AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಎಲ್ಲ ಸಮಸ್ಯೆಗಳ ಬಗ್ಗೆಯೂ ಇಂದಿನ ಸಭೆಯಲ್ಲಿ ಚರ್ಚಿಸಲಾಗುವುದು: ನರೇಂದ್ರ ಸಿಂಗ್ ತೋಮರ್

ರೈತ ಚಳುವಳಿಕಾರರ ಜೊತೆ ಸಭೆ ನಡೆಸಲು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಘ್ ತೋಮರ್ ದೆಹಲಿಯ ವಿಜ್ಞಾನ ಭವನಕ್ಕೆ ಆಗಮಿಸಿದ್ದಾರೆ. ಇತ್ತ ರೈತರೂ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದು, ಬೇಡಿಕೆ ಈಡೇರಿಕೆಯೇ ನಮ್ಮ ಗುರಿ ಎಂದು ತಿಳಿಸಿದ್ದಾರೆ.

ರೈತರ ಎಲ್ಲ ಸಮಸ್ಯೆಗಳ ಬಗ್ಗೆಯೂ ಇಂದಿನ ಸಭೆಯಲ್ಲಿ ಚರ್ಚಿಸಲಾಗುವುದು: ನರೇಂದ್ರ ಸಿಂಗ್ ತೋಮರ್
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್
guruganesh bhat
| Edited By: ಸಾಧು ಶ್ರೀನಾಥ್​|

Updated on:Jan 04, 2021 | 1:32 PM

Share

ದೆಹಲಿ: ರೈತ ಚಳುವಳಿಯ 40ನೇ ದಿನ ನಡೆಯಲಿರುವ 7 ಸುತ್ತಿನ ಸಭೆಗೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಆಗಮಿಸಿದ್ದಾರೆ. ‘ಇಂದಿನ ಸಭೆಯಲ್ಲಿ ರೈತರ ಎಲ್ಲ ಸಮಸ್ಯೆಗಳ ಕುರಿತು ಚರ್ಚಿಸಲಾಗುವುದು’ ಎಂದು ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಇಂದಿನ ಸಭೆಯಲ್ಲಿ ಬೇಡಿಕೆಗಳು ಈಡೇರದಿದ್ದರೆ ಜನವರಿ 6 ಮತ್ತು 26ರಂದು ಟ್ರ್ಯಾಕ್ಟರ್​  ಮೆರವಣಿಗೆ ಆಯೋಜಿಸುತ್ತೇವೆ ಎಂದು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿಯ ಜಂಟಿ ಕಾರ್ಯದರ್ಶಿ ಸುಖ್ವಿಂದರ್ ಎಸ್. ಸಬ್ರಾ ತಿಳಿಸಿದ್ದಾರೆ. ಭಾರತೀಯ ಕಿಸಾನ್ ಯೂನಿಯನ್​ನ ಮಾಧ್ಯಮ ವಕ್ತಾರ ರಾಕೇಶ್ ಟಿಕಾಯತ್, ಈವರೆಗೆ 60 ರೈತರು ಮೃತರಾಗಿದ್ದು, ರೈತರ ಸಾವಿಗೆ ಕೇಂದ್ರ ಸರ್ಕಾರವೇ ಉತ್ತರದಾಯಿಯಾಗಿದೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಹರಿಯಾಣ ಮುಖ್ಯಮಂತ್ರಿ ಖಟ್ಟರ್​  ಜನರಲ್  ಡೈಯರ್​ಗೆ  ಹೋಲಿಕೆ ಇಂದು ಬೆಳಗ್ಗೆ ದೆಹಲಿಯತ್ತ ಹೊರಟ ಹರಿಯಾಣದ ರೈತರ ಮೇಲೆ ಅಶ್ರವಾಯು ಪ್ರಯೋಗಿಸಿದ ಕುರಿತು ಆಮ್​ಆದ್ಮಿ ಪಕ್ಷ ಮುನಿಸಿಕೊಂಡಿದೆ. ಹರಿಯಾಣ ಮುಖ್ಯಮಂತ್ರಿ ಮೋಹನ್ ಲಾಲ್ ಖಟ್ಟರ್​ರನ್ನು ಜಲಿಯನ್ ವಾಲಾಬಾಗ್ ಹತ್ಯಾಕಾಂಡಕ್ಕೆ ಕಾರಣವಾದ ಜನರಲ್ ರೆಜಿನಾಲ್ಡ್ ಡೈಯರ್​ಗೆ ಆಮ್​ಆದ್ಮಿಯ ಮುಖಂಡ ರಾಘವ್ ಛಡ್ಡಾ ಹೋಲಿಸಿದ್ದಾರೆ. ರೈತರು ಸರ್ಕಾರದ ಶತ್ರುಗಳೇ ಎಂದು ಪ್ರಶ್ನಿಸಿರುವ ಅವರು, ಅವರು ನಮ್ಮ ದೇಶದ ರೈತರೇ ಹೊರತು ಚೀನಾ ಮತ್ತು ಪಾಕಿಸ್ತಾನದ ಸೈನಿಕರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Delhi Chalo: ಇಂದು 7ನೇ ಸುತ್ತಿನ ಸಭೆ; ಫಲಿತಾಂಶಕ್ಕೆ ಕಾದು ಕುಳಿತಿದೆ ಇಡೀ ದೇಶ

Published On - 1:32 pm, Mon, 4 January 21

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ