AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಫಿಯಾಗಳಿಂದ ವಶಪಡಿಸಿಕೊಂಡ ಭೂಮಿಯಲ್ಲಿ ಬಡವರಿಗೆ ಮನೆ ನಿರ್ಮಾಣ; ಸಿಎಂ ಯೋಗಿ ಘೋಷಣೆ

Yogi Adityanath: ಭೂ ಮಾಫಿಯಾಗಳ ನಿಯಂತ್ರಣದಲ್ಲಿದ್ದ ಭೂಮಿಯನ್ನು ಉತ್ತರ ಪ್ರದೇಶ ಸರ್ಕಾರ ವಶಪಡಿಸಿಕೊಂಡ ಬಗ್ಗೆ ಈ ವರ್ಷದ ಫೆಬ್ರವರಿಯಲ್ಲಿ ಯೋಗಿ ಆದಿತ್ಯನಾಥ್​, ವಿಧಾನಪರಿಷತ್​​ನಲ್ಲಿ ವಿವರಣೆ ನೀಡಿದ್ದರು.

ಮಾಫಿಯಾಗಳಿಂದ ವಶಪಡಿಸಿಕೊಂಡ ಭೂಮಿಯಲ್ಲಿ ಬಡವರಿಗೆ ಮನೆ ನಿರ್ಮಾಣ; ಸಿಎಂ ಯೋಗಿ ಘೋಷಣೆ
ಸಿಎಂ ಯೋಗಿ ಆದಿತ್ಯನಾಥ್​
TV9 Web
| Updated By: Lakshmi Hegde|

Updated on: Aug 19, 2021 | 5:17 PM

Share

ಲಖನೌ: ಮಾಫಿಯಾ(Mafia)ಗಳಿಂದ ವಶಪಡಿಸಿಕೊಳ್ಳಲಾದ ಭೂಮಿಗಳಲ್ಲಿ, ರಾಜ್ಯದ ಬಡವರು, ದಲಿತರಿಗೆ ಮನೆಗಳನ್ನು, ಸರ್ಕಾರದ ವತಿಯಿಂದಲೇ ಕಟ್ಟಿಸಿಕೊಡಲಾಗುವುದು ಎಂದು ಉತ್ತರಪ್ರದೇಶ ಮುಖ್ಯಮಂತ್ರಿ (Uttar Pradesh Chief Minister) ಯೋಗಿ ಆದಿತ್ಯನಾಥ್ (Yogi Adityanath)​ ಹೇಳಿದ್ದಾರೆ. ಇಂದು ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಯೋಗಿ ಇಂಥದ್ದೊಂದು ಬಹುಮುಖ್ಯವಾದ ಘೋಷಣೆ ಪ್ರಕಟಿಸಿದ್ದಾರೆ.

ಭೂ ಮಾಫಿಯಾಗಳ ನಿಯಂತ್ರಣದಲ್ಲಿದ್ದ ಭೂಮಿಯನ್ನು ಉತ್ತರ ಪ್ರದೇಶ ಸರ್ಕಾರ ವಶಪಡಿಸಿಕೊಂಡ ಬಗ್ಗೆ ಈ ವರ್ಷದ ಫೆಬ್ರವರಿಯಲ್ಲಿ ಯೋಗಿ ಆದಿತ್ಯನಾಥ್​, ವಿಧಾನಪರಿಷತ್​​ನಲ್ಲಿ ವಿವರಣೆ ನೀಡಿದ್ದರು. ನಮ್ಮ ಬಿಜೆಪಿ ಸರ್ಕಾರ 2017ರಲ್ಲಿ ಅಧಿಕಾರಕ್ಕೆ ಬಂದ ನಂತರ ಇಲ್ಲಿಯವರೆಗೆ ಕಂದಾಯ ಇಲಾಖೆ ಸುಮಾರು 67,000 ಎಕರೆ ಭೂಮಿಯನ್ನು ಮಾಫಿಯಾ ಒಡೆತನದಿಂದ ಮುಕ್ತಗೊಳಿಸಿದೆ. ಹೀಗೆ ವಶಪಡಿಸಿಕೊಳ್ಳಲಾದ ಜಾಗದಲ್ಲಿ ಒಂದು ಕ್ರೀಡಾ ಮೈದಾನ ನಿರ್ಮಾಣ ಮಾಡುವುದು ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದ್ದರು. ಅಂದು ಎಂಎಲ್​ಸಿ ಸುರೇಶ್​ ಕುಮಾರ್​ ತ್ರಿಪಾಠಿಯವರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಯೋಗಿ ಆದಿತ್ಯನಾಥ್​, ಈ ಹಿಂದೆ ಅಧಿಕಾರದಲ್ಲಿದ್ದವರ ಸಹಾಯದಿಂದ ರಾಜ್ಯದಲ್ಲಿ ಅದೆಷ್ಟೋ ಎಕರೆಗಳಷ್ಟು ಸಾರ್ವಜನಿಕ ಮತ್ತು ಖಾಸಗಿ ಭೂಮಿಗಳನ್ನು ಮಾಫಿಯಾಗಳು ನಿಯಂತ್ರಣಕ್ಕೆ ತೆಗೆದುಕೊಂಡಿದ್ದವು. ಆ ಭೂಮಿಯನ್ನು ಮರಳಿ ಪಡೆಯಲೆಂದೇ ನಮ್ಮ ಸರ್ಕಾರ ಆ್ಯಂಟಿ ಭೂ ಮಾಫಿಯಾ ಟಾಸ್ಕ್​ ಫೋರ್ಸ್​ ರಚನೆ ಮಾಡಿತ್ತು. ಈ ಟಾಸ್ಕ್ ಫೋರ್ಸ್​ ತನ್ನ ಕೆಲಸದಲ್ಲಿ ಯಶಸ್ವಿಯಾಗಿದೆ ಎಂದು ತಿಳಿಸಿದ್ದರು.

ತಾಲಿಬಾನ್ ಬಗ್ಗೆ ಪ್ರತಿಕ್ರಿಯೆ ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಉಗ್ರರ ಕೃತ್ಯದ ಬಗ್ಗೆ ಮಾತನಾಡಿದ ಸಿಎಂ ಯೋಗಿ ಆದಿತ್ಯನಾಥ್​, ನಮ್ಮ ದೇಶದ ಕೆಲವು ಪ್ರತಿಪಕ್ಷಗಳ ಮುಖಂಡು ನಾಚಿಕೆಯನ್ನು ಬಿಟ್ಟು, ತಾಲಿಬಾನ್​ ಉಗ್ರರನ್ನು ಬೆಂಬಲಿಸುತ್ತಿದ್ದಾರೆ. ಅದೇ ಬಾಯಲ್ಲಿ, ಮಹಿಳೆಯರ ಹಕ್ಕು, ಕಲ್ಯಾಣದ ಬಗ್ಗೆ ಮಾತನಾಡುತ್ತಾರೆ. ಇಂಥ ವ್ಯತಿರಿಕ್ತವಾಗಿ ಮಾತನಾಡುವವರ ಮನಸ್ಥಿತಿ ಈಗ ಹೊರಬರುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: ಬೇಗೂರು ಕೆರೆಯಲ್ಲಿ ಶಿವನ ಪತ್ರಿಮೆ ನಿರ್ಮಾಣ; ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಶ್ರಾವಣಕ್ಕೆ ಗ್ರಾಹಕರಿಗೆ ಕೆಎಂಎಫ್​ನಿಂದ ಸಿಹಿಸುದ್ದಿ; ಸದ್ಯ ಹಾಲಿನ ಬೆಲೆ ಏರಿಕೆಯಿಲ್ಲ; ಹೊಸ ಉತ್ಪನ್ನ ಬಿಡುಗಡೆ, ಇನ್ನಷ್ಟು ರಿಯಾಯಿತಿ

(We will build houses for poor on land confiscated from the mafia announced by CM Yogi Adityanath)

ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್