AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​ ಉತ್ಪಾದನೆಯಲ್ಲಿ ಚೀನಾವನ್ನು ನಾವು ಹಿಂದಿಕ್ಕಲಿದ್ದೇವೆ: ರವಿಶಂಕರ್​ ಪ್ರಸಾದ್

ಸಾಕಷ್ಟು ಕಂಪೆನಿಗಳು ಭಾರತದಲ್ಲಿ ಮೊಬೈಲ್​ ನಿರ್ಮಾಣ ಘಟಕ ಸ್ಥಾಪನೆ ಮಾಡಿವೆ. ಇದರ ಪರಿಣಾಮವಾಗಿ, 2017ರಲ್ಲಿ ಭಾರತ ವಿಶ್ವದ ಎರಡನೇ ಅತಿ ಹೆಚ್ಚು ಮೊಬೈಲ್​ ಉತ್ಪಾದನಾ ದೇಶವಾಗಿ ಹೊರ ಹೊಮ್ಮಿತ್ತು.

ಮೊಬೈಲ್​ ಉತ್ಪಾದನೆಯಲ್ಲಿ ಚೀನಾವನ್ನು ನಾವು ಹಿಂದಿಕ್ಕಲಿದ್ದೇವೆ: ರವಿಶಂಕರ್​ ಪ್ರಸಾದ್
ರವಿ ಶಂಕರ್ ಪ್ರಸಾದ್
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 14, 2020 | 6:57 PM

Share

ನವದೆಹಲಿ: ಮೊಬೈಲ್​ ಉತ್ಪಾದನೆಯಲ್ಲಿ ಭಾರತ ದಿನದಿಂದ ದಿನಕ್ಕೆ ಮೇಲೇರುತ್ತಲೇ ಇದೆ. ಮುಂದಿನ ವರ್ಷಗಳಲ್ಲಿ ಮೊಬೈಲ್​ ಉತ್ಪಾದನೆಯಲ್ಲಿ ನಾವು ಚೀನಾವನ್ನು ಹಿಂದಿಕ್ಕುವ ಗುರಿ ಹೊಂದಿದ್ದೇವೆ ಎಂದು ದೂರ ಸಂಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್​ ಪ್ರಸಾದ್​ ಇಂದು ಹೇಳಿದರು.

ಉತ್ಪಾದನೆ-ಸಂಬಂಧಿತ ಪ್ರೋತ್ಸಾಹ (ಪಿಎಲ್​ಐ) ಯೋಜನೆ ಅಡಿಯಲ್ಲಿ ವಿಶ್ವದ ಪ್ರಮುಖ ಮೊಬೈಲ್​ ತಯಾರಿಕಾ ಸಂಸ್ಥೆಗಳನ್ನು ಆಕರ್ಷಣೆ ಮಾಡುವುದು ನಮ್ಮ ಉದ್ದೇಶ. ಈ ಮೂಲಕ ಮೊಬೈಲ್​ ಉತ್ಪಾದನೆಯಲ್ಲಿ ಭಾರತವನ್ನು ಮೊದಲ ಸ್ಥಾನಕ್ಕೆ ತೆಗೆದುಕೊಂಡು ಹೋಗಬೇಕು ಅನ್ನೋದು ನಮ್ಮ ಉದ್ದೇಶ ಎಂದು ರವಿಶಂಕರ್ ಪ್ರಸಾದ್​ ತಿಳಿಸಿದರು.

ಭಾರತವನ್ನು ಎಲೆಕ್ಟ್ರಾನಿಕ್​ ಸಾಧನಗಳ ಹಬ್ ​ಅನ್ನಾಗಿ ಮಾಡೋದು ನಮ್ಮ ಉದ್ದೇಶ. ಮೊಬೈಲ್​ ಉತ್ಪಾದನೆಯಲ್ಲಿ ಎರಡನೇ ಸ್ಥಾನಕ್ಕೇರಬೇಕು ಎಂದು ನಾವು ಅಂದುಕೊಂಡಿದ್ದೆವು. ಅದನ್ನು ಮಾಡಿದ್ದೇವೆ. ಈಗ ಚೀನಾವನ್ನು ಹಿಂದಿಕ್ಕಿ ಮೊದಲ ಸ್ಥಾನದಲ್ಲಿರಬೇಕು ಎನ್ನುವ ಗುರಿ ಹೊಂದಿದ್ದೇವೆ ಎಂದು ರವಿಶಂಕರ್​ ಹೇಳಿದರು.

ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಮೊಬೈಲ್​ ಬಳಕೆ ಗಣನೀಯವಾಗಿ ಏರಿಕೆ ಕಂಡಿದೆ. ಹೀಗಾಗಿ, ಸಾಕಷ್ಟು ಕಂಪೆನಿಗಳು ಭಾರತದಲ್ಲಿ ಮೊಬೈಲ್​ ನಿರ್ಮಾಣ ಘಟಕ ಸ್ಥಾಪನೆ ಮಾಡಿವೆ. ಇದರ ಪರಿಣಾಮವಾಗಿ, 2017ರಲ್ಲಿ ಭಾರತ ವಿಶ್ವದ ಎರಡನೇ ಅತಿ ಹೆಚ್ಚು ಮೊಬೈಲ್​ ಉತ್ಪಾದನಾ ದೇಶವಾಗಿ ಹೊರ ಹೊಮ್ಮಿತ್ತು.

2026ರ ವೇಳೆಗೆ ಎಲೆಕ್ಟ್ರಾನಿಕ್​ ಸಾಧನಗಳ ಉತ್ಪಾದನೆಯಿಂದ 26 ಲಕ್ಷ ಕೋಟಿ ರೂಪಾಯಿ ಗಳಿಕೆ ಮಾಡುವ ಉದ್ದೇಶವನ್ನು ಭಾರತ ಇಟ್ಟುಕೊಂಡಿದೆ. ಈ ಪೈಕಿ 13 ಲಕ್ಷ ಕೋಟಿ ರೂಪಾಯಿ ಮೊಬೈಲ್​ ಕ್ಷೇತ್ರದಿಂದಲೇ ಬರುವ ಸಾಧ್ಯತೆ ಇದೆ.

ಆ್ಯಪಲ್​ ತಂದ ಆಪತ್ತು.. ಮೊಬೈಲ್ ಚಾರ್ಜ್​ ಹಾಕಿ ಜಳಕ ಮಾಡಿದ ಮಹಿಳೆ ಸಾವು!

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ