AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonia Gandhi: ಕಾಂಗ್ರೆಸ್​ನ ನವ ಸಂಕಲ್ಪಗಳ ಬಗ್ಗೆ ಮಾಹಿತಿ ನೀಡಿದ ಸೋನಿಯಾ ಗಾಂಧಿ

Sonia Gandhi: ಕಾಂಗ್ರೆಸ್( Congres)​ಗೆ ಮರುಜೀವ ನೀಡುವ ಉದ್ದೇಶದಿಂದ ಗಾಂಧಿ ಜಯಂತಿ ದಿನದಂದು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತವನ್ನು ಒಗ್ಗೂಡಿಸುವ ಯಾತ್ರೆಯನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ( Sonia Gandhi) ತಿಳಿಸಿದ್ದಾರೆ.

Sonia Gandhi: ಕಾಂಗ್ರೆಸ್​ನ ನವ ಸಂಕಲ್ಪಗಳ ಬಗ್ಗೆ ಮಾಹಿತಿ ನೀಡಿದ ಸೋನಿಯಾ ಗಾಂಧಿ
Sonia Gandhi
TV9 Web
| Edited By: |

Updated on: May 15, 2022 | 6:41 PM

Share

ಕಾಂಗ್ರೆಸ್( Congres)​ಗೆ ಮರುಜೀವ ನೀಡುವ ಉದ್ದೇಶದಿಂದ ಗಾಂಧಿ ಜಯಂತಿ ದಿನದಂದು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತವನ್ನು ಒಗ್ಗೂಡಿಸುವ ಯಾತ್ರೆಯನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ( Sonia Gandhi) ತಿಳಿಸಿದ್ದಾರೆ.

ಉದಯಪುರದಲ್ಲಿ ಆರಮಭವಾದ ಕಾಂಗ್ರೆಸ್​ನ ಚಿಂತನಾ ಶಿಬಿರದ ಅಂತಿಮ ದಿನವಾದ ಇಂದು ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಹಿರಿಯರು ಕೂಡ ಯಾವುದೇ ಅವಕಾಶದಿಂದ ವಂಚಿತರಾಗದಂತೆ ನೋಡಿಕೊಳ್ಳುತ್ತೇವೆ ಎಂದರು.

ಉದಯಪುರದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಚಿಂತನ ಶಿಬಿರ ಇಂದು ಅಂತ್ಯಗೊಂಡಿದ್ದು, ತಮ್ಮ ಶಿಬಿರದ ಕೊನೆಯಲ್ಲಿ ಸೋನಿಯಾಗಾಂಧಿ ಈ ಘೋಷಣೆಯನ್ನು ಮಾಡಿದ್ದಾರೆ.

2024ರ ಲೋಕಸಭಾ ಚುನಾವಣೆಯನ್ನು ಗುರಿಯಾಗಿಸಿಕೊಂಡು ಎಲ್ಲಾ ಲೋಕಸಭಾ ಕ್ಷೇತ್ರಗಳನ್ನು ಜೋಡಿಸುವ ನಿಟ್ಟಿನಲ್ಲಿ ಈ ಯಾತ್ರೆಯು ನಡೆಯಲಿದೆ. ಕೇಂದ್ರ ಸರ್ಕಾರದ ವಿವಿಧ ವೈಫಲ್ಯ ಹಾಗೂ ಕಾಂಗ್ರೆಸ್​ನ ಸಂಘಟನೆ ದೃಷ್ಟಿಯಿಂದ ಈ ಯಾತ್ರೆ ಪ್ರಮುಖವಾಗಿದೆ ಎಂದು ಸೋನಿಯಾ ಗಾಂಧಿ ಹೇಳಿಕೊಂಡಿದ್ದಾರೆ.

ಎಲ್ಲಾ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲೂ ಜನಜಾಗರಣ ಅಭಿಯಾನವೂ ಕೂಡ ನಡೆಯಲಿದೆ. ಪಕ್ಷದ ಸಾಕಷ್ಟು ಆಂತರಿಕ ವಿಚಾರ ಹಾಗೂ ಸಂಘಟನೆಯ ದೃಷ್ಟಿಯಿಂದ ವಿವಿಧ ಕಾರ್ಯಪಡೆಯನ್ನು ರಚಿಸಲು ನಿರ್ಧರಿಸಲಾಗಿದೆ. ಇನ್ನೆರಡು ಮೂರು ದಿನಗಳಲ್ಲಿ ಕಾರ್ಯಪಡೆಯನ್ನು ಘೋಷಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಮೂರು ದಿನಗಳ ಶಿಬಿರವು ಒಬ್ಬರನ್ನೊಬ್ಬರು ಪರಿಚಯ ಮಾಡಿಕೊಳ್ಳಲು ನೆರವಾಗಿದೆ ಎಂದು ಹೇಳಿದ್ದಾರೆ. ಈ ಎಲ್ಲಾ ವಿಷಯಗಳ ಮೇಲೆ ಪಕ್ಷದ ನೀತಿ, ನಿಲುವು ಹೇಗಿರಬೇಕು ಎಂಬ ಕಾರ್ಯಸೂಚಿ ರೂಪಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಆರು ಸಮಿತಿಗಳನ್ನು ರಚನೆ ಮಾಡಿದ್ದರು. ಆ ಸಮಿತಿಗಳು ನವ ಸಂಕಲ್ಪ ಶಿಬಿರದಲ್ಲಿ ಕೂಲಂಕಷವಾಗಿ ಚರ್ಚೆ ಮಾಡಿ ನೀಡುವ ವರದಿ ಆಧರಿಸಿ ಮುಂದಿನ ತೀರ್ಮಾನ ಏನೆಂಬುದನ್ನು ತಿಳಿಸಲಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?