AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​ ಉತ್ಪಾದನೆಯಲ್ಲಿ ಚೀನಾವನ್ನು ನಾವು ಹಿಂದಿಕ್ಕಲಿದ್ದೇವೆ: ರವಿಶಂಕರ್​ ಪ್ರಸಾದ್

ಸಾಕಷ್ಟು ಕಂಪೆನಿಗಳು ಭಾರತದಲ್ಲಿ ಮೊಬೈಲ್​ ನಿರ್ಮಾಣ ಘಟಕ ಸ್ಥಾಪನೆ ಮಾಡಿವೆ. ಇದರ ಪರಿಣಾಮವಾಗಿ, 2017ರಲ್ಲಿ ಭಾರತ ವಿಶ್ವದ ಎರಡನೇ ಅತಿ ಹೆಚ್ಚು ಮೊಬೈಲ್​ ಉತ್ಪಾದನಾ ದೇಶವಾಗಿ ಹೊರ ಹೊಮ್ಮಿತ್ತು.

ಮೊಬೈಲ್​ ಉತ್ಪಾದನೆಯಲ್ಲಿ ಚೀನಾವನ್ನು ನಾವು ಹಿಂದಿಕ್ಕಲಿದ್ದೇವೆ: ರವಿಶಂಕರ್​ ಪ್ರಸಾದ್
ರವಿ ಶಂಕರ್ ಪ್ರಸಾದ್
ರಾಜೇಶ್ ದುಗ್ಗುಮನೆ
| Edited By: |

Updated on: Dec 14, 2020 | 6:57 PM

Share

ನವದೆಹಲಿ: ಮೊಬೈಲ್​ ಉತ್ಪಾದನೆಯಲ್ಲಿ ಭಾರತ ದಿನದಿಂದ ದಿನಕ್ಕೆ ಮೇಲೇರುತ್ತಲೇ ಇದೆ. ಮುಂದಿನ ವರ್ಷಗಳಲ್ಲಿ ಮೊಬೈಲ್​ ಉತ್ಪಾದನೆಯಲ್ಲಿ ನಾವು ಚೀನಾವನ್ನು ಹಿಂದಿಕ್ಕುವ ಗುರಿ ಹೊಂದಿದ್ದೇವೆ ಎಂದು ದೂರ ಸಂಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್​ ಪ್ರಸಾದ್​ ಇಂದು ಹೇಳಿದರು.

ಉತ್ಪಾದನೆ-ಸಂಬಂಧಿತ ಪ್ರೋತ್ಸಾಹ (ಪಿಎಲ್​ಐ) ಯೋಜನೆ ಅಡಿಯಲ್ಲಿ ವಿಶ್ವದ ಪ್ರಮುಖ ಮೊಬೈಲ್​ ತಯಾರಿಕಾ ಸಂಸ್ಥೆಗಳನ್ನು ಆಕರ್ಷಣೆ ಮಾಡುವುದು ನಮ್ಮ ಉದ್ದೇಶ. ಈ ಮೂಲಕ ಮೊಬೈಲ್​ ಉತ್ಪಾದನೆಯಲ್ಲಿ ಭಾರತವನ್ನು ಮೊದಲ ಸ್ಥಾನಕ್ಕೆ ತೆಗೆದುಕೊಂಡು ಹೋಗಬೇಕು ಅನ್ನೋದು ನಮ್ಮ ಉದ್ದೇಶ ಎಂದು ರವಿಶಂಕರ್ ಪ್ರಸಾದ್​ ತಿಳಿಸಿದರು.

ಭಾರತವನ್ನು ಎಲೆಕ್ಟ್ರಾನಿಕ್​ ಸಾಧನಗಳ ಹಬ್ ​ಅನ್ನಾಗಿ ಮಾಡೋದು ನಮ್ಮ ಉದ್ದೇಶ. ಮೊಬೈಲ್​ ಉತ್ಪಾದನೆಯಲ್ಲಿ ಎರಡನೇ ಸ್ಥಾನಕ್ಕೇರಬೇಕು ಎಂದು ನಾವು ಅಂದುಕೊಂಡಿದ್ದೆವು. ಅದನ್ನು ಮಾಡಿದ್ದೇವೆ. ಈಗ ಚೀನಾವನ್ನು ಹಿಂದಿಕ್ಕಿ ಮೊದಲ ಸ್ಥಾನದಲ್ಲಿರಬೇಕು ಎನ್ನುವ ಗುರಿ ಹೊಂದಿದ್ದೇವೆ ಎಂದು ರವಿಶಂಕರ್​ ಹೇಳಿದರು.

ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಮೊಬೈಲ್​ ಬಳಕೆ ಗಣನೀಯವಾಗಿ ಏರಿಕೆ ಕಂಡಿದೆ. ಹೀಗಾಗಿ, ಸಾಕಷ್ಟು ಕಂಪೆನಿಗಳು ಭಾರತದಲ್ಲಿ ಮೊಬೈಲ್​ ನಿರ್ಮಾಣ ಘಟಕ ಸ್ಥಾಪನೆ ಮಾಡಿವೆ. ಇದರ ಪರಿಣಾಮವಾಗಿ, 2017ರಲ್ಲಿ ಭಾರತ ವಿಶ್ವದ ಎರಡನೇ ಅತಿ ಹೆಚ್ಚು ಮೊಬೈಲ್​ ಉತ್ಪಾದನಾ ದೇಶವಾಗಿ ಹೊರ ಹೊಮ್ಮಿತ್ತು.

2026ರ ವೇಳೆಗೆ ಎಲೆಕ್ಟ್ರಾನಿಕ್​ ಸಾಧನಗಳ ಉತ್ಪಾದನೆಯಿಂದ 26 ಲಕ್ಷ ಕೋಟಿ ರೂಪಾಯಿ ಗಳಿಕೆ ಮಾಡುವ ಉದ್ದೇಶವನ್ನು ಭಾರತ ಇಟ್ಟುಕೊಂಡಿದೆ. ಈ ಪೈಕಿ 13 ಲಕ್ಷ ಕೋಟಿ ರೂಪಾಯಿ ಮೊಬೈಲ್​ ಕ್ಷೇತ್ರದಿಂದಲೇ ಬರುವ ಸಾಧ್ಯತೆ ಇದೆ.

ಆ್ಯಪಲ್​ ತಂದ ಆಪತ್ತು.. ಮೊಬೈಲ್ ಚಾರ್ಜ್​ ಹಾಕಿ ಜಳಕ ಮಾಡಿದ ಮಹಿಳೆ ಸಾವು!

Follow Us
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್