AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​​ನಿಂದ ಬಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗುವುದು: ಕೇರಳ ಸಿಎಂ ಪಿಣರಾಯಿ ವಿಜಯನ್​

ಸುಮಾರು 3,379 ಮಲಯಾಳಿ ವಿದ್ಯಾರ್ಥಿಗಳು ಕೇಂದ್ರ ಸರ್ಕಾರ ಮತ್ತು ಮುಂಬೈ ಹಾಗೂ ದೆಹಲಿಯಲ್ಲಿರುವ ಅನಿವಾಸಿ ಕೇರಳಿಗರ ವ್ಯವಹಾರಗಳ ಅಭಿವೃದ್ಧಿ ಇಲಾಖೆ (NORKA)ಯ ಸಹಕಾರದಿಂದ ಉಕ್ರೇನ್​​ನಿಂದ ವಾಪಸ್​ ರಾಜ್ಯಕ್ಕೆ ಬಂದಿದ್ದಾರೆ ಎಂದು ಸಿಎಂ ಪಿಣರಾಯಿ ವಿಜಯನ್ ಮಾಹಿತಿ ನೀಡಿದ್ದಾರೆ.

ಉಕ್ರೇನ್​​ನಿಂದ ಬಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗುವುದು: ಕೇರಳ ಸಿಎಂ ಪಿಣರಾಯಿ ವಿಜಯನ್​
ಪಿಣರಾಯಿ ವಿಜಯನ್​​
TV9 Web
| Updated By: Lakshmi Hegde|

Updated on:Mar 15, 2022 | 3:43 PM

Share

ಯುದ್ಧ ನೆಲ ಉಕ್ರೇನ್​ನಿಂದ (War hit Ukraine) ವಾಪಸ್​ ಬಂದಿರುವ ಕೇರಳದ ವಿದ್ಯಾರ್ಥಿಗಳಿಗೆ ಅವರ ಶಿಕ್ಷಣ ಮುಂದುವರಿಸಲು ಕೇರಳ ಸರ್ಕಾರ ಎಲ್ಲ ರೀತಿಯ ಅನುಕೂಲ ಮಾಡಿಕೊಡುವುದಾಗಿ ಅಲ್ಲಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ ತಿಳಿಸಿದ್ದಾರೆ. ವೈದ್ಯಕೀಯ ಮತ್ತಿ ಇನ್ನಿತರ ಕೋರ್ಸ್​​ಗಳನ್ನು ಅರ್ಧಕ್ಕೆ ಬಿಟ್ಟು ಹಲವು ವಿದ್ಯಾರ್ಥಿಗಳು ಬಂದಿದ್ದಾರೆ. ಅವರಿಗೆ ರಾಜ್ಯದಲ್ಲಿಯೇ ಶಿಕ್ಷಣ ಮುಂದುವರಿಸಲು ಏನೆಲ್ಲ ವ್ಯವಸ್ಥೆ ಮಾಡಬೇಕು ಅದನ್ನು ನಮ್ಮ ಸರ್ಕಾರ ಮಾಡುತ್ತದೆ ಎಂದು ಸಿಎಂ ಪಿಣರಾಯಿ ವಿಜಯನ್​ ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ವೈದ್ಯಕೀಯ ಆಯೋಗ (NMC-National Medical Commission) ಕ್ಕೂ ತಿಳಿಸಿದ್ದಾರೆ.

ಉಕ್ರೇನ್​​ನಿಂದ ಬಂದಿರುವ ಕೇರಳದ ವಿದ್ಯಾರ್ಥಿಗಳಿಗೆ ಅವರ ಒಂದು ವರ್ಷದ ಇಂಟರ್ನ್​ಶಿಪ್​ ಮತ್ತು ಬಾಕಿ ಉಳಿದಿರುವ ವರ್ಷದ ಅಧ್ಯಯನಕ್ಕೆ ಸಂಯೋಜಿತ ವೈದ್ಯಕೀಯ ಕಾಲೇಜುಗಳು ಮತ್ತು ಅವುಗಳ ಆಸ್ಪತ್ರೆಗಳಲ್ಲಿ ತಾತ್ಕಾಲಿಕವಾದ, ಶುಲ್ಕ ರಹಿತ ನೋಂದಣಿ ನೀಡುವಂತೆ ರಾಜ್ಯ ವೈದ್ಯಕೀಯ ಮಂಡಳಿಗೆ ಸೂಚಿಸಲಾಗಿದೆ ಎಂದೂ ಪಿಣರಾಯಿ ವಿಜಯನ್ ಕೇರಳ ವಿಧಾನಸಭೆ ಅಧಿವೇಶನದಲ್ಲಿ ಮಾಹಿತಿ ನೀಡಿದ್ದಾರೆ.  ಸಿಪಿಐ (ಎಂ) ಶಾಸಕ ಸಿ.ಎಕ.ಹರೀಂದ್ರನ್​ ಅವರ ಪ್ರಶ್ನೆಗೆ ಉತ್ತರಿಸುತ್ತ ಈ ವಿಷಯಗಳನ್ನು ತಿಳಿಸಿದ್ದಾರೆ. ಕೇರಳದ ವಿದ್ಯಾರ್ಥಿಗಳು ಹಲವರು ಉಕ್ರೇನ್​​ನಿಂದ ಬಂದಿದ್ದಾರೆ. ಅಲ್ಲಿನ ಯುದ್ಧದಿಂದಾಗಿ ಅವರ ಶಿಕ್ಷಣ ಅರ್ಧಕ್ಕೇ ಕಡಿತಗೊಂಡಿದೆ. ಈಗ ಅವರ ಪಾಡೇನು? ಅವರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಏನೆಲ್ಲ ಕ್ರಮ ಕೈಗೊಳ್ಳುತ್ತಿದೆ ಎಂದು ಹರೀಂದ್ರನ್​ ಪ್ರಶ್ನೆ ಕೇಳಿದ್ದರು. ಈ ವೇಳೆ ಪಿಣರಾಯಿ ವಿಜಯನ್​ ಹೀಗೆ ಉತ್ತರಿಸಿದ್ದಾರೆ.

ಸುಮಾರು 3,379 ಮಲಯಾಳಿ ವಿದ್ಯಾರ್ಥಿಗಳು ಕೇಂದ್ರ ಸರ್ಕಾರ ಮತ್ತು ಮುಂಬೈ ಹಾಗೂ ದೆಹಲಿಯಲ್ಲಿರುವ ಅನಿವಾಸಿ ಕೇರಳಿಗರ ವ್ಯವಹಾರಗಳ ಅಭಿವೃದ್ಧಿ ಇಲಾಖೆ (NORKA)ಯ ಸಹಕಾರದಿಂದ ಉಕ್ರೇನ್​​ನಿಂದ ವಾಪಸ್​ ರಾಜ್ಯಕ್ಕೆ ಬಂದಿದ್ದಾರೆ. ಉಕ್ರೇನ್​ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುವಲ್ಲಿ ಕೇಂದ್ರ ಸರ್ಕಾರ ಮಹತ್ವದ ಪಾತ್ರ ವಹಿಸಿದೆ. ಹೀಗೆ ಅಲ್ಲಿಂದ ಬಂದಿರುವವರ ಶಿಕ್ಷಣದ ಜವಾಬ್ದಾರಿ ನಮ್ಮದು. ಅವರು ಕೋರ್ಸ್​ಗಳನ್ನು ಮುಂದುವರಿಸಿ, ಸರ್ಟಿಫಿಕೆಟ್​ ಪಡೆಯಲು ವ್ಯವಸ್ಥೆ ಮಾಡಲಾಗುವುದು ಎಂದೂ ಸಿಎಂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಉಕ್ರೇನ್​ನಿಂದ ಹೊರಬಿದ್ದಿರುವ ಸುಮಾರು 28 ಲಕ್ಷ ನಿರಾಶ್ರಿತರು ಯಾವ ರಾಷ್ಟ್ರಗಳಲ್ಲಿ ಆಶ್ರಯ ಪಡೆದಿದ್ದಾರೆ?

Published On - 8:38 am, Tue, 15 March 22

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ