AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​​ಮಸ್ ವೇಳೆ ಚರ್ಚ್​ಗೆ ಭೇಟಿಕೊಟ್ಟರೆ ಥಳಿಸುತ್ತೇವೆ -ಹಿಂದೂಗಳಿಗೆ ಭಜರಂಗ ದಳದ ವಾರ್ನಿಂಗ್​

ಕ್ರಿಸ್​​ಮಸ್​ ಸಮಯದಲ್ಲಿ ಚರ್ಚ್​​ಗಳಿಗೆ ಭೇಟಿ ನೀಡುವ ಹಿಂದೂಗಳನ್ನು ಥಳಿಸುತ್ತೇವೆ ಎಂದು ಭಜರಂಗ ದಳದ ನಾಯಕ ನೀಡಿರುವ ಹೇಳಿಕೆ ಈಗ ವೈರಲ್​ ಆಗಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ.

ಕ್ರಿಸ್​​ಮಸ್ ವೇಳೆ ಚರ್ಚ್​ಗೆ ಭೇಟಿಕೊಟ್ಟರೆ ಥಳಿಸುತ್ತೇವೆ -ಹಿಂದೂಗಳಿಗೆ ಭಜರಂಗ ದಳದ ವಾರ್ನಿಂಗ್​
ಪ್ರಾತಿನಿಧಿಕ ಚಿತ್ರ
Skanda
|

Updated on: Dec 06, 2020 | 12:44 PM

Share

ಡಿಸ್ಪೂರ್: ಕ್ರಿಸ್​​ಮಸ್​ ಸಮಯದಲ್ಲಿ ಚರ್ಚ್​​ಗಳಿಗೆ ಭೇಟಿ ನೀಡುವ ಹಿಂದೂಗಳನ್ನು ಥಳಿಸುತ್ತೇವೆ ಎಂದು ಭಜರಂಗ ದಳದ ನಾಯಕ ನೀಡಿರುವ ಹೇಳಿಕೆ ಈಗ ವೈರಲ್​ ಆಗಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ.

ಅಸ್ಸಾಂನ ಕಚರ್​ ಜಿಲ್ಲೆಯ ಸಿಲ್ಚಾರ್​ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಜರಂಗ ದಳದ ನಾಯಕ ಹಾಗೂ ವಿಶ್ವ ಹಿಂದೂ ಪರಿಷತ್​ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಿಥು ನಾಥ್​ ಈ ಹೇಳಿಕೆ ನೀಡಿದ್ದಾರೆ. ಈ ಬಾರಿ ಕ್ರಿಸ್​ಮಸ್​ನಲ್ಲಿ ಯಾವುದೇ ಹಿಂದುಗಳು ಚರ್ಚ್​​ಗೆ ತೆರಳಬಾರದು. ಹಾಗೆ ಹೋಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ. ನಮ್ಮವರು ಚರ್ಚ್​​ಗೆ ಹೋಗುವುದನ್ನು ನಾವು ಎಂದಿಗೂ ಸಹಿಸುವುದಿಲ್ಲ. ಹೀಗಾಗಿ, ಈ ಬಾರಿ ಕ್ರಿಸ್​ಮಸ್​ಗೆ ತೆರಳುವ ಹಿಂದುಗಳಿಗೆ ನಾವು ಏಟು ಹಾಕುತ್ತೇವೆ ಎಂದು ಮಿಥು ನಾಥ್​ ಎಚ್ಚರಿಕೆ ರವಾನಿಸಿದರು.

ನಾನು ಈ ರೀತಿ ಹೇಳಿಕೆ ನೀಡುವುದರಿಂದ ನಾಳೆ ಸುದ್ದಿವಾಹಿನಿಗಳಲ್ಲಿ ಗೂಂಡಾ ದಳ ಎನ್ನುವ ಹೆಡ್​ಲೈನ್​ ಬರುತ್ತದೆ ಎಂಬುದು ನನಗೆ ಗೊತ್ತಿದೆ. ಆದರೆ, ಅದು ನಮಗೆ ಮುಖ್ಯವಲ್ಲ. ಹಿಂದೂಗಳು, ಚರ್ಚ್​ಗಳಿಗೆ ಹೋಗಬಾರದು ಎಂಬುದಷ್ಟೇ ನಮ್ಮ ಉದ್ದೇಶ ಎಂದು ಮಿಥು ನಾಥ್​ ಹೇಳಿದರು.

ಲವ್​ ಜಿಹಾದ್​ ವಿಚಾರದಲ್ಲೂ ಮಿಥು ನಾಥ್​ ಸಿಟ್ಟಾಗಿದ್ದು ನಮ್ಮ ಅಮ್ಮಂದಿರು ಹಾಗೂ ಹೆಣ್ಣುಮಕ್ಕಳನ್ನು ರಕ್ಷಣೆ ಮಾಡುವುದು ನಮ್ಮ ಜವಾಬ್ದಾರಿ. ಇದಕ್ಕಾಗಿ ನಾವು ಎಲ್ಲ ಟೀಕೆಗಳನ್ನು ಸ್ವೀಕರಿಸಲು ಸಿದ್ಧರಿದ್ದೇವೆ ಎಂದು ಮಿಥು ನಾಥ್ ಹೇಳಿದರು.

ಡಿಜೆ ಹಳ್ಳಿ-ಕೆಜಿ ಹಳ್ಳಿ ವ್ಯಾಪ್ತಿಯ ಹಿಂದೂಗಳ ರಕ್ಷಣೆಗೆ ಭಜರಂಗದಳ ಆಗ್ರಹ

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ