Bhabanipur Bypoll ಮೋದಿ ಜೀ, ನಾವು ಭಾರತವನ್ನು ತಾಲಿಬಾನ್ ಮಾಡಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ

Mamata Banerjee: "ನರೇಂದ್ರ ಮೋದಿ ಜೀ, ಅಮಿತ್ ಶಾ ಜೀ, ನಾವು ಭಾರತವನ್ನು ತಾಲಿಬಾನ್​​ನಂತೆ ಮಾಡಲು ಬಿಡುವುದಿಲ್ಲ. ಭಾರತವು ಒಗ್ಗಟ್ಟಾಗಿ ಉಳಿಯುತ್ತದೆ. ಗಾಂಧಿ ಜೀ, ನೇತಾಜಿ, ವಿವೇಕಾನಂದ, ಸರ್ದಾರ್ ವಲ್ಲಭಾಯಿ ಪಟೇಲ್, ಗುರು ನಾನಕ್ ಜೀ, ಗೌತಮ್ ಬುದ್ಧ, ಜೈನರು ಎಲ್ಲರೂ ದೇಶದಲ್ಲಿ ಒಟ್ಟಿಗೆ ಇರುತ್ತಾರೆ.

Bhabanipur Bypoll  ಮೋದಿ ಜೀ, ನಾವು ಭಾರತವನ್ನು ತಾಲಿಬಾನ್ ಮಾಡಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Follow us
| Updated By: ರಶ್ಮಿ ಕಲ್ಲಕಟ್ಟ

Updated on:Sep 22, 2021 | 6:31 PM

ದೆಹಲಿ: ಬಿಜೆಪಿ ಒಂದು ‘ಜುಮ್ಲಾ’ ಪಕ್ಷ. ನಾವು ರಾಜ್ಯದಲ್ಲಿ ದುರ್ಗಾ ಪೂಜೆ, ಲಕ್ಷ್ಮಿ ಪೂಜೆಗೆ ಅವಕಾಶ ನೀಡುವುದಿಲ್ಲ ಎಂದು ಅವರು ಸುಳ್ಳು ಹೇಳುತ್ತಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee)ಹೇಳಿದ್ದಾರೆ. ಬುಧವಾರ ಭಬಾನಿಪುರದಲ್ಲಿ (Bhabanipur) ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ನರೇಂದ್ರ ಮೋದಿ ಜೀ, ಅಮಿತ್ ಶಾ ಜೀ, ನಾವು ಭಾರತವನ್ನು ತಾಲಿಬಾನ್​​ನಂತೆ ಮಾಡಲು ಬಿಡುವುದಿಲ್ಲ. ಭಾರತವು ಒಗ್ಗಟ್ಟಾಗಿ ಉಳಿಯುತ್ತದೆ. ಗಾಂಧಿ ಜೀ, ನೇತಾಜಿ, ವಿವೇಕಾನಂದ, ಸರ್ದಾರ್ ವಲ್ಲಭಾಯಿ ಪಟೇಲ್, ಗುರು ನಾನಕ್ ಜೀ, ಗೌತಮ್ ಬುದ್ಧ, ಜೈನರು ಎಲ್ಲರೂ ದೇಶದಲ್ಲಿ ಒಟ್ಟಿಗೆ ಇರುತ್ತಾರೆ. ನಾವು ಭಾರತವನ್ನು ವಿಭಜಿಸಲು ಯಾರಿಗೂ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಮನೆಯ ಬಳಿ ಬಿಜೆಪಿ ಪ್ರಚಾರ ಮಾಡುತ್ತಿದ್ದ ಜನರಿಗೆ ತಡೆಯೊಡ್ಡಿದ ಪೊಲೀಸ್ ತನ್ನ ಕೆಲಸದ ಎರಡನೇ ದಿನದಂದು ಬಿಜೆಪಿಯ ಹೊಸ ಬಂಗಾಳದ ಮುಖ್ಯಸ್ಥರು ಕೋಲ್ಕತ್ತಾದ ಭವಾನಿಪುರ್ ಪ್ರದೇಶದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ತಮ್ಮ ಪಕ್ಷದ ಅಭ್ಯರ್ಥಿಗಾಗಿ ಪ್ರಚಾರ ಮಾಡುತ್ತಿದ್ದಾಗ ಪೊಲೀಸರೊಂದಿಗೆ ವಾಗ್ವಾದ ನಡೆದಿದೆ.

“ಪಶ್ಚಿಮ ಬಂಗಾಳ ಪೊಲೀಸ್ ಸೇವೆಯು ಪಶ್ಚಿಮ ಬಂಗಾಳ ‘ಪಿಶಿ’ ಸೇವೆಯಾಗಿ ಮಾರ್ಪಟ್ಟಿದೆ” ಎಂದು ಸುಕಾಂತ ಮಜುಂದಾರ್ ಮಾಧ್ಯಮಗಳಿಗೆ ಹೇಳಿದರು. ಪಿಶಿ ಎಂದರೆ ಬಂಗಾಳಿಯಲ್ಲಿ ಅತ್ತೆ ಎಂದರ್ಥ. ಮಮತಾ ಬ್ಯಾನರ್ಜಿ ತನ್ನ ಸೋದರಳಿಯ ಅಭಿಷೇಕ್ ಬ್ಯಾನರ್ಜಿಯನ್ನು ಪಕ್ಷದಲ್ಲಿ ಉತ್ತೇಜಿಸುವ ಮೂಲಕ ಸ್ವಜನ ಪಕ್ಷಪಾತ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ಆದಾಗ್ಯೂ, ಮುಖ್ಯಮಂತ್ರಿಯ ನಿವಾಸವು ಹೆಚ್ಚಿನ ಭದ್ರತೆಯ ಪ್ರದೇಶಕ್ಕೆ ಒಳಪಟ್ಟಿದೆ. ಬಿಜೆಪಿ ನಾಯಕರೊಂದಿಗೆ ಹೆಚ್ಚಿನ ಜನರಿದ್ದರು. ಹಾಗಾಗಿ ಅವರನ್ನು ತಡೆದೆವು ಎಂದು ಪೊಲೀಸರು ಹೇಳಿದ್ದಾರೆ.

ತೃಣಮೂಲ ಪಕ್ಷದ ನಾಯಕ ತಪಸ್ ರಾಯ್ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು, ಬಿಜೆಪಿಯ ಹೊಸ ರಾಜ್ಯ ಮುಖ್ಯಸ್ಥರು “ಹಳೆಯವರಂತೆ ನಿರ್ಲಜ್ಜ” ಎಂದು ಹೇಳಿದರು. ಉತ್ತರ ಬಂಗಾಳದ ಬಾಲುರ್‌ಘಾಟ್‌ನ ಬಿಜೆಪಿಯ ಸಂಸದ 41 ವರ್ಷದ ಸುಕಾಂತ ಮಜುಂದಾರ್ ಅವರನ್ನು ಬಂಗಾಳ ಘಟಕದ ಮುಖ್ಯಸ್ಥರಾಗಿ ಎರಡು ದಿನಗಳ ಹಿಂದೆ ಬಿಜೆಪಿ ನೇಮಕ ಮಾಡಿತ್ತು.

ಇದನ್ನೂ ಓದಿ:Sukanta Majumdar ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ವ್ಯಕ್ತಿ ಪರಿಚಯ 

ಇದನ್ನೂ ಓದಿ: ಮೋದಿ ಬಳಿಕ 2024ರಲ್ಲಿ ಮಮತಾ ಬ್ಯಾನರ್ಜಿ ಪ್ರಧಾನಿಯಾಗಬಹುದು; ಬಿಜೆಪಿ ತೊರೆದ ಬಾಬುಲ್ ಸುಪ್ರಿಯೋ ಭವಿಷ್ಯ

(We won’t let you make India like Taliban West Bengal chief minister Mamata Banerjee lashes out Modi)

Published On - 6:26 pm, Wed, 22 September 21

ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ