರಿಸ್​ಮಸ್​ನಲ್ಲಿ ಯಾವುದೇ ಹಿಂದುಗಳು ಚರ್ಚ್​​ಗೆ ತೆರಳಬಾರದು. ಹಾಗೆ ಹೋಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ. ನಮ್ಮವರು ಚರ್ಚ್​​ಗೆ ಹೋಗುವುದನ್ನು ನಾವು ಎಂದಿಗೂ ಸಹಿಸುವುದಿಲ್ಲ. ಹೀಗಾಗಿ, ಈ ಬಾರಿ ಕ್ರಿಸ್​ಮಸ್​ಗೆ ತೆರಳುವ ಹಿಂದುಗಳಿಗೆ ನಾವು ಏಟು ಹಾಕುತ್ತೇವೆ ಎಂದು ಮಿಥು ನಾಥ್​ ಎಚ್ಚರಿಕೆ ರವಾನಿಸಿದರು.

ನಾನು ಈ ರೀತಿ ಹೇಳಿಕೆ ನೀಡುವುದರಿಂದ ನಾಳೆ ಸುದ್ದಿವಾಹಿನಿಗಳಲ್ಲಿ ಗೂಂಡಾ ದಳ ಎನ್ನುವ ಹೆಡ್​ಲೈನ್​ ಬರುತ್ತದೆ ಎಂಬುದು ನನಗೆ ಗೊತ್ತಿದೆ. ಆದರೆ, ಅದು ನಮಗೆ ಮುಖ್ಯವಲ್ಲ. ಹಿಂದೂಗಳು, ಚರ್ಚ್​ಗಳಿಗೆ ಹೋಗಬಾರದು ಎಂಬುದಷ್ಟೇ ನಮ್ಮ ಉದ್ದೇಶ ಎಂದು ಮಿಥು ನಾಥ್​ ಹೇಳಿದರು.

ಲವ್​ ಜಿಹಾದ್​ ವಿಚಾರದಲ್ಲೂ ಮಿಥು ನಾಥ್​ ಸಿಟ್ಟಾಗಿದ್ದು ನಮ್ಮ ಅಮ್ಮಂದಿರು ಹಾಗೂ ಹೆಣ್ಣುಮಕ್ಕಳನ್ನು ರಕ್ಷಣೆ ಮಾಡುವುದು ನಮ್ಮ ಜವಾಬ್ದಾರಿ. ಇದಕ್ಕಾಗಿ ನಾವು ಎಲ್ಲ ಟೀಕೆಗಳನ್ನು ಸ್ವೀಕರಿಸಲು ಸಿದ್ಧರಿದ್ದೇವೆ ಎಂದು ಮಿಥು ನಾಥ್ ಹೇಳಿದರು.

ಡಿಜೆ ಹಳ್ಳಿ-ಕೆಜಿ ಹಳ್ಳಿ ವ್ಯಾಪ್ತಿಯ ಹಿಂದೂಗಳ ರಕ್ಷಣೆಗೆ ಭಜರಂಗದಳ ಆಗ್ರಹ

Follow Us
Skanda
Skanda
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ