AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PPE ಕಿಟ್​ ಧರಿಸಿ ಲಸಿಕೆ ತಯಾರಿಕಾ ವಿಧಾನ ಪರಿಶೀಲಿಸಿದ ಪ್ರಧಾನಿ ಮೋದಿ; ವಿಜ್ಞಾನಿಗಳೊಂದಿಗೆ ಚರ್ಚೆ

ನಾನಿಂದು ಮೊದಲನೇದಾಗಿ ಅಹ್ಮದಾಬಾದ್​ನ ಝೈಡಸ್ ಬಯೋಟೆಕ್​ ಪಾರ್ಕ್​ಗೆ ಭೆಟಿ ನೀಡಿದೆ. ಝೈಡಸ್​ ಕ್ಯಾಡಿಲಾ ಅಭಿವೃದ್ಧಿಪಡಿಸುತ್ತಿರುವ ಡಿಎನ್​ಎ ಆಧಾರಿತ ಕರೊನಾ ಲಸಿಕೆ ಬಗ್ಗೆ ವಿವರಗಳನ್ನು ತಿಳಿದುಕೊಂಡೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

PPE ಕಿಟ್​ ಧರಿಸಿ ಲಸಿಕೆ ತಯಾರಿಕಾ ವಿಧಾನ ಪರಿಶೀಲಿಸಿದ ಪ್ರಧಾನಿ ಮೋದಿ; ವಿಜ್ಞಾನಿಗಳೊಂದಿಗೆ ಚರ್ಚೆ
ಪ್ರಧಾನಿ ಮೋದಿ ಪಿಪಿಇ ಕಿಟ್​ ಧರಿಸಿ, ಲಸಿಕೆ ತಯಾರಿಕಾ ಲ್ಯಾಬ್​ ಪ್ರವೇಶ ಮಾಡಿದರು.
Lakshmi Hegde
|

Updated on:Nov 28, 2020 | 2:55 PM

Share

ಅಹ್ಮದಾಬಾದ್: ಕರೊನಾ ಲಸಿಕೆ ತಯಾರಿಕೆ ಪ್ರಗತಿ ಪರಿಶೀಲನೆಯ ಮೊದಲ ಹಂತವಾಗಿ ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್​ನ ಅಹ್ಮದಾಬಾದ್​ನ ಝೈಡಸ್​ ಕ್ಯಾಡಿಲಾ ಲ್ಯಾಬ್​ಗೆ ಭೇಟಿ ನೀಡಿದರು. ಪಿಪಿಇ ಕಿಟ್​ ಧರಿಸಿಕೊಂಡು, ಲಸಿಕೆ ತಯಾರಿಕಾ ಸ್ಥಳಕ್ಕೆ ಹೋಗಿ, ಅಲ್ಲಿನ ವ್ಯವಸ್ಥೆಯನ್ನೆಲ್ಲ ಪರಿಶೀಲನೆ ಮಾಡಿದ ವಿಡಿಯೋ ವೈರಲ್ ಆಗಿದೆ.

ಅಹ್ಮದಾಬಾದ್​ನಿಂದ 20 ಕಿಮೀ ದೂರದಲ್ಲಿನ ಚಂಗೋಡರ್ ಕೈಗಾರಿಕಾ ಪ್ರದೇಶದಲ್ಲಿರುವ ಝೈಡಸ್​ ಪಾರ್ಕ್​ನಲ್ಲಿ ಸುಮಾರು 1 ಗಂಟೆ ಮೋದಿಯವರು ಸಮಯ ಕಳೆದಿದ್ದಾರೆ. ತಜ್ಞರೊಂದಿಗೆ ಸಭೆ ಮಾಡಿ, ಚರ್ಚಿಸಿದ್ದಾರೆ. ನಂತರ ಟ್ವೀಟ್ ಮಾಡಿ, ನಾನಿಂದು ಮೊದಲನೇದಾಗಿ ಅಹ್ಮದಾಬಾದ್​ನ ಝೈಡಸ್ ಬಯೋಟೆಕ್​ ಪಾರ್ಕ್​ಗೆ ಭೆಟಿ ನೀಡಿದೆ.

ಝೈಡಸ್​ ಕ್ಯಾಡಿಲಾ ಅಭಿವೃದ್ಧಿಪಡಿಸುತ್ತಿರುವ ಡಿಎನ್​ಎ ಆಧಾರಿತ ಕರೊನಾ ಲಸಿಕೆ ಬಗ್ಗೆ ವಿವರಗಳನ್ನು ತಿಳಿದುಕೊಂಡೆ. ಲಸಿಕೆ ತಯಾರಿಕೆ ಹಿಂದೆ ಶ್ರಮಿಸುತ್ತಿರುವ ತಂಡವನ್ನು ಶ್ಲಾಘಿಸುತ್ತೇನೆ. ಭಾರತ ಸರ್ಕಾರ ಅವರಿಗೆ ಅಗತ್ಯ ಸರ್ಕಾರ, ಬೆಂಬಲ ನೀಡಲಿದೆ ಎಂದಿದ್ದಾರೆ.

ಇದನ್ನೂ ಓದಿ: ಕೊರೊನಾ 2ನೆ ಅಲೆ ಅಪ್ಪಳಿಸುವ ಬೆನ್ನಲ್ಲೇ ಪ್ರಧಾನಿ ಮೋದಿಯಿಂದ 3 ಕೊರೊನಾ ಲಸಿಕೆ ತಯಾರಿಕಾ ಘಟಕಗಳಿಗೆ ಭೇಟಿ

ಹೈದರಾಬಾದ್​ನ ಭಾರತ್​ ಬಯೋಟೆಕ್​ ಲ್ಯಾಬ್​ಗೆ ಭೇಟಿ ನೀಡಿದ ನಂತರ ಸಂಜೆ 4.30ರ ಹೊತ್ತಿಗೆ ಪುಣೆಯ ಸೆರಮ್​ ಇನ್ಸ್ಟಿಟ್ಯೂಟ್​ಗೆ ತೆರಳಲಿದ್ದಾರೆ. ಈ ಎರಡೂ ಕಡೆಗಳನ್ನೂ ಲಸಿಕೆ ಅಭಿವೃದ್ಧಿಪಡಿಸುತ್ತಿರುವ ವಿಜ್ಞಾನಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.

Published On - 2:45 pm, Sat, 28 November 20

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​