AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿ ಮೀಸಲಾತಿ: ಯುಪಿ ಸರ್ಕಾರದ ಕರಡು ಅಧಿಸೂಚನೆಯನ್ನು ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

OBC reservation ಅಗತ್ಯವಿದ್ದರೆ, ಹೈಕೋರ್ಟ್ ಆದೇಶದ ವಿರುದ್ಧ ಸರ್ಕಾರ ಸುಪ್ರೀಂಕೋರ್ಟ್‌ಗೆ ಮೊರೆ ಹೋಗಬಹುದು ಎಂದು ಆದಿತ್ಯನಾಥ ಹೇಳಿದ್ದಾರೆ. ಇದರಿಂದಾಗಿ ಈಗಾಗಲೇ ವಿಳಂಬವಾಗಿರುವ ನಾಗರಿಕ ಚುನಾವಣೆಯನ್ನು ಮತ್ತಷ್ಟು ಮುಂದೂಡಲಾಗುವುದು.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿ ಮೀಸಲಾತಿ: ಯುಪಿ ಸರ್ಕಾರದ ಕರಡು ಅಧಿಸೂಚನೆಯನ್ನು ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್
ಯೋಗಿ ಆದಿತ್ಯನಾಥ
TV9 Web
| Edited By: |

Updated on:Dec 27, 2022 | 7:30 PM

Share

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿ ಮೀಸಲಾತಿ (OBC reservation) ವಿಷಯದ ಬಗ್ಗೆ ನಿರ್ಧರಿಸಲು ರಾಜ್ಯ ಸರ್ಕಾರ ಆಯೋಗವನ್ನು ರಚಿಸಲಿದೆ ಎಂದು ಉತ್ತರ ಪ್ರದೇಶದ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ (Yogi Adityanath) ಮಂಗಳವಾರ ಹೇಳಿದ್ದಾರೆ. ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ನಾಗರಿಕ ಚುನಾವಣೆಯ ಕುರಿತು ರಾಜ್ಯ ಸರ್ಕಾರದ ಕರಡು ಅಧಿಸೂಚನೆಯನ್ನು ತಿರಸ್ಕರಿಸಿ ಒಬಿಸಿಗಳಿಗೆ ಮೀಸಲಾತಿಯಿಲ್ಲದೆ ಚುನಾವಣೆಗಳನ್ನು ನಡೆಸುವಂತೆ ಆದೇಶಿಸಿದ ನಂತರ ಮುಖ್ಯಮಂತ್ರಿಯ ಹೇಳಿಕೆ ಬಂದಿದೆ. ಅಗತ್ಯವಿದ್ದರೆ, ಹೈಕೋರ್ಟ್ ಆದೇಶದ ವಿರುದ್ಧ ಸರ್ಕಾರ ಸುಪ್ರೀಂಕೋರ್ಟ್‌ಗೆ ಮೊರೆ ಹೋಗಬಹುದು ಎಂದು ಆದಿತ್ಯನಾಥ ಹೇಳಿದ್ದಾರೆ. ಇದರಿಂದಾಗಿ ಈಗಾಗಲೇ ವಿಳಂಬವಾಗಿರುವ ನಾಗರಿಕ ಚುನಾವಣೆಯನ್ನು ಮತ್ತಷ್ಟು ಮುಂದೂಡಲಾಗುವುದು. ನ್ಯಾಯಾಲಯದ ಆದೇಶದ ಎಲ್ಲಾ ಅಂಶಗಳ ಬಗ್ಗೆ ಕಾನೂನು ತಜ್ಞರನ್ನು ಸಂಪರ್ಕಿಸಿದ ನಂತರ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಬಗ್ಗೆ ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಟ್ವೀಟ್ ಮಾಡಿದ್ದು ಯಾವುದೇ ಸಂದರ್ಭದಲ್ಲೂ ಒಬಿಸಿ ಹಕ್ಕುಗಳ ವಿಷಯದಲ್ಲಿ ರಾಜ್ಯ ಸರ್ಕಾರ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಅಧಿಸೂಚನೆಯನ್ನು ಪ್ರಶ್ನಿಸುವ ಹಲವಾರು ಅರ್ಜಿಗಳು ಬಂದಿದ್ದು, ಯುಪಿ ಸರ್ಕಾರವು ಉನ್ನತ ನ್ಯಾಯಾಲಯದ ಸೂತ್ರವನ್ನು ಅನುಸರಿಸಬೇಕು ಮತ್ತು ಕೋಟಾವನ್ನು ನಿಗದಿಪಡಿಸುವ ಮೊದಲು ಒಬಿಸಿಗಳ ರಾಜಕೀಯ ಹಿಂದುಳಿದಿರುವಿಕೆಯನ್ನು ಅಧ್ಯಯನ ಮಾಡಲು ಮೀಸಲಾದ ಸಮಿತಿಯನ್ನು ಸ್ಥಾಪಿಸಲು ಮನವಿ ಮಾಡಿದೆ. ಡಿಸೆಂಬರ್ 5 ರ ಕರಡು ಪ್ರಕಾರ, ಅಲಿಘರ್, ಮಥುರಾ-ವೃಂದಾವನ, ಮೀರತ್ ಮತ್ತು ಪ್ರಯಾಗ್‌ರಾಜ್‌ನ ನಾಲ್ಕು ಮೇಯರ್ ಸ್ಥಾನಗಳನ್ನು ಒಬಿಸಿ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಇವುಗಳಲ್ಲಿ ಅಲಿಗಢ ಮತ್ತು ಮಥುರಾ-ವೃಂದಾವನದ ಮೇಯರ್ ಹುದ್ದೆಗಳು ಒಬಿಸಿ ಮಹಿಳೆಯರಿಗೆ ಮೀಸಲಾಗಿತ್ತು.

ಹೆಚ್ಚುವರಿಯಾಗಿ 200 ಮುನ್ಸಿಪಲ್ ಕೌನ್ಸಿಲ್‌ಗಳಲ್ಲಿ 54 ಅಧ್ಯಕ್ಷರ ಸ್ಥಾನಗಳನ್ನು ಒಬಿಸಿಗಳಿಗೆ ಮೀಸಲಿಡಲಾಗಿದೆ. ಇದರಲ್ಲಿ 18 ಒಬಿಸಿ ಮಹಿಳೆಯರಿಗೆ ಸೇರಿದೆ. 545 ನಗರ ಪಂಚಾಯತ್‌ಗಳಲ್ಲಿ ಅಧ್ಯಕ್ಷ ಸ್ಥಾನಗಳಿಗೆ 147 ಸ್ಥಾನಗಳನ್ನು ಒಬಿಸಿ ಅಭ್ಯರ್ಥಿಗಳಿಗೆ ಮೀಸಲಿಡಲಾಗಿತ್ತು, ಇದರಲ್ಲಿ 49 ಒಬಿಸಿ ಮಹಿಳೆಯರು ಸೇರಿದ್ದಾರೆ.

ಒಬಿಸಿ ಪಕ್ಷವಾದ ಅಪ್ನಾ ದಳ (ಎಸ್), ಉತ್ತರ ಪ್ರದೇಶ ಮತ್ತು ಕೇಂದ್ರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರವನ್ನು ಹಂಚಿಕೊಳ್ಳುತ್ತಿದೆ. ತಮ್ಮ ದೃಷ್ಟಿಯಲ್ಲಿ ಒಬಿಸಿ ಮೀಸಲಾತಿ ಇಲ್ಲದೆ ನಾಗರಿಕ ಚುನಾವಣೆಗಳನ್ನು ನಡೆಸುವುದು ಸಮರ್ಥನೀಯವಲ್ಲ ಎಂದು ಅದು ಸ್ಪಷ್ಟಪಡಿಸಿದೆ. ನಾವು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ಹೈಕೋರ್ಟ್ ಆದೇಶವನ್ನು ವಿವರವಾಗಿ ಅಧ್ಯಯನ ಮಾಡುತ್ತೇವೆ. ಆದರೆ ಅಗತ್ಯವಿದ್ದರೆ, ನಾವು ಈ ವಿಷಯದ ಬಗ್ಗೆ ಸುಪ್ರೀಂಕೋರ್ಟ್ ಅನ್ನು ಸಹ ಸಂಪರ್ಕಿಸುತ್ತೇವೆ ಅಪ್ನಾ ದಳ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: ರಾಹುಲ್ ಗಾಂಧಿಯನ್ನು ರಾಮನಿಗೆ ಹೋಲಿಸಿದ ಖುರ್ಷಿದ್ ವಿರುದ್ಧ ಬಿಜೆಪಿ ವಾಗ್ದಾಳಿ; ರಾಮನ ಸೇನೆ ಬಟ್ಟೆ ಬಿಚ್ಚಿ ಓಡಾಡಬೇಕು ಎಂದ ಬಿಜೆಪಿ ನಾಯಕ

ಹೈಕೋರ್ಟ್ ಆದೇಶದ ನಂತರ, ಸಮಾಜವಾದಿ ಪಕ್ಷ ಸೇರಿದಂತೆ ವಿರೋಧ ಪಕ್ಷಗಳು ಬಿಜೆಪಿ ಒಬಿಸಿ ಕೋಟಾವನ್ನು ಕೊನೆಗೊಳಿಸಲು ಪಿತೂರಿ ನಡೆಸಿದೆ ಎಂದು ಆರೋಪಿಸಿ ಆಡಳಿತ ಸರ್ಕಾರವನ್ನು ಮೂಲೆಗುಂಪು ಮಾಡಿದೆ. ಈ ಅನ್ಯಾಯವನ್ನು ನಾವು ಸಹಿಸುವುದಿಲ್ಲ ಎಂದು ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್  ಮಾಡಿ

Published On - 7:21 pm, Tue, 27 December 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ