AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2014ಕ್ಕಿಂತ ಮೊದಲು ಕೊರೊನಾ ಭಾರತಕ್ಕೆ ಬಂದಿದ್ದರೆ ನಾವೆಲ್ಲ ಹೆಣಗಾಡಬೇಕಾಗುತಿತ್ತು: ಪ್ರಧಾನಿ ಮೋದಿ

ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರಿಂದು ದೆಹಲಿಯ ರಾಜ್‌ಘಾಟ್‌ನಲ್ಲಿರುವ ರಾಷ್ಟ್ರೀಯ ಸ್ವಚ್ಛತಾ ಕೇಂದ್ರವನ್ನು ಉದ್ಘಾಟಿಸಿದ ನಂತರ ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದರು. ಎಲ್ಲ ರಾಜ್ಯ, ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತಾಡಿದ ಪ್ರಧಾನಿ ಮೋದಿ, “2014ಕ್ಕೂ ಮೊದಲೇ ಕೊರೊನಾ ಸೋಂಕು ಬಂದಿದ್ದರೆ, ನಮ್ಮ ದೇಶ ಹೇಗಿರುತ್ತಿತ್ತು ಎಂದು ಊಹಿಸಿಕೊಳ್ಳಿ. ನಮ್ಮ ಜನಸಂಖ್ಯೆಯ ಶೇಕಡಾ 60ಕ್ಕಿಂತ ಜನ ಬಹಿರ್ದೆಷೆಗೆ ಹೊರಗ ಡೆ ಹೋಗುತ್ತಿದ್ದ ಕಾಲದಲ್ಲಿ ಲಾಕ್​ಡೌನ್ ಜಾರಿಗೊಳಿಸುವುದು ಸಾಧ್ಯವಿತ್ತೇ? ‘ಸ್ವಚ್ಛಾಗ್ರಹ‘ ಯೋಜನೆಯು, ನಮ್ಮನ್ನು […]

2014ಕ್ಕಿಂತ ಮೊದಲು ಕೊರೊನಾ ಭಾರತಕ್ಕೆ ಬಂದಿದ್ದರೆ ನಾವೆಲ್ಲ ಹೆಣಗಾಡಬೇಕಾಗುತಿತ್ತು: ಪ್ರಧಾನಿ ಮೋದಿ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 08, 2020 | 8:33 PM

Share

ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರಿಂದು ದೆಹಲಿಯ ರಾಜ್‌ಘಾಟ್‌ನಲ್ಲಿರುವ ರಾಷ್ಟ್ರೀಯ ಸ್ವಚ್ಛತಾ ಕೇಂದ್ರವನ್ನು ಉದ್ಘಾಟಿಸಿದ ನಂತರ ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದರು. ಎಲ್ಲ ರಾಜ್ಯ, ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು.

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತಾಡಿದ ಪ್ರಧಾನಿ ಮೋದಿ, “2014ಕ್ಕೂ ಮೊದಲೇ ಕೊರೊನಾ ಸೋಂಕು ಬಂದಿದ್ದರೆ, ನಮ್ಮ ದೇಶ ಹೇಗಿರುತ್ತಿತ್ತು ಎಂದು ಊಹಿಸಿಕೊಳ್ಳಿ. ನಮ್ಮ ಜನಸಂಖ್ಯೆಯ ಶೇಕಡಾ 60ಕ್ಕಿಂತ ಜನ ಬಹಿರ್ದೆಷೆಗೆ ಹೊರಗ

ಡೆ ಹೋಗುತ್ತಿದ್ದ ಕಾಲದಲ್ಲಿ ಲಾಕ್​ಡೌನ್ ಜಾರಿಗೊಳಿಸುವುದು ಸಾಧ್ಯವಿತ್ತೇ? ‘ಸ್ವಚ್ಛಾಗ್ರಹಯೋಜನೆಯು, ನಮ್ಮನ್ನು ಕೊವಿಡ್ ವಿರುದ್ಧ ಹೋರಾಡುವಷ್ಟು ಸಶಕ್ತರನ್ನಾಗಿ ಮಾಡಿದೆ,” ಎಂದು ಮೋದಿ ಹೇಳಿದರು.

60 ತಿಂಗಳ ಸಮಯದಲ್ಲಿ 60 ಕೋಟಿ ಶೌಚಾಲಯಗಳನ್ನು ನಿರ್ಮಿಸಿದ್ದರಿಂದಲೇ ಕೊರೊನಾವನ್ನು ತಡೆಗಟ್ಟುವುದು ಸ್ವಚ್ಛಭಾರತ ಅಭಿಯಾನ ಸಾಧ್ಯವಾಗಿಸಿದೆ. ಗಾಂಧೀಜಿಯವರನ್ನು ಆದರ್ಶವಾಗಿಟ್ಟುಕೊಂಡಿರುವ ಲಕ್ಷಾಂತರ ಜನ ಕಳೆದ ಕೆಲವು ವರ್ಷಗಳಿಂದ ಸ್ವಚ್ಛ ಭಾರತ ಅಭಿಯಾನವನ್ನು ತಮ್ಮ ಜೀವನದ ದ್ಯೇಯವನ್ನಾಗಿಸಿಕೊಂಡಿದ್ದಾರೆ. ಇದೇ ಕಾರಣಕ್ಕೆ ನಾವು 60 ತಿಂಗಳಲ್ಲಿ 60 ಕೋಟಿ ಜನಕ್ಕೆ ಶೌಚಾಲಯಗಳನ್ನು ಕಟ್ಟುವುದು ಸಾಧ್ಯವಾಗಿದೆಎಂದು ಮೋದಿ ಮಕ್ಕಳಿಗೆ ಹೇಳಿದರು.

ಇವತ್ತು ಇಡೀ ಪ್ರಪಂಚ ಗಾಂಧೀಜಿಯವರ ಮೌಲ್ಯ ಮತ್ತು ತತ್ವಗಳನ್ನು ಅಳವಡಿಸಿಕೊಳ್ಳಲು ಮುಂದಾಗಿದೆ. ಕಳೆದ ವರ್ಷ ನಾವು ಆಚರಿಸಿದ ಗಾಂಧೀಜಿಯವರ 150ನೇ ವಾರ್ಷಿಕೋತ್ಸವ ಅಭೂತಪೂರ್ವವಾಗಿತ್ತು. ಅವರ ವೈಷ್ಣವ ಜನ ತೊಹಾಡನ್ನು ಬೇರೆ ಬೇರೆ ದೇಶದ ಹಾಡುಗಾರರು ಕಲಿತಿದ್ದೂ ಅಲ್ಲದೆ ಹಾಡಿಯೂ ತೋರಿಸಿದರು,” ಎಂದು ಮೋದಿ ಹೇಳಿದರು.

ನಾವೆಲ್ಲ, ‘ಗಂದಗಿ, ಭಾರತ್ ಛೋಡೊಅಭಿಯಾನದ ಭಾಗವಾಗಿದ್ದೇವೆ. ಇಲ್ಲಿ ನೆರೆದಿರುವ ಮಕ್ಕಳೂ ಸೇರಿದಂತೆ ಉಳದವರೆಲ್ಲ, ಕೊವಿಡ್-19 ನಿಯಂತ್ರಿಸಲು ಮಾಸ್ಕ್ ಧರಿಸಿರುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡಿರವುದು ನನಗೆ ಸಂತೋಷವನ್ನುಂಟು ಮಾಡಿದೆ,” ಎಂದು ಮಕ್ಕಳನ್ನು ಮೋದಿ ಕೊಂಡಾಡಿದರು.

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!