AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PPE ಕಿಟ್​ ಧರಿಸಿ ಲಸಿಕೆ ತಯಾರಿಕಾ ವಿಧಾನ ಪರಿಶೀಲಿಸಿದ ಪ್ರಧಾನಿ ಮೋದಿ; ವಿಜ್ಞಾನಿಗಳೊಂದಿಗೆ ಚರ್ಚೆ

ನಾನಿಂದು ಮೊದಲನೇದಾಗಿ ಅಹ್ಮದಾಬಾದ್​ನ ಝೈಡಸ್ ಬಯೋಟೆಕ್​ ಪಾರ್ಕ್​ಗೆ ಭೆಟಿ ನೀಡಿದೆ. ಝೈಡಸ್​ ಕ್ಯಾಡಿಲಾ ಅಭಿವೃದ್ಧಿಪಡಿಸುತ್ತಿರುವ ಡಿಎನ್​ಎ ಆಧಾರಿತ ಕರೊನಾ ಲಸಿಕೆ ಬಗ್ಗೆ ವಿವರಗಳನ್ನು ತಿಳಿದುಕೊಂಡೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

PPE ಕಿಟ್​ ಧರಿಸಿ ಲಸಿಕೆ ತಯಾರಿಕಾ ವಿಧಾನ ಪರಿಶೀಲಿಸಿದ ಪ್ರಧಾನಿ ಮೋದಿ; ವಿಜ್ಞಾನಿಗಳೊಂದಿಗೆ ಚರ್ಚೆ
ಪ್ರಧಾನಿ ಮೋದಿ ಪಿಪಿಇ ಕಿಟ್​ ಧರಿಸಿ, ಲಸಿಕೆ ತಯಾರಿಕಾ ಲ್ಯಾಬ್​ ಪ್ರವೇಶ ಮಾಡಿದರು.
Lakshmi Hegde
|

Updated on:Nov 28, 2020 | 2:55 PM

Share

ಅಹ್ಮದಾಬಾದ್: ಕರೊನಾ ಲಸಿಕೆ ತಯಾರಿಕೆ ಪ್ರಗತಿ ಪರಿಶೀಲನೆಯ ಮೊದಲ ಹಂತವಾಗಿ ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್​ನ ಅಹ್ಮದಾಬಾದ್​ನ ಝೈಡಸ್​ ಕ್ಯಾಡಿಲಾ ಲ್ಯಾಬ್​ಗೆ ಭೇಟಿ ನೀಡಿದರು. ಪಿಪಿಇ ಕಿಟ್​ ಧರಿಸಿಕೊಂಡು, ಲಸಿಕೆ ತಯಾರಿಕಾ ಸ್ಥಳಕ್ಕೆ ಹೋಗಿ, ಅಲ್ಲಿನ ವ್ಯವಸ್ಥೆಯನ್ನೆಲ್ಲ ಪರಿಶೀಲನೆ ಮಾಡಿದ ವಿಡಿಯೋ ವೈರಲ್ ಆಗಿದೆ.

ಅಹ್ಮದಾಬಾದ್​ನಿಂದ 20 ಕಿಮೀ ದೂರದಲ್ಲಿನ ಚಂಗೋಡರ್ ಕೈಗಾರಿಕಾ ಪ್ರದೇಶದಲ್ಲಿರುವ ಝೈಡಸ್​ ಪಾರ್ಕ್​ನಲ್ಲಿ ಸುಮಾರು 1 ಗಂಟೆ ಮೋದಿಯವರು ಸಮಯ ಕಳೆದಿದ್ದಾರೆ. ತಜ್ಞರೊಂದಿಗೆ ಸಭೆ ಮಾಡಿ, ಚರ್ಚಿಸಿದ್ದಾರೆ. ನಂತರ ಟ್ವೀಟ್ ಮಾಡಿ, ನಾನಿಂದು ಮೊದಲನೇದಾಗಿ ಅಹ್ಮದಾಬಾದ್​ನ ಝೈಡಸ್ ಬಯೋಟೆಕ್​ ಪಾರ್ಕ್​ಗೆ ಭೆಟಿ ನೀಡಿದೆ.

ಝೈಡಸ್​ ಕ್ಯಾಡಿಲಾ ಅಭಿವೃದ್ಧಿಪಡಿಸುತ್ತಿರುವ ಡಿಎನ್​ಎ ಆಧಾರಿತ ಕರೊನಾ ಲಸಿಕೆ ಬಗ್ಗೆ ವಿವರಗಳನ್ನು ತಿಳಿದುಕೊಂಡೆ. ಲಸಿಕೆ ತಯಾರಿಕೆ ಹಿಂದೆ ಶ್ರಮಿಸುತ್ತಿರುವ ತಂಡವನ್ನು ಶ್ಲಾಘಿಸುತ್ತೇನೆ. ಭಾರತ ಸರ್ಕಾರ ಅವರಿಗೆ ಅಗತ್ಯ ಸರ್ಕಾರ, ಬೆಂಬಲ ನೀಡಲಿದೆ ಎಂದಿದ್ದಾರೆ.

ಇದನ್ನೂ ಓದಿ: ಕೊರೊನಾ 2ನೆ ಅಲೆ ಅಪ್ಪಳಿಸುವ ಬೆನ್ನಲ್ಲೇ ಪ್ರಧಾನಿ ಮೋದಿಯಿಂದ 3 ಕೊರೊನಾ ಲಸಿಕೆ ತಯಾರಿಕಾ ಘಟಕಗಳಿಗೆ ಭೇಟಿ

ಹೈದರಾಬಾದ್​ನ ಭಾರತ್​ ಬಯೋಟೆಕ್​ ಲ್ಯಾಬ್​ಗೆ ಭೇಟಿ ನೀಡಿದ ನಂತರ ಸಂಜೆ 4.30ರ ಹೊತ್ತಿಗೆ ಪುಣೆಯ ಸೆರಮ್​ ಇನ್ಸ್ಟಿಟ್ಯೂಟ್​ಗೆ ತೆರಳಲಿದ್ದಾರೆ. ಈ ಎರಡೂ ಕಡೆಗಳನ್ನೂ ಲಸಿಕೆ ಅಭಿವೃದ್ಧಿಪಡಿಸುತ್ತಿರುವ ವಿಜ್ಞಾನಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.

Published On - 2:45 pm, Sat, 28 November 20

ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ