AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​ ಉತ್ಪಾದನೆಯಲ್ಲಿ ಚೀನಾವನ್ನು ನಾವು ಹಿಂದಿಕ್ಕಲಿದ್ದೇವೆ: ರವಿಶಂಕರ್​ ಪ್ರಸಾದ್

ಸಾಕಷ್ಟು ಕಂಪೆನಿಗಳು ಭಾರತದಲ್ಲಿ ಮೊಬೈಲ್​ ನಿರ್ಮಾಣ ಘಟಕ ಸ್ಥಾಪನೆ ಮಾಡಿವೆ. ಇದರ ಪರಿಣಾಮವಾಗಿ, 2017ರಲ್ಲಿ ಭಾರತ ವಿಶ್ವದ ಎರಡನೇ ಅತಿ ಹೆಚ್ಚು ಮೊಬೈಲ್​ ಉತ್ಪಾದನಾ ದೇಶವಾಗಿ ಹೊರ ಹೊಮ್ಮಿತ್ತು.

ಮೊಬೈಲ್​ ಉತ್ಪಾದನೆಯಲ್ಲಿ ಚೀನಾವನ್ನು ನಾವು ಹಿಂದಿಕ್ಕಲಿದ್ದೇವೆ: ರವಿಶಂಕರ್​ ಪ್ರಸಾದ್
ರವಿ ಶಂಕರ್ ಪ್ರಸಾದ್
ರಾಜೇಶ್ ದುಗ್ಗುಮನೆ
| Edited By: |

Updated on: Dec 14, 2020 | 6:57 PM

Share

ನವದೆಹಲಿ: ಮೊಬೈಲ್​ ಉತ್ಪಾದನೆಯಲ್ಲಿ ಭಾರತ ದಿನದಿಂದ ದಿನಕ್ಕೆ ಮೇಲೇರುತ್ತಲೇ ಇದೆ. ಮುಂದಿನ ವರ್ಷಗಳಲ್ಲಿ ಮೊಬೈಲ್​ ಉತ್ಪಾದನೆಯಲ್ಲಿ ನಾವು ಚೀನಾವನ್ನು ಹಿಂದಿಕ್ಕುವ ಗುರಿ ಹೊಂದಿದ್ದೇವೆ ಎಂದು ದೂರ ಸಂಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್​ ಪ್ರಸಾದ್​ ಇಂದು ಹೇಳಿದರು.

ಉತ್ಪಾದನೆ-ಸಂಬಂಧಿತ ಪ್ರೋತ್ಸಾಹ (ಪಿಎಲ್​ಐ) ಯೋಜನೆ ಅಡಿಯಲ್ಲಿ ವಿಶ್ವದ ಪ್ರಮುಖ ಮೊಬೈಲ್​ ತಯಾರಿಕಾ ಸಂಸ್ಥೆಗಳನ್ನು ಆಕರ್ಷಣೆ ಮಾಡುವುದು ನಮ್ಮ ಉದ್ದೇಶ. ಈ ಮೂಲಕ ಮೊಬೈಲ್​ ಉತ್ಪಾದನೆಯಲ್ಲಿ ಭಾರತವನ್ನು ಮೊದಲ ಸ್ಥಾನಕ್ಕೆ ತೆಗೆದುಕೊಂಡು ಹೋಗಬೇಕು ಅನ್ನೋದು ನಮ್ಮ ಉದ್ದೇಶ ಎಂದು ರವಿಶಂಕರ್ ಪ್ರಸಾದ್​ ತಿಳಿಸಿದರು.

ಭಾರತವನ್ನು ಎಲೆಕ್ಟ್ರಾನಿಕ್​ ಸಾಧನಗಳ ಹಬ್ ​ಅನ್ನಾಗಿ ಮಾಡೋದು ನಮ್ಮ ಉದ್ದೇಶ. ಮೊಬೈಲ್​ ಉತ್ಪಾದನೆಯಲ್ಲಿ ಎರಡನೇ ಸ್ಥಾನಕ್ಕೇರಬೇಕು ಎಂದು ನಾವು ಅಂದುಕೊಂಡಿದ್ದೆವು. ಅದನ್ನು ಮಾಡಿದ್ದೇವೆ. ಈಗ ಚೀನಾವನ್ನು ಹಿಂದಿಕ್ಕಿ ಮೊದಲ ಸ್ಥಾನದಲ್ಲಿರಬೇಕು ಎನ್ನುವ ಗುರಿ ಹೊಂದಿದ್ದೇವೆ ಎಂದು ರವಿಶಂಕರ್​ ಹೇಳಿದರು.

ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಮೊಬೈಲ್​ ಬಳಕೆ ಗಣನೀಯವಾಗಿ ಏರಿಕೆ ಕಂಡಿದೆ. ಹೀಗಾಗಿ, ಸಾಕಷ್ಟು ಕಂಪೆನಿಗಳು ಭಾರತದಲ್ಲಿ ಮೊಬೈಲ್​ ನಿರ್ಮಾಣ ಘಟಕ ಸ್ಥಾಪನೆ ಮಾಡಿವೆ. ಇದರ ಪರಿಣಾಮವಾಗಿ, 2017ರಲ್ಲಿ ಭಾರತ ವಿಶ್ವದ ಎರಡನೇ ಅತಿ ಹೆಚ್ಚು ಮೊಬೈಲ್​ ಉತ್ಪಾದನಾ ದೇಶವಾಗಿ ಹೊರ ಹೊಮ್ಮಿತ್ತು.

2026ರ ವೇಳೆಗೆ ಎಲೆಕ್ಟ್ರಾನಿಕ್​ ಸಾಧನಗಳ ಉತ್ಪಾದನೆಯಿಂದ 26 ಲಕ್ಷ ಕೋಟಿ ರೂಪಾಯಿ ಗಳಿಕೆ ಮಾಡುವ ಉದ್ದೇಶವನ್ನು ಭಾರತ ಇಟ್ಟುಕೊಂಡಿದೆ. ಈ ಪೈಕಿ 13 ಲಕ್ಷ ಕೋಟಿ ರೂಪಾಯಿ ಮೊಬೈಲ್​ ಕ್ಷೇತ್ರದಿಂದಲೇ ಬರುವ ಸಾಧ್ಯತೆ ಇದೆ.

ಆ್ಯಪಲ್​ ತಂದ ಆಪತ್ತು.. ಮೊಬೈಲ್ ಚಾರ್ಜ್​ ಹಾಕಿ ಜಳಕ ಮಾಡಿದ ಮಹಿಳೆ ಸಾವು!

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ