AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ 2 ಮತ್ತು 3ನೇ ಹಂತದ ಪ್ರಯೋಗ ಆರಂಭಿಸುತ್ತೇವೆ: ಏಮ್ಸ್ ವೈದ್ಯಕೀಯ ವಿಭಾಗದ ಡಾ.ಸಂಜೀವ್ ಸಿನ್ಹಾ

ಶೀಘ್ರವೇ 2 ಮತ್ತು 3ನೇ ಹಂತದ ಪ್ರಯೋಗ ಆರಂಭಿಸುತ್ತೇವೆ ಎಂದು ಏಮ್ಸ್ ವೈದ್ಯಕೀಯ ವಿಭಾಗದ ಡಾ.ಸಂಜೀವ್ ಸಿನ್ಹಾ ಹೇಳಿಕೆ ನೀಡಿದ್ದಾರೆ. ಆ ಮೂಲಕ ಭಾರತ್ ಬಯೋಟೆಕ್​ಗೆ​​​ 2 ರಿಂದ 15 ವರ್ಷದ ಮಕ್ಕಳ ಮೇಲೆ ಲಸಿಕೆ ಪ್ರಯೋಗಕ್ಕೆ ಮುಂದಾಗಿದೆ.

ಶೀಘ್ರವೇ 2 ಮತ್ತು 3ನೇ ಹಂತದ ಪ್ರಯೋಗ ಆರಂಭಿಸುತ್ತೇವೆ: ಏಮ್ಸ್ ವೈದ್ಯಕೀಯ ವಿಭಾಗದ ಡಾ.ಸಂಜೀವ್ ಸಿನ್ಹಾ
ಪ್ರಾತಿನಿಧಿಕ ಚಿತ್ರ
preethi shettigar
|

Updated on:May 12, 2021 | 6:12 PM

Share

ದೆಹಲಿ: ಡಿಸಿಜಿಐನ ವಿಷಯ ತಜ್ಞರ ಸಮಿತಿ ಮಕ್ಕಳ ಮೇಲೆ ಲಸಿಕೆ ಪ್ರಯೋಗಕ್ಕೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಶೀಘ್ರವೇ 2 ಮತ್ತು 3ನೇ ಹಂತದ ಪ್ರಯೋಗ ಆರಂಭಿಸುತ್ತೇವೆ ಎಂದು ಏಮ್ಸ್ ವೈದ್ಯಕೀಯ ವಿಭಾಗದ ಡಾ.ಸಂಜೀವ್ ಸಿನ್ಹಾ ಹೇಳಿಕೆ ನೀಡಿದ್ದಾರೆ. ಆ ಮೂಲಕ ಭಾರತ್ ಬಯೋಟೆಕ್​ಗೆ​​​ 2 ರಿಂದ 15 ವರ್ಷದ ಮಕ್ಕಳ ಮೇಲೆ ಲಸಿಕೆ ಪ್ರಯೋಗಕ್ಕೆ ಮುಂದಾಗಿದೆ.

ದೇಶದಲ್ಲಿ ಕೊರೊನಾ ಎರಡನೇ ಅಲೆಯಿಂದಾಗಿ ಸೋಂಕು ಹಬ್ಬುವಿಕೆ ಹೆಚ್ಚಾಗಿದ್ದು, ಇನ್ನು ಕೆಲ ತಿಂಗಳ ಬಳಿಕ ಮೂರನೇ ಅಲೆ ಬರುವ ಸಾಧ್ಯತೆಯೂ ಇದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಮೂರನೇ ಅಲೆಯಲ್ಲಿ ಮಕ್ಕಳು ಹೆಚ್ಚು ತೊಂದರೆ ಅನುಭವಿಸುವ ಸಾಧ್ಯತೆ ಇದೆ ಎಂಬ ಆತಂಕವನ್ನೂ ಕೆಲವರು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮುಂದಿನ ಸನ್ನಿವೇಶಗಳನ್ನು ಎದುರಿಸಲು ಸಜ್ಜಾಗಿರಬೇಕಾದ ಅನಿವಾರ್ಯತೆ ಎದುರಾಗಿದ್ದು, ಈ ನಿಟ್ಟಿನಲ್ಲಿ 2 ರಿಂದ 18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲು ಎರಡು ಹಾಗೂ ಮೂರನೇ ಹಂತದ ವೈದ್ಯಕೀಯ ಪರೀಕ್ಷೆ ಆರಂಭಿಸುವಂತೆ ತಜ್ಞರ ಸಮಿತಿ ಭಾರತ್ ಬಯೋಟೆಕ್ ಸಂಸ್ಥೆಗೆ ಸಲಹೆ ನೀಡಿದೆ.

ವೈದ್ಯಕೀಯ ಪರೀಕ್ಷೆಯು ದೆಹಲಿ ಹಾಗೂ ಪಾಟ್ನಾದ AIIMS ಹಾಗೂ ನಾಗ್ಪುರದ ಮೆಡಿತ್ರಿನ ವೈದ್ಯಕೀಯ ವಿಜ್ಞಾನದ ಸಂಸ್ಥೆ ಸೇರಿದಂತೆ ವಿವಿಧೆಡೆ ನಡೆಯಲಿದ್ದು 525 ವಿಚಾರಗಳತ್ತ ಗಮನ ಹರಿಸಲಾಗುವುದು ಎಂದು ತಜ್ಞರು ತಿಳಿಸಿದ್ದಾರೆ. ಸದ್ಯ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ತಯಾಸಿರುವ ಕೊವ್ಯಾಕ್ಸಿನ್ ಲಸಿಕೆಯನ್ನು 2 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ನೀಡಲು ಅಡ್ಡಿಯಿಲ್ಲವೇ ಎಂದು ತಿಳಿಯಲು 2 ಹಾಗೂ 3ನೇ ಹಂತದ ವೈದ್ಯಕೀಯ ಪರೀಕ್ಷೆಗಳು ನಡೆಯಲಿವೆ.

ಭಾರತ್ ಬಯೋಟೆಕ್​ ಕಂಪನಿಗೆ 65 ಕೋಟಿ ರೂಪಾಯಿ ನೆರವು: ಭಾರತ್ ಬಯೋಟೆಕ್ ಕಂಪನಿಯ ಬೆಂಗಳೂರಿನ ನೂತನ ಘಟಕ್ಕೆ 65 ಕೋಟಿ ರೂಪಾಯಿ ಹಣಕಾಸು ನೆರವನ್ನು ಘೋಷಿಸಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಎಎನ್​ಐ ಲಸಿಕೆ ಸಾಮರ್ಥ್ಯವನ್ನು ದ್ವಿಗುಣಗೊಳಿಸಲು ಮೂರು ಸರ್ಕಾರಿ ಸ್ವಾಮ್ಯದ ಕಂಪನಿಗಳು ಬೆಂಬಲಕ್ಕೆ ಬಂದಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಮಾಹಿತಿ ನೀಡಿದೆ ಎಂದು ತಿಳಿಸಿದೆ.

ಇದನ್ನೂ ಓದಿ:

ಬೆಂಗಳೂರು ನಗರದ ಜನ ಬೆಂಗಳೂರಿನಲ್ಲೇ ಲಸಿಕೆ ಪಡೆಯಿರಿ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಫೈಜರ್ ಕೊವಿಡ್​ ಲಸಿಕೆಯ​ನ್ನು ಮಕ್ಕಳಿಗೆ ನೀಡಲು ಅಮೇರಿಕದ ಔಷಧ ಪ್ರಾಧಿಕಾರ ಒಪ್ಪಿಗೆ

Published On - 6:10 pm, Wed, 12 May 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ