AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದ ರೀತಿಯೇ ನಾವು ಕರ್ನಾಟಕಕ್ಕೆ ಪ್ರವೇಶಿಸುತ್ತೇವೆ, ನಮಗೆ‌ ಯಾರ ಒಪ್ಪಿಗೆ ಬೇಕಾಗಿಲ್ಲ: ಶಿವಸೇನೆ ನಾಯಕ ಸಂಜಯ್ ರಾವತ್

ಚೀನಾದ ರೀತಿಯೇ ನಾವು ಕರ್ನಾಟಕಕ್ಕೆ ಪ್ರವೇಶಿಸುತ್ತೇವೆ. ನಮಗೆ‌ ಯಾರ ಒಪ್ಪಿಗೆ ಬೇಕಾಗಿಲ್ಲ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಉದ್ಧಟತನದ ಮಾತುಗಳನ್ನು ಆಡಿದ್ದಾರೆ.

ಚೀನಾದ ರೀತಿಯೇ ನಾವು ಕರ್ನಾಟಕಕ್ಕೆ ಪ್ರವೇಶಿಸುತ್ತೇವೆ, ನಮಗೆ‌ ಯಾರ ಒಪ್ಪಿಗೆ ಬೇಕಾಗಿಲ್ಲ: ಶಿವಸೇನೆ ನಾಯಕ ಸಂಜಯ್ ರಾವತ್
ಶಿವಸೇನೆ ನಾಯಕ ಸಂಜಯ್​ ರಾವತ್​
TV9 Web
| Edited By: ವಿವೇಕ ಬಿರಾದಾರ|

Updated on: Dec 21, 2022 | 5:23 PM

Share

ನವದೆಹಲಿ: ಚೀನಾದ (China) ರೀತಿಯೇ ನಾವು ಕರ್ನಾಟಕಕ್ಕೆ (Karnataka) ಪ್ರವೇಶಿಸುತ್ತೇವೆ. ನಮಗೆ‌ ಯಾರ ಒಪ್ಪಿಗೆ ಬೇಕಾಗಿಲ್ಲ ಎಂದು ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರವಾಗಿ ಶಿವಸೇನೆ (shivsena) ನಾಯಕ ಸಂಜಯ್ ರಾವತ್ (Sanjay Rawat) ಉದ್ಧಟತನದ ಮಾತುಗಳನ್ನು ಆಡಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಚೀನಾದ ರೀತಿಯಲ್ಲಿಯೇ ನಾವು ಕರ್ನಾಟಕಕ್ಕೆ ಪ್ರವೇಶ ಮಾಡುತ್ತೇವೆ. ಮಾತುಕತೆ ಮೂಲಕ ವಿವಾದ ಬಗೆಹರಿಸಲು ಒಪ್ಪಿಗೆ ಇದೆ. ಆದರೆ ಕರ್ನಾಟಕ ಮುಖ್ಯಮಂತ್ರಿ ವಿವಾದದ ಕಿಡಿ ಹಚ್ಚುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ದುರ್ಬಲ ಸರಕಾರವಿದೆ. ಗಡಿ‌ ವಿಚಾರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜನ ಸಾಮಾನ್ಯರ ನೆಮ್ಮದಿಗೆ ಬೆಂಕಿ‌ ಇಡುವ ಹೇಳಿಕೆಯನ್ನ ನೀಡಬಾರದು

ಇದಕ್ಕೆ ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಜನ ಸಾಮಾನ್ಯರ ನೆಮ್ಮದಿಗೆ ಬೆಂಕಿ‌ ಇಡುವ ಹೇಳಿಕೆಯನ್ನ ನೀಡಬಾರದು. ಮಹಾರಾಷ್ಟ್ರ ಸಿಎಂ, ನಮ್ಮ ಸಿಎಂ ಜೊತೆ ಅಮಿತ್​ ಶಾ ಸಭೆ ನಡೆಸಿದ್ದಾರೆ. ಯಾವುದೇ ಹೇಳಿಕೆ ನೀಡದಂತೆ ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಎರಡು ರಾಜ್ಯದ ರಾಜಕೀಯ ಮುಖಂಡರು ಸಂಯಮ ತೋರಬೇಕು. ಎರಡು ರಾಜ್ಯದ ಸರ್ಕಾರ ಕಟ್ಟು ‌ನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಯಾವುದೇ ಕಾನೂನು ಸುವ್ಯವಸ್ಥೆಗೆ ಬಂಗ ಆಗದಂತೆ ನೋಡಿಕೊಳ್ಳಬೇಕು. ಯಾವುದೆ ಹೇಳಿಕೆ ಕೊಡಬಾರದು ಅಂತ ಅಮಿತ್ ಶಾ ಹೇಳಿದ್ದಾರೆ ಎಂದು ಆರಗ ಜ್ಞಾನೇಂದ್ರ ಮಾಹಿತಿ ನೀಡಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ