AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​ ಉತ್ಪಾದನೆಯಲ್ಲಿ ಚೀನಾವನ್ನು ನಾವು ಹಿಂದಿಕ್ಕಲಿದ್ದೇವೆ: ರವಿಶಂಕರ್​ ಪ್ರಸಾದ್

ಸಾಕಷ್ಟು ಕಂಪೆನಿಗಳು ಭಾರತದಲ್ಲಿ ಮೊಬೈಲ್​ ನಿರ್ಮಾಣ ಘಟಕ ಸ್ಥಾಪನೆ ಮಾಡಿವೆ. ಇದರ ಪರಿಣಾಮವಾಗಿ, 2017ರಲ್ಲಿ ಭಾರತ ವಿಶ್ವದ ಎರಡನೇ ಅತಿ ಹೆಚ್ಚು ಮೊಬೈಲ್​ ಉತ್ಪಾದನಾ ದೇಶವಾಗಿ ಹೊರ ಹೊಮ್ಮಿತ್ತು.

ಮೊಬೈಲ್​ ಉತ್ಪಾದನೆಯಲ್ಲಿ ಚೀನಾವನ್ನು ನಾವು ಹಿಂದಿಕ್ಕಲಿದ್ದೇವೆ: ರವಿಶಂಕರ್​ ಪ್ರಸಾದ್
ರವಿ ಶಂಕರ್ ಪ್ರಸಾದ್
ರಾಜೇಶ್ ದುಗ್ಗುಮನೆ
| Edited By: |

Updated on: Dec 14, 2020 | 6:57 PM

Share

ನವದೆಹಲಿ: ಮೊಬೈಲ್​ ಉತ್ಪಾದನೆಯಲ್ಲಿ ಭಾರತ ದಿನದಿಂದ ದಿನಕ್ಕೆ ಮೇಲೇರುತ್ತಲೇ ಇದೆ. ಮುಂದಿನ ವರ್ಷಗಳಲ್ಲಿ ಮೊಬೈಲ್​ ಉತ್ಪಾದನೆಯಲ್ಲಿ ನಾವು ಚೀನಾವನ್ನು ಹಿಂದಿಕ್ಕುವ ಗುರಿ ಹೊಂದಿದ್ದೇವೆ ಎಂದು ದೂರ ಸಂಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್​ ಪ್ರಸಾದ್​ ಇಂದು ಹೇಳಿದರು.

ಉತ್ಪಾದನೆ-ಸಂಬಂಧಿತ ಪ್ರೋತ್ಸಾಹ (ಪಿಎಲ್​ಐ) ಯೋಜನೆ ಅಡಿಯಲ್ಲಿ ವಿಶ್ವದ ಪ್ರಮುಖ ಮೊಬೈಲ್​ ತಯಾರಿಕಾ ಸಂಸ್ಥೆಗಳನ್ನು ಆಕರ್ಷಣೆ ಮಾಡುವುದು ನಮ್ಮ ಉದ್ದೇಶ. ಈ ಮೂಲಕ ಮೊಬೈಲ್​ ಉತ್ಪಾದನೆಯಲ್ಲಿ ಭಾರತವನ್ನು ಮೊದಲ ಸ್ಥಾನಕ್ಕೆ ತೆಗೆದುಕೊಂಡು ಹೋಗಬೇಕು ಅನ್ನೋದು ನಮ್ಮ ಉದ್ದೇಶ ಎಂದು ರವಿಶಂಕರ್ ಪ್ರಸಾದ್​ ತಿಳಿಸಿದರು.

ಭಾರತವನ್ನು ಎಲೆಕ್ಟ್ರಾನಿಕ್​ ಸಾಧನಗಳ ಹಬ್ ​ಅನ್ನಾಗಿ ಮಾಡೋದು ನಮ್ಮ ಉದ್ದೇಶ. ಮೊಬೈಲ್​ ಉತ್ಪಾದನೆಯಲ್ಲಿ ಎರಡನೇ ಸ್ಥಾನಕ್ಕೇರಬೇಕು ಎಂದು ನಾವು ಅಂದುಕೊಂಡಿದ್ದೆವು. ಅದನ್ನು ಮಾಡಿದ್ದೇವೆ. ಈಗ ಚೀನಾವನ್ನು ಹಿಂದಿಕ್ಕಿ ಮೊದಲ ಸ್ಥಾನದಲ್ಲಿರಬೇಕು ಎನ್ನುವ ಗುರಿ ಹೊಂದಿದ್ದೇವೆ ಎಂದು ರವಿಶಂಕರ್​ ಹೇಳಿದರು.

ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಮೊಬೈಲ್​ ಬಳಕೆ ಗಣನೀಯವಾಗಿ ಏರಿಕೆ ಕಂಡಿದೆ. ಹೀಗಾಗಿ, ಸಾಕಷ್ಟು ಕಂಪೆನಿಗಳು ಭಾರತದಲ್ಲಿ ಮೊಬೈಲ್​ ನಿರ್ಮಾಣ ಘಟಕ ಸ್ಥಾಪನೆ ಮಾಡಿವೆ. ಇದರ ಪರಿಣಾಮವಾಗಿ, 2017ರಲ್ಲಿ ಭಾರತ ವಿಶ್ವದ ಎರಡನೇ ಅತಿ ಹೆಚ್ಚು ಮೊಬೈಲ್​ ಉತ್ಪಾದನಾ ದೇಶವಾಗಿ ಹೊರ ಹೊಮ್ಮಿತ್ತು.

2026ರ ವೇಳೆಗೆ ಎಲೆಕ್ಟ್ರಾನಿಕ್​ ಸಾಧನಗಳ ಉತ್ಪಾದನೆಯಿಂದ 26 ಲಕ್ಷ ಕೋಟಿ ರೂಪಾಯಿ ಗಳಿಕೆ ಮಾಡುವ ಉದ್ದೇಶವನ್ನು ಭಾರತ ಇಟ್ಟುಕೊಂಡಿದೆ. ಈ ಪೈಕಿ 13 ಲಕ್ಷ ಕೋಟಿ ರೂಪಾಯಿ ಮೊಬೈಲ್​ ಕ್ಷೇತ್ರದಿಂದಲೇ ಬರುವ ಸಾಧ್ಯತೆ ಇದೆ.

ಆ್ಯಪಲ್​ ತಂದ ಆಪತ್ತು.. ಮೊಬೈಲ್ ಚಾರ್ಜ್​ ಹಾಕಿ ಜಳಕ ಮಾಡಿದ ಮಹಿಳೆ ಸಾವು!

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!