AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​ ಉತ್ಪಾದನೆಯಲ್ಲಿ ಚೀನಾವನ್ನು ನಾವು ಹಿಂದಿಕ್ಕಲಿದ್ದೇವೆ: ರವಿಶಂಕರ್​ ಪ್ರಸಾದ್

ಸಾಕಷ್ಟು ಕಂಪೆನಿಗಳು ಭಾರತದಲ್ಲಿ ಮೊಬೈಲ್​ ನಿರ್ಮಾಣ ಘಟಕ ಸ್ಥಾಪನೆ ಮಾಡಿವೆ. ಇದರ ಪರಿಣಾಮವಾಗಿ, 2017ರಲ್ಲಿ ಭಾರತ ವಿಶ್ವದ ಎರಡನೇ ಅತಿ ಹೆಚ್ಚು ಮೊಬೈಲ್​ ಉತ್ಪಾದನಾ ದೇಶವಾಗಿ ಹೊರ ಹೊಮ್ಮಿತ್ತು.

ಮೊಬೈಲ್​ ಉತ್ಪಾದನೆಯಲ್ಲಿ ಚೀನಾವನ್ನು ನಾವು ಹಿಂದಿಕ್ಕಲಿದ್ದೇವೆ: ರವಿಶಂಕರ್​ ಪ್ರಸಾದ್
ರವಿ ಶಂಕರ್ ಪ್ರಸಾದ್
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 14, 2020 | 6:57 PM

ನವದೆಹಲಿ: ಮೊಬೈಲ್​ ಉತ್ಪಾದನೆಯಲ್ಲಿ ಭಾರತ ದಿನದಿಂದ ದಿನಕ್ಕೆ ಮೇಲೇರುತ್ತಲೇ ಇದೆ. ಮುಂದಿನ ವರ್ಷಗಳಲ್ಲಿ ಮೊಬೈಲ್​ ಉತ್ಪಾದನೆಯಲ್ಲಿ ನಾವು ಚೀನಾವನ್ನು ಹಿಂದಿಕ್ಕುವ ಗುರಿ ಹೊಂದಿದ್ದೇವೆ ಎಂದು ದೂರ ಸಂಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್​ ಪ್ರಸಾದ್​ ಇಂದು ಹೇಳಿದರು.

ಉತ್ಪಾದನೆ-ಸಂಬಂಧಿತ ಪ್ರೋತ್ಸಾಹ (ಪಿಎಲ್​ಐ) ಯೋಜನೆ ಅಡಿಯಲ್ಲಿ ವಿಶ್ವದ ಪ್ರಮುಖ ಮೊಬೈಲ್​ ತಯಾರಿಕಾ ಸಂಸ್ಥೆಗಳನ್ನು ಆಕರ್ಷಣೆ ಮಾಡುವುದು ನಮ್ಮ ಉದ್ದೇಶ. ಈ ಮೂಲಕ ಮೊಬೈಲ್​ ಉತ್ಪಾದನೆಯಲ್ಲಿ ಭಾರತವನ್ನು ಮೊದಲ ಸ್ಥಾನಕ್ಕೆ ತೆಗೆದುಕೊಂಡು ಹೋಗಬೇಕು ಅನ್ನೋದು ನಮ್ಮ ಉದ್ದೇಶ ಎಂದು ರವಿಶಂಕರ್ ಪ್ರಸಾದ್​ ತಿಳಿಸಿದರು.

ಭಾರತವನ್ನು ಎಲೆಕ್ಟ್ರಾನಿಕ್​ ಸಾಧನಗಳ ಹಬ್ ​ಅನ್ನಾಗಿ ಮಾಡೋದು ನಮ್ಮ ಉದ್ದೇಶ. ಮೊಬೈಲ್​ ಉತ್ಪಾದನೆಯಲ್ಲಿ ಎರಡನೇ ಸ್ಥಾನಕ್ಕೇರಬೇಕು ಎಂದು ನಾವು ಅಂದುಕೊಂಡಿದ್ದೆವು. ಅದನ್ನು ಮಾಡಿದ್ದೇವೆ. ಈಗ ಚೀನಾವನ್ನು ಹಿಂದಿಕ್ಕಿ ಮೊದಲ ಸ್ಥಾನದಲ್ಲಿರಬೇಕು ಎನ್ನುವ ಗುರಿ ಹೊಂದಿದ್ದೇವೆ ಎಂದು ರವಿಶಂಕರ್​ ಹೇಳಿದರು.

ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಮೊಬೈಲ್​ ಬಳಕೆ ಗಣನೀಯವಾಗಿ ಏರಿಕೆ ಕಂಡಿದೆ. ಹೀಗಾಗಿ, ಸಾಕಷ್ಟು ಕಂಪೆನಿಗಳು ಭಾರತದಲ್ಲಿ ಮೊಬೈಲ್​ ನಿರ್ಮಾಣ ಘಟಕ ಸ್ಥಾಪನೆ ಮಾಡಿವೆ. ಇದರ ಪರಿಣಾಮವಾಗಿ, 2017ರಲ್ಲಿ ಭಾರತ ವಿಶ್ವದ ಎರಡನೇ ಅತಿ ಹೆಚ್ಚು ಮೊಬೈಲ್​ ಉತ್ಪಾದನಾ ದೇಶವಾಗಿ ಹೊರ ಹೊಮ್ಮಿತ್ತು.

2026ರ ವೇಳೆಗೆ ಎಲೆಕ್ಟ್ರಾನಿಕ್​ ಸಾಧನಗಳ ಉತ್ಪಾದನೆಯಿಂದ 26 ಲಕ್ಷ ಕೋಟಿ ರೂಪಾಯಿ ಗಳಿಕೆ ಮಾಡುವ ಉದ್ದೇಶವನ್ನು ಭಾರತ ಇಟ್ಟುಕೊಂಡಿದೆ. ಈ ಪೈಕಿ 13 ಲಕ್ಷ ಕೋಟಿ ರೂಪಾಯಿ ಮೊಬೈಲ್​ ಕ್ಷೇತ್ರದಿಂದಲೇ ಬರುವ ಸಾಧ್ಯತೆ ಇದೆ.

ಆ್ಯಪಲ್​ ತಂದ ಆಪತ್ತು.. ಮೊಬೈಲ್ ಚಾರ್ಜ್​ ಹಾಕಿ ಜಳಕ ಮಾಡಿದ ಮಹಿಳೆ ಸಾವು!

ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್