AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ 2 ಮತ್ತು 3ನೇ ಹಂತದ ಪ್ರಯೋಗ ಆರಂಭಿಸುತ್ತೇವೆ: ಏಮ್ಸ್ ವೈದ್ಯಕೀಯ ವಿಭಾಗದ ಡಾ.ಸಂಜೀವ್ ಸಿನ್ಹಾ

ಶೀಘ್ರವೇ 2 ಮತ್ತು 3ನೇ ಹಂತದ ಪ್ರಯೋಗ ಆರಂಭಿಸುತ್ತೇವೆ ಎಂದು ಏಮ್ಸ್ ವೈದ್ಯಕೀಯ ವಿಭಾಗದ ಡಾ.ಸಂಜೀವ್ ಸಿನ್ಹಾ ಹೇಳಿಕೆ ನೀಡಿದ್ದಾರೆ. ಆ ಮೂಲಕ ಭಾರತ್ ಬಯೋಟೆಕ್​ಗೆ​​​ 2 ರಿಂದ 15 ವರ್ಷದ ಮಕ್ಕಳ ಮೇಲೆ ಲಸಿಕೆ ಪ್ರಯೋಗಕ್ಕೆ ಮುಂದಾಗಿದೆ.

ಶೀಘ್ರವೇ 2 ಮತ್ತು 3ನೇ ಹಂತದ ಪ್ರಯೋಗ ಆರಂಭಿಸುತ್ತೇವೆ: ಏಮ್ಸ್ ವೈದ್ಯಕೀಯ ವಿಭಾಗದ ಡಾ.ಸಂಜೀವ್ ಸಿನ್ಹಾ
ಪ್ರಾತಿನಿಧಿಕ ಚಿತ್ರ
preethi shettigar
|

Updated on:May 12, 2021 | 6:12 PM

Share

ದೆಹಲಿ: ಡಿಸಿಜಿಐನ ವಿಷಯ ತಜ್ಞರ ಸಮಿತಿ ಮಕ್ಕಳ ಮೇಲೆ ಲಸಿಕೆ ಪ್ರಯೋಗಕ್ಕೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಶೀಘ್ರವೇ 2 ಮತ್ತು 3ನೇ ಹಂತದ ಪ್ರಯೋಗ ಆರಂಭಿಸುತ್ತೇವೆ ಎಂದು ಏಮ್ಸ್ ವೈದ್ಯಕೀಯ ವಿಭಾಗದ ಡಾ.ಸಂಜೀವ್ ಸಿನ್ಹಾ ಹೇಳಿಕೆ ನೀಡಿದ್ದಾರೆ. ಆ ಮೂಲಕ ಭಾರತ್ ಬಯೋಟೆಕ್​ಗೆ​​​ 2 ರಿಂದ 15 ವರ್ಷದ ಮಕ್ಕಳ ಮೇಲೆ ಲಸಿಕೆ ಪ್ರಯೋಗಕ್ಕೆ ಮುಂದಾಗಿದೆ.

ದೇಶದಲ್ಲಿ ಕೊರೊನಾ ಎರಡನೇ ಅಲೆಯಿಂದಾಗಿ ಸೋಂಕು ಹಬ್ಬುವಿಕೆ ಹೆಚ್ಚಾಗಿದ್ದು, ಇನ್ನು ಕೆಲ ತಿಂಗಳ ಬಳಿಕ ಮೂರನೇ ಅಲೆ ಬರುವ ಸಾಧ್ಯತೆಯೂ ಇದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಮೂರನೇ ಅಲೆಯಲ್ಲಿ ಮಕ್ಕಳು ಹೆಚ್ಚು ತೊಂದರೆ ಅನುಭವಿಸುವ ಸಾಧ್ಯತೆ ಇದೆ ಎಂಬ ಆತಂಕವನ್ನೂ ಕೆಲವರು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮುಂದಿನ ಸನ್ನಿವೇಶಗಳನ್ನು ಎದುರಿಸಲು ಸಜ್ಜಾಗಿರಬೇಕಾದ ಅನಿವಾರ್ಯತೆ ಎದುರಾಗಿದ್ದು, ಈ ನಿಟ್ಟಿನಲ್ಲಿ 2 ರಿಂದ 18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲು ಎರಡು ಹಾಗೂ ಮೂರನೇ ಹಂತದ ವೈದ್ಯಕೀಯ ಪರೀಕ್ಷೆ ಆರಂಭಿಸುವಂತೆ ತಜ್ಞರ ಸಮಿತಿ ಭಾರತ್ ಬಯೋಟೆಕ್ ಸಂಸ್ಥೆಗೆ ಸಲಹೆ ನೀಡಿದೆ.

ವೈದ್ಯಕೀಯ ಪರೀಕ್ಷೆಯು ದೆಹಲಿ ಹಾಗೂ ಪಾಟ್ನಾದ AIIMS ಹಾಗೂ ನಾಗ್ಪುರದ ಮೆಡಿತ್ರಿನ ವೈದ್ಯಕೀಯ ವಿಜ್ಞಾನದ ಸಂಸ್ಥೆ ಸೇರಿದಂತೆ ವಿವಿಧೆಡೆ ನಡೆಯಲಿದ್ದು 525 ವಿಚಾರಗಳತ್ತ ಗಮನ ಹರಿಸಲಾಗುವುದು ಎಂದು ತಜ್ಞರು ತಿಳಿಸಿದ್ದಾರೆ. ಸದ್ಯ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ತಯಾಸಿರುವ ಕೊವ್ಯಾಕ್ಸಿನ್ ಲಸಿಕೆಯನ್ನು 2 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ನೀಡಲು ಅಡ್ಡಿಯಿಲ್ಲವೇ ಎಂದು ತಿಳಿಯಲು 2 ಹಾಗೂ 3ನೇ ಹಂತದ ವೈದ್ಯಕೀಯ ಪರೀಕ್ಷೆಗಳು ನಡೆಯಲಿವೆ.

ಭಾರತ್ ಬಯೋಟೆಕ್​ ಕಂಪನಿಗೆ 65 ಕೋಟಿ ರೂಪಾಯಿ ನೆರವು: ಭಾರತ್ ಬಯೋಟೆಕ್ ಕಂಪನಿಯ ಬೆಂಗಳೂರಿನ ನೂತನ ಘಟಕ್ಕೆ 65 ಕೋಟಿ ರೂಪಾಯಿ ಹಣಕಾಸು ನೆರವನ್ನು ಘೋಷಿಸಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಎಎನ್​ಐ ಲಸಿಕೆ ಸಾಮರ್ಥ್ಯವನ್ನು ದ್ವಿಗುಣಗೊಳಿಸಲು ಮೂರು ಸರ್ಕಾರಿ ಸ್ವಾಮ್ಯದ ಕಂಪನಿಗಳು ಬೆಂಬಲಕ್ಕೆ ಬಂದಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಮಾಹಿತಿ ನೀಡಿದೆ ಎಂದು ತಿಳಿಸಿದೆ.

ಇದನ್ನೂ ಓದಿ:

ಬೆಂಗಳೂರು ನಗರದ ಜನ ಬೆಂಗಳೂರಿನಲ್ಲೇ ಲಸಿಕೆ ಪಡೆಯಿರಿ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಫೈಜರ್ ಕೊವಿಡ್​ ಲಸಿಕೆಯ​ನ್ನು ಮಕ್ಕಳಿಗೆ ನೀಡಲು ಅಮೇರಿಕದ ಔಷಧ ಪ್ರಾಧಿಕಾರ ಒಪ್ಪಿಗೆ

Published On - 6:10 pm, Wed, 12 May 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?