ಮಾಫಿಯಾಗಳಿಂದ ವಶಪಡಿಸಿಕೊಂಡ ಭೂಮಿಯಲ್ಲಿ ಬಡವರಿಗೆ ಮನೆ ನಿರ್ಮಾಣ; ಸಿಎಂ ಯೋಗಿ ಘೋಷಣೆ

Yogi Adityanath: ಭೂ ಮಾಫಿಯಾಗಳ ನಿಯಂತ್ರಣದಲ್ಲಿದ್ದ ಭೂಮಿಯನ್ನು ಉತ್ತರ ಪ್ರದೇಶ ಸರ್ಕಾರ ವಶಪಡಿಸಿಕೊಂಡ ಬಗ್ಗೆ ಈ ವರ್ಷದ ಫೆಬ್ರವರಿಯಲ್ಲಿ ಯೋಗಿ ಆದಿತ್ಯನಾಥ್​, ವಿಧಾನಪರಿಷತ್​​ನಲ್ಲಿ ವಿವರಣೆ ನೀಡಿದ್ದರು.

ಮಾಫಿಯಾಗಳಿಂದ ವಶಪಡಿಸಿಕೊಂಡ ಭೂಮಿಯಲ್ಲಿ ಬಡವರಿಗೆ ಮನೆ ನಿರ್ಮಾಣ; ಸಿಎಂ ಯೋಗಿ ಘೋಷಣೆ
ಸಿಎಂ ಯೋಗಿ ಆದಿತ್ಯನಾಥ್​
Follow us
| Updated By: Lakshmi Hegde

Updated on: Aug 19, 2021 | 5:17 PM

ಲಖನೌ: ಮಾಫಿಯಾ(Mafia)ಗಳಿಂದ ವಶಪಡಿಸಿಕೊಳ್ಳಲಾದ ಭೂಮಿಗಳಲ್ಲಿ, ರಾಜ್ಯದ ಬಡವರು, ದಲಿತರಿಗೆ ಮನೆಗಳನ್ನು, ಸರ್ಕಾರದ ವತಿಯಿಂದಲೇ ಕಟ್ಟಿಸಿಕೊಡಲಾಗುವುದು ಎಂದು ಉತ್ತರಪ್ರದೇಶ ಮುಖ್ಯಮಂತ್ರಿ (Uttar Pradesh Chief Minister) ಯೋಗಿ ಆದಿತ್ಯನಾಥ್ (Yogi Adityanath)​ ಹೇಳಿದ್ದಾರೆ. ಇಂದು ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಯೋಗಿ ಇಂಥದ್ದೊಂದು ಬಹುಮುಖ್ಯವಾದ ಘೋಷಣೆ ಪ್ರಕಟಿಸಿದ್ದಾರೆ.

ಭೂ ಮಾಫಿಯಾಗಳ ನಿಯಂತ್ರಣದಲ್ಲಿದ್ದ ಭೂಮಿಯನ್ನು ಉತ್ತರ ಪ್ರದೇಶ ಸರ್ಕಾರ ವಶಪಡಿಸಿಕೊಂಡ ಬಗ್ಗೆ ಈ ವರ್ಷದ ಫೆಬ್ರವರಿಯಲ್ಲಿ ಯೋಗಿ ಆದಿತ್ಯನಾಥ್​, ವಿಧಾನಪರಿಷತ್​​ನಲ್ಲಿ ವಿವರಣೆ ನೀಡಿದ್ದರು. ನಮ್ಮ ಬಿಜೆಪಿ ಸರ್ಕಾರ 2017ರಲ್ಲಿ ಅಧಿಕಾರಕ್ಕೆ ಬಂದ ನಂತರ ಇಲ್ಲಿಯವರೆಗೆ ಕಂದಾಯ ಇಲಾಖೆ ಸುಮಾರು 67,000 ಎಕರೆ ಭೂಮಿಯನ್ನು ಮಾಫಿಯಾ ಒಡೆತನದಿಂದ ಮುಕ್ತಗೊಳಿಸಿದೆ. ಹೀಗೆ ವಶಪಡಿಸಿಕೊಳ್ಳಲಾದ ಜಾಗದಲ್ಲಿ ಒಂದು ಕ್ರೀಡಾ ಮೈದಾನ ನಿರ್ಮಾಣ ಮಾಡುವುದು ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದ್ದರು. ಅಂದು ಎಂಎಲ್​ಸಿ ಸುರೇಶ್​ ಕುಮಾರ್​ ತ್ರಿಪಾಠಿಯವರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಯೋಗಿ ಆದಿತ್ಯನಾಥ್​, ಈ ಹಿಂದೆ ಅಧಿಕಾರದಲ್ಲಿದ್ದವರ ಸಹಾಯದಿಂದ ರಾಜ್ಯದಲ್ಲಿ ಅದೆಷ್ಟೋ ಎಕರೆಗಳಷ್ಟು ಸಾರ್ವಜನಿಕ ಮತ್ತು ಖಾಸಗಿ ಭೂಮಿಗಳನ್ನು ಮಾಫಿಯಾಗಳು ನಿಯಂತ್ರಣಕ್ಕೆ ತೆಗೆದುಕೊಂಡಿದ್ದವು. ಆ ಭೂಮಿಯನ್ನು ಮರಳಿ ಪಡೆಯಲೆಂದೇ ನಮ್ಮ ಸರ್ಕಾರ ಆ್ಯಂಟಿ ಭೂ ಮಾಫಿಯಾ ಟಾಸ್ಕ್​ ಫೋರ್ಸ್​ ರಚನೆ ಮಾಡಿತ್ತು. ಈ ಟಾಸ್ಕ್ ಫೋರ್ಸ್​ ತನ್ನ ಕೆಲಸದಲ್ಲಿ ಯಶಸ್ವಿಯಾಗಿದೆ ಎಂದು ತಿಳಿಸಿದ್ದರು.

ತಾಲಿಬಾನ್ ಬಗ್ಗೆ ಪ್ರತಿಕ್ರಿಯೆ ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಉಗ್ರರ ಕೃತ್ಯದ ಬಗ್ಗೆ ಮಾತನಾಡಿದ ಸಿಎಂ ಯೋಗಿ ಆದಿತ್ಯನಾಥ್​, ನಮ್ಮ ದೇಶದ ಕೆಲವು ಪ್ರತಿಪಕ್ಷಗಳ ಮುಖಂಡು ನಾಚಿಕೆಯನ್ನು ಬಿಟ್ಟು, ತಾಲಿಬಾನ್​ ಉಗ್ರರನ್ನು ಬೆಂಬಲಿಸುತ್ತಿದ್ದಾರೆ. ಅದೇ ಬಾಯಲ್ಲಿ, ಮಹಿಳೆಯರ ಹಕ್ಕು, ಕಲ್ಯಾಣದ ಬಗ್ಗೆ ಮಾತನಾಡುತ್ತಾರೆ. ಇಂಥ ವ್ಯತಿರಿಕ್ತವಾಗಿ ಮಾತನಾಡುವವರ ಮನಸ್ಥಿತಿ ಈಗ ಹೊರಬರುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: ಬೇಗೂರು ಕೆರೆಯಲ್ಲಿ ಶಿವನ ಪತ್ರಿಮೆ ನಿರ್ಮಾಣ; ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಶ್ರಾವಣಕ್ಕೆ ಗ್ರಾಹಕರಿಗೆ ಕೆಎಂಎಫ್​ನಿಂದ ಸಿಹಿಸುದ್ದಿ; ಸದ್ಯ ಹಾಲಿನ ಬೆಲೆ ಏರಿಕೆಯಿಲ್ಲ; ಹೊಸ ಉತ್ಪನ್ನ ಬಿಡುಗಡೆ, ಇನ್ನಷ್ಟು ರಿಯಾಯಿತಿ

(We will build houses for poor on land confiscated from the mafia announced by CM Yogi Adityanath)

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್