AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​ ಉತ್ಪಾದನೆಯಲ್ಲಿ ಚೀನಾವನ್ನು ನಾವು ಹಿಂದಿಕ್ಕಲಿದ್ದೇವೆ: ರವಿಶಂಕರ್​ ಪ್ರಸಾದ್

ಸಾಕಷ್ಟು ಕಂಪೆನಿಗಳು ಭಾರತದಲ್ಲಿ ಮೊಬೈಲ್​ ನಿರ್ಮಾಣ ಘಟಕ ಸ್ಥಾಪನೆ ಮಾಡಿವೆ. ಇದರ ಪರಿಣಾಮವಾಗಿ, 2017ರಲ್ಲಿ ಭಾರತ ವಿಶ್ವದ ಎರಡನೇ ಅತಿ ಹೆಚ್ಚು ಮೊಬೈಲ್​ ಉತ್ಪಾದನಾ ದೇಶವಾಗಿ ಹೊರ ಹೊಮ್ಮಿತ್ತು.

ಮೊಬೈಲ್​ ಉತ್ಪಾದನೆಯಲ್ಲಿ ಚೀನಾವನ್ನು ನಾವು ಹಿಂದಿಕ್ಕಲಿದ್ದೇವೆ: ರವಿಶಂಕರ್​ ಪ್ರಸಾದ್
ರವಿ ಶಂಕರ್ ಪ್ರಸಾದ್
ರಾಜೇಶ್ ದುಗ್ಗುಮನೆ
| Edited By: |

Updated on: Dec 14, 2020 | 6:57 PM

Share

ನವದೆಹಲಿ: ಮೊಬೈಲ್​ ಉತ್ಪಾದನೆಯಲ್ಲಿ ಭಾರತ ದಿನದಿಂದ ದಿನಕ್ಕೆ ಮೇಲೇರುತ್ತಲೇ ಇದೆ. ಮುಂದಿನ ವರ್ಷಗಳಲ್ಲಿ ಮೊಬೈಲ್​ ಉತ್ಪಾದನೆಯಲ್ಲಿ ನಾವು ಚೀನಾವನ್ನು ಹಿಂದಿಕ್ಕುವ ಗುರಿ ಹೊಂದಿದ್ದೇವೆ ಎಂದು ದೂರ ಸಂಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್​ ಪ್ರಸಾದ್​ ಇಂದು ಹೇಳಿದರು.

ಉತ್ಪಾದನೆ-ಸಂಬಂಧಿತ ಪ್ರೋತ್ಸಾಹ (ಪಿಎಲ್​ಐ) ಯೋಜನೆ ಅಡಿಯಲ್ಲಿ ವಿಶ್ವದ ಪ್ರಮುಖ ಮೊಬೈಲ್​ ತಯಾರಿಕಾ ಸಂಸ್ಥೆಗಳನ್ನು ಆಕರ್ಷಣೆ ಮಾಡುವುದು ನಮ್ಮ ಉದ್ದೇಶ. ಈ ಮೂಲಕ ಮೊಬೈಲ್​ ಉತ್ಪಾದನೆಯಲ್ಲಿ ಭಾರತವನ್ನು ಮೊದಲ ಸ್ಥಾನಕ್ಕೆ ತೆಗೆದುಕೊಂಡು ಹೋಗಬೇಕು ಅನ್ನೋದು ನಮ್ಮ ಉದ್ದೇಶ ಎಂದು ರವಿಶಂಕರ್ ಪ್ರಸಾದ್​ ತಿಳಿಸಿದರು.

ಭಾರತವನ್ನು ಎಲೆಕ್ಟ್ರಾನಿಕ್​ ಸಾಧನಗಳ ಹಬ್ ​ಅನ್ನಾಗಿ ಮಾಡೋದು ನಮ್ಮ ಉದ್ದೇಶ. ಮೊಬೈಲ್​ ಉತ್ಪಾದನೆಯಲ್ಲಿ ಎರಡನೇ ಸ್ಥಾನಕ್ಕೇರಬೇಕು ಎಂದು ನಾವು ಅಂದುಕೊಂಡಿದ್ದೆವು. ಅದನ್ನು ಮಾಡಿದ್ದೇವೆ. ಈಗ ಚೀನಾವನ್ನು ಹಿಂದಿಕ್ಕಿ ಮೊದಲ ಸ್ಥಾನದಲ್ಲಿರಬೇಕು ಎನ್ನುವ ಗುರಿ ಹೊಂದಿದ್ದೇವೆ ಎಂದು ರವಿಶಂಕರ್​ ಹೇಳಿದರು.

ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಮೊಬೈಲ್​ ಬಳಕೆ ಗಣನೀಯವಾಗಿ ಏರಿಕೆ ಕಂಡಿದೆ. ಹೀಗಾಗಿ, ಸಾಕಷ್ಟು ಕಂಪೆನಿಗಳು ಭಾರತದಲ್ಲಿ ಮೊಬೈಲ್​ ನಿರ್ಮಾಣ ಘಟಕ ಸ್ಥಾಪನೆ ಮಾಡಿವೆ. ಇದರ ಪರಿಣಾಮವಾಗಿ, 2017ರಲ್ಲಿ ಭಾರತ ವಿಶ್ವದ ಎರಡನೇ ಅತಿ ಹೆಚ್ಚು ಮೊಬೈಲ್​ ಉತ್ಪಾದನಾ ದೇಶವಾಗಿ ಹೊರ ಹೊಮ್ಮಿತ್ತು.

2026ರ ವೇಳೆಗೆ ಎಲೆಕ್ಟ್ರಾನಿಕ್​ ಸಾಧನಗಳ ಉತ್ಪಾದನೆಯಿಂದ 26 ಲಕ್ಷ ಕೋಟಿ ರೂಪಾಯಿ ಗಳಿಕೆ ಮಾಡುವ ಉದ್ದೇಶವನ್ನು ಭಾರತ ಇಟ್ಟುಕೊಂಡಿದೆ. ಈ ಪೈಕಿ 13 ಲಕ್ಷ ಕೋಟಿ ರೂಪಾಯಿ ಮೊಬೈಲ್​ ಕ್ಷೇತ್ರದಿಂದಲೇ ಬರುವ ಸಾಧ್ಯತೆ ಇದೆ.

ಆ್ಯಪಲ್​ ತಂದ ಆಪತ್ತು.. ಮೊಬೈಲ್ ಚಾರ್ಜ್​ ಹಾಕಿ ಜಳಕ ಮಾಡಿದ ಮಹಿಳೆ ಸಾವು!

Follow Us
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ