AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶಾದ್ಯಂತ ಸರ್ಕಾರಿ ಕಚೇರಿಗಳನ್ನು ಗಲ್ಲ ಮಂಡಿಗಳನ್ನಾಗಿ ಪರಿವರ್ತಿಸುವ ಎಚ್ಚರಿಕೆ ನೀಡಿದ ರಾಕೇಶ್​ ಟಿಕಾಯತ್​

ಬಿಜೆಪಿ ಅತ್ಯಂತ ಅಪಾಯಕಾರಿ ಪಕ್ಷ. ನಮ್ಮ ಮಾತನ್ನು ಕೇಳಿ, ಕೃಷಿ ಕಾಯ್ದೆಗಳನ್ನು ವಾಪಸ್​ ಪಡೆಯದೆ ಇದ್ದರೆ ಅದರ ವಿರುದ್ಧ ಹೋರಾಟ ನಿರಂತರವಾಗಿ ಮುಂದುವರಿಸುತ್ತೇವೆ. ನಾವು ಯಾವುದೇ ರಾಜಕೀಯ ಪಕ್ಷಗಳ ಜತೆಗೂ ಇಲ್ಲ. ಆದರೆ ಬಿಜೆಪಿಯನ್ನು ಖಂಡಿತ ವಿರೋಧಿಸುತ್ತೇವೆ ಎಂದು ಹೇಳಿದ್ದಾರೆ.

ದೇಶಾದ್ಯಂತ ಸರ್ಕಾರಿ ಕಚೇರಿಗಳನ್ನು ಗಲ್ಲ ಮಂಡಿಗಳನ್ನಾಗಿ ಪರಿವರ್ತಿಸುವ ಎಚ್ಚರಿಕೆ ನೀಡಿದ ರಾಕೇಶ್​ ಟಿಕಾಯತ್​
ರಾಕೇಶ್​ ಟಿಕಾಯತ್​
TV9 Web
| Edited By: |

Updated on: Oct 31, 2021 | 11:07 AM

Share

ದೆಹಲಿ: ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಬಲವಂತವಾಗಿ ಅಲ್ಲಿಂದ ಕಳಿಸಿದರೆ, ನಾವು ಸುಮ್ಮನೆ ಇರುವುದಿಲ್ಲ. ದೇಶಾದ್ಯಂತ ಇರುವ ಎಲ್ಲ ಸರ್ಕಾರಿ ಕಚೇರಿಗಳನ್ನೂ ಗಲ್ಲ ಮಂಡಿ (ಕಾಳುಕಡಿ ಮಾರುಕಟ್ಟೆ)ಯನ್ನಾಗಿ ಪರಿವರ್ತಿಸುತ್ತೇವೆ ಎಂದು ಭಾರತೀಯ ಕಿಸಾನ್​ ಯೂನಿಯನ್​ (BKU) ನಾಯಕ ರಾಕೇಶ್​ ಟಿಕಾಯತ್ ಟ್ವೀಟ್​ ಮೂಲಕ​​ ಎಚ್ಚರಿಕೆ ನೀಡಿದ್ದಾರೆ.  ಅಷ್ಟೇ ಅಲ್ಲ, ರೈತರು ತಾವು ಬೆಳೆದ ಕೃಷಿ ಉತ್ಪನ್ನಗಳನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಹಾಗಾಗಿ ರೈತರು ಸಂಸತ್ತಿನ ಎದುರು ಕೃಷಿ ಉತ್ಪನ್ನಗಳ ಮಾರಾಟ ಮಾಡಲು ಇಚ್ಛಿಸುತ್ತಿದ್ದಾರೆ ಎಂದೂ ತಿಳಿಸಿದರು.  

ಅದಕ್ಕೂ ಮೊದಲು ನಿನ್ನೆ ಉತ್ತರ ಪ್ರದೇಶದಲ್ಲಿ ನಡೆದ ಮಹಾಪಂಚಾಯತ್​​ನಲ್ಲಿ ಮಾತನಾಡಿದ ರಾಕೇಶ್​ ಟಿಕಾಯತ್​, ಟಿಕ್ರಿ ಹಾಗೂ ಘಾಜಿಯಾಬಾದ್​ ಗಡಿಭಾಗಗಳಲ್ಲಿ ಪೊಲೀಸರು ಬ್ಯಾರಿಕೇಡ್​​ಗಳನ್ನು ತೆಗೆಯುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಕೇಶ್​ ಟಿಕಾಯತ್​, ಅದೆಲ್ಲ ಸುಳ್ಳು..ಅಲ್ಲಿನ್ನೂ ಬ್ಯಾರಿಕೇಡ್​ಗಳು ಹಾಗೇ ಇವೆ ಎಂದು ಹೇಳಿದ್ದಾರೆ. ಹಾಗೇ, ಈ ದೀಪಾವಳಿ ರೈತರ ಪಾಲಿಗೆ ಕರಾಳ ದೀಪಾವಳಿಯಾಗಿದೆ. ನಾವು ಪ್ರತಿಭಟನೆ ನಡೆಸುತ್ತಿರುವ ದೆಹಲಿ ಗಡಿಗಳಲ್ಲೇ ಹಬ್ಬ ಆಚರಿಸುತ್ತೇವೆ ಎಂದು ಹೇಳಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆಗಳಲ್ಲಿ ನಾವು ಬಿಜೆಪಿಗೆ ಸರಿಯಾದ ಔಷಧಿ ನೀಡುತ್ತೇವೆ. ಪಶ್ಚಿಮ ಬಂಗಾಳದ ಕಳೆದ ವಿಧಾನಸಭೆ ಚುನಾವಣೆಯ ಸೋಲು ಬಿಜೆಪಿಗೆ ಮರೆಯಲಿಕ್ಕಿಲ್ಲ. ಅದೊಂದು ಅತ್ಯಂತ ಅಪಾಯಕಾರಿ ಪಕ್ಷ. ನಮ್ಮ ಮಾತನ್ನು ಕೇಳಿ, ಕೃಷಿ ಕಾಯ್ದೆಗಳನ್ನು ವಾಪಸ್​ ಪಡೆಯದೆ ಇದ್ದರೆ ಅದರ ವಿರುದ್ಧ ಹೋರಾಟ ನಿರಂತರವಾಗಿ ಮುಂದುವರಿಸುತ್ತೇವೆ. ನಾವು ಯಾವುದೇ ರಾಜಕೀಯ ಪಕ್ಷಗಳ ಜತೆಗೂ ಇಲ್ಲ. ಆದರೆ ಬಿಜೆಪಿಯನ್ನು ಖಂಡಿತ ವಿರೋಧಿಸುತ್ತೇವೆ ಎಂದಿದ್ದಾರೆ.  ಈ ದೇಶದಲ್ಲಿ ರೈತರು ಮತ್ತು ಯುವಜನರ ಜೀವನವನ್ನು ಹಾಳು ಮಾಡಲಾಗುತ್ತಿದೆ. ರೈತರ ಬೆಳೆಗಳಿಗೆ ಬೆಲೆ ಇಲ್ಲ. ಯುವಜನರಿಗೆ ಉದ್ಯೋಗವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ರಾಕೇಶ್​ ಟಿಕಾಯತ್​, ಆರ್ಯನ್ ಖಾನ್​ ಡ್ರಗ್ಸ್​ ಕೇಸ್​ ಬಗ್ಗೆಯೂ ಮಾತನಾಡಿದರು. ಯಾರು ದೇಶದೊಳಗೆ ಅಕ್ರಮವಾಗಿ ಮಾದಕ ದ್ರವ್ಯಗಳನ್ನು ತರುತ್ತಿದ್ದಾರೋ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಬದಲಿಗೆ ಇಂಥವರನ್ನು ಹಿಡಿದು ಸತಾಯಿಸುತ್ತಾರೆ ಎಂದು ಹೇಳಿದರು.

ಆರ್​ಎಸ್​ಎಸ್​ ವಿರುದ್ಧವೂ ಕಿಡಿ ಕಾರಿದ ರೈತ ಮುಖಂಡ, ಈ ದೇಶದಲ್ಲಿ ಹಿಂದು ಎನ್ನಿಸಿಕೊಳ್ಳಲು ಆರ್​ಎಸ್​ಎಸ್​​ನಿಂದ ಸರ್ಟಿಫಿಕೆಟ್​ ಪಡೆದಿರಬೇಕಾ? ಎಂದು ಪ್ರಶ್ನಿಸಿದರು. ಈ ದೇಶದಲ್ಲಿ ಎರಡು ವಿಧದ ಹಿಂದುಗಳಿದ್ದಾರೆ. ಒಂದು ವರ್ಗದವರ ಬಳಿ ಪ್ರಮಾಣ ಪತ್ರ ಇಲ್ಲ..ಇನ್ನೊಂದು ವರ್ಗದ ಬಳಿ ಸರ್ಟಿಫಿಕೇಟ್​ ಇದೆ. ನಾನು ಸರ್ಟಿಫಿಕೆಟ್​ ಇಲ್ಲದ ಹಿಂದುಗಳ ಸಾಲಿಗೆ ಸೇರುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: Puneeth Rajkumar: ಅಭಿಮಾನಿಗಳು ದುಡುಕಬೇಡಿ, ನಿಮ್ಮ ಕುಟುಂಬ ನೋಡಿಕೊಳ್ಳಿ: ಶಿವರಾಜ್ ಕುಮಾರ್ ಕಿವಿಮಾತು

ಡಾ ರಾಜ್ ಕನಸಿನ ಕೂಸಾಗಿರುವ ಮೈಸೂರಿನ ಶಕ್ತಿಧಾಮ ಆಶ್ರಮಕ್ಕೆ ಪುನೀತ್ ರಾಜ್ ಕುಮಾರ್ ಎಲ್ಲವೂ ಆಗಿದ್ದರು

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ