AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​​ಮಸ್ ವೇಳೆ ಚರ್ಚ್​ಗೆ ಭೇಟಿಕೊಟ್ಟರೆ ಥಳಿಸುತ್ತೇವೆ -ಹಿಂದೂಗಳಿಗೆ ಭಜರಂಗ ದಳದ ವಾರ್ನಿಂಗ್​

ಕ್ರಿಸ್​​ಮಸ್​ ಸಮಯದಲ್ಲಿ ಚರ್ಚ್​​ಗಳಿಗೆ ಭೇಟಿ ನೀಡುವ ಹಿಂದೂಗಳನ್ನು ಥಳಿಸುತ್ತೇವೆ ಎಂದು ಭಜರಂಗ ದಳದ ನಾಯಕ ನೀಡಿರುವ ಹೇಳಿಕೆ ಈಗ ವೈರಲ್​ ಆಗಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ.

ಕ್ರಿಸ್​​ಮಸ್ ವೇಳೆ ಚರ್ಚ್​ಗೆ ಭೇಟಿಕೊಟ್ಟರೆ ಥಳಿಸುತ್ತೇವೆ -ಹಿಂದೂಗಳಿಗೆ ಭಜರಂಗ ದಳದ ವಾರ್ನಿಂಗ್​
ಪ್ರಾತಿನಿಧಿಕ ಚಿತ್ರ
Skanda
|

Updated on: Dec 06, 2020 | 12:44 PM

Share

ಡಿಸ್ಪೂರ್: ಕ್ರಿಸ್​​ಮಸ್​ ಸಮಯದಲ್ಲಿ ಚರ್ಚ್​​ಗಳಿಗೆ ಭೇಟಿ ನೀಡುವ ಹಿಂದೂಗಳನ್ನು ಥಳಿಸುತ್ತೇವೆ ಎಂದು ಭಜರಂಗ ದಳದ ನಾಯಕ ನೀಡಿರುವ ಹೇಳಿಕೆ ಈಗ ವೈರಲ್​ ಆಗಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ.

ಅಸ್ಸಾಂನ ಕಚರ್​ ಜಿಲ್ಲೆಯ ಸಿಲ್ಚಾರ್​ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಜರಂಗ ದಳದ ನಾಯಕ ಹಾಗೂ ವಿಶ್ವ ಹಿಂದೂ ಪರಿಷತ್​ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಿಥು ನಾಥ್​ ಈ ಹೇಳಿಕೆ ನೀಡಿದ್ದಾರೆ. ಈ ಬಾರಿ ಕ್ರಿಸ್​ಮಸ್​ನಲ್ಲಿ ಯಾವುದೇ ಹಿಂದುಗಳು ಚರ್ಚ್​​ಗೆ ತೆರಳಬಾರದು. ಹಾಗೆ ಹೋಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ. ನಮ್ಮವರು ಚರ್ಚ್​​ಗೆ ಹೋಗುವುದನ್ನು ನಾವು ಎಂದಿಗೂ ಸಹಿಸುವುದಿಲ್ಲ. ಹೀಗಾಗಿ, ಈ ಬಾರಿ ಕ್ರಿಸ್​ಮಸ್​ಗೆ ತೆರಳುವ ಹಿಂದುಗಳಿಗೆ ನಾವು ಏಟು ಹಾಕುತ್ತೇವೆ ಎಂದು ಮಿಥು ನಾಥ್​ ಎಚ್ಚರಿಕೆ ರವಾನಿಸಿದರು.

ನಾನು ಈ ರೀತಿ ಹೇಳಿಕೆ ನೀಡುವುದರಿಂದ ನಾಳೆ ಸುದ್ದಿವಾಹಿನಿಗಳಲ್ಲಿ ಗೂಂಡಾ ದಳ ಎನ್ನುವ ಹೆಡ್​ಲೈನ್​ ಬರುತ್ತದೆ ಎಂಬುದು ನನಗೆ ಗೊತ್ತಿದೆ. ಆದರೆ, ಅದು ನಮಗೆ ಮುಖ್ಯವಲ್ಲ. ಹಿಂದೂಗಳು, ಚರ್ಚ್​ಗಳಿಗೆ ಹೋಗಬಾರದು ಎಂಬುದಷ್ಟೇ ನಮ್ಮ ಉದ್ದೇಶ ಎಂದು ಮಿಥು ನಾಥ್​ ಹೇಳಿದರು.

ಲವ್​ ಜಿಹಾದ್​ ವಿಚಾರದಲ್ಲೂ ಮಿಥು ನಾಥ್​ ಸಿಟ್ಟಾಗಿದ್ದು ನಮ್ಮ ಅಮ್ಮಂದಿರು ಹಾಗೂ ಹೆಣ್ಣುಮಕ್ಕಳನ್ನು ರಕ್ಷಣೆ ಮಾಡುವುದು ನಮ್ಮ ಜವಾಬ್ದಾರಿ. ಇದಕ್ಕಾಗಿ ನಾವು ಎಲ್ಲ ಟೀಕೆಗಳನ್ನು ಸ್ವೀಕರಿಸಲು ಸಿದ್ಧರಿದ್ದೇವೆ ಎಂದು ಮಿಥು ನಾಥ್ ಹೇಳಿದರು.

ಡಿಜೆ ಹಳ್ಳಿ-ಕೆಜಿ ಹಳ್ಳಿ ವ್ಯಾಪ್ತಿಯ ಹಿಂದೂಗಳ ರಕ್ಷಣೆಗೆ ಭಜರಂಗದಳ ಆಗ್ರಹ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ