AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amritpal Singh: ಸನ್​​ಗ್ಲಾಸ್, ಡೆನಿಮ್ ಜಾಕೆಟ್ ಧರಿಸಿ ದೆಹಲಿ ರಸ್ತೆಯಲ್ಲಿ ಕಾಣಿಸಿಕೊಂಡ ಅಮೃತಪಾಲ್ ಸಿಂಗ್

ಅಮೃತಪಾಲ್ ಸಿಂಗ್ ಮತ್ತು ಪಾಪಲ್ ಪ್ರೀತ್ ಸಿಂಗ್ ಹರ್ಯಾಣದ ಕುರುಕ್ಷೇತ್ರದ ಮೂಲಕ ದೆಹಲಿಗೆ ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆತ ಇನ್ನೂ ದೆಹಲಿಯಲ್ಲಿ ತಲೆಮರೆಸಿಕೊಂಡಿದ್ದಾನೆಯೇ ಅಥವಾ ರಾಷ್ಟ್ರ ರಾಜಧಾನಿಯಿಂದಲೂ ತಪ್ಪಿಸಿಕೊಂಡಿದ್ದಾನೆಯೇ ಎಂಬ ಬಗ್ಗೆ ಪೊಲೀಸರು ಹೆಚ್ಚಿನ ವಿವರಗಳನ್ನು ನೀಡಿಲ್ಲ

Amritpal Singh: ಸನ್​​ಗ್ಲಾಸ್, ಡೆನಿಮ್ ಜಾಕೆಟ್ ಧರಿಸಿ ದೆಹಲಿ ರಸ್ತೆಯಲ್ಲಿ ಕಾಣಿಸಿಕೊಂಡ ಅಮೃತಪಾಲ್ ಸಿಂಗ್
ಅಮೃತಪಾಲ್ ಸಿಂಗ್
ರಶ್ಮಿ ಕಲ್ಲಕಟ್ಟ
|

Updated on:Mar 28, 2023 | 6:31 PM

Share

ದೆಹಲಿ: ಪಂಜಾಬ್‌ನಿಂದ ಪರಾರಿಯಾಗಿ ಒಂದು ವಾರಕ್ಕೂ ಹೆಚ್ಚು ಕಾಲ ಪೊಲೀಸರಿಂದ ತಲೆಮರೆಸಿಕೊಂಡಿರುವ ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ (Amritpal Singh)ದೆಹಲಿಯಲ್ಲಿ ಕಾಣಿಸಿಕೊಂಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಮೃತಪಾಲ್ ಸಿಂಗ್ ಪೋಲಿಸರಿಂದ ತಪ್ಪಿಸಿಕೊಳ್ಳಲು ಸಿಖ್ ಟರ್ಬನ್ ಧರಿಸದೆ, ಸನ್ ಗ್ಲಾಸ್, ಡೆನಿಮ್ ಜಾಕೆಟ್ ಧರಿಸಿದ್ದರು. ಸಿಸಿಟಿವಿ ವಿಡಿಯೊದಲ್ಲಿ ಅವರ ಸಹಾಯಕ ಪಾಪಲ್‌ಪ್ರೀತ್ ಸಿಂಗ್ ಕೂಡ ಕಾಣಿಸಿಕೊಂಡಿದ್ದಾರೆ. ಇಬ್ಬರೂ ತಮ್ಮ ಗುರುತನ್ನು ಮರೆಮಾಚಲು ಮಾಸ್ಕ್ ಧರಿಸಿದ್ದರು.ಮಾರ್ಚ್ 18 ರಂದು ಪಂಜಾಬ್‌ನಲ್ಲಿ (Punjab) ಆತನನ್ನು ಬಂಧಿಸಲು ಪೊಲೀಸರು ತೆರಳಿದ ಮೂರು ದಿನಗಳ ನಂತರ ಮಾರ್ಚ್ 21ರಂದು ದೆಹಲಿಯಲ್ಲಿ (Delhi) ಕಾಣಿಸಿಕೊಂಡಿರುವುದಾಗಿ ಸಿಸಿಟಿವಿ ವಿಡಿಯೊ ತೋರಿಸಿದೆ.

ಅಮೃತಪಾಲ್ ಸಿಂಗ್ ಮತ್ತು ಪಾಪಲ್ ಪ್ರೀತ್ ಸಿಂಗ್ ಹರ್ಯಾಣದ ಕುರುಕ್ಷೇತ್ರದ ಮೂಲಕ ದೆಹಲಿಗೆ ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆತ ಇನ್ನೂ ದೆಹಲಿಯಲ್ಲಿ ತಲೆಮರೆಸಿಕೊಂಡಿದ್ದಾನೆಯೇ ಅಥವಾ ರಾಷ್ಟ್ರ ರಾಜಧಾನಿಯಿಂದಲೂ ತಪ್ಪಿಸಿಕೊಂಡಿದ್ದಾನೆಯೇ ಎಂಬ ಬಗ್ಗೆ ಪೊಲೀಸರು ಹೆಚ್ಚಿನ ವಿವರಗಳನ್ನು ನೀಡಿಲ್ಲ ಎಂದು ಎನ್​​ಡಿಟಿವಿ ವರದಿ ಮಾಡಿದೆ.

ನಕಲಿ ಪಾಸ್‌ಪೋರ್ಟ್ ಬಳಸಿ ಆತ ಗಡಿ ದಾಟಲು ಪ್ರಯತ್ನಿಸಬಹುದು ಎಂಬ ಶಂಕೆ ಇಂದ ನೆರೆಯ ನೇಪಾಳವು ಈಗಾಗಲೇ ಅಮೃತಪಾಲ್ ಸಿಂಗ್​​ನ್ನು ತನ್ನ ಕಣ್ಗಾವಲು ಪಟ್ಟಿಗೆ ಸೇರಿಸಿದೆ. ಇಬ್ಬರು ವಾಟೆಂಡ್ ವ್ಯಕ್ತಿಗಳು ಪೊಲೀಸರಿಂದ ತಪ್ಪಿಸಿಕೊಂಡು ಹೋಗಿ ಬೇರೊಂದು ಮನೆಯಲ್ಲಿ ಆಶ್ರಯ ಪಡೆದಿರುವುದನ್ನು ತೋರಿಸುವ ಹಲವಾರು ಸಿಸಿಟಿವಿ ಕ್ಲಿಪ್‌ಗಳು ಪಂಜಾಬ್‌ನಿಂದ ಓಡಿಹೋದ ವಾರದಿಂದ ಇಲ್ಲಿಯವರೆಗೆ ಕಾಣಿಸಿಕೊಂಡಿವೆ. ಈ ದೃಶ್ಯಾವಳಿಗಳು ಅವರು ರಾಜ್ಯದಿಂದ ಹೇಗೆ ತಪ್ಪಿಸಿಕೊಂಡರು ಎಂಬುದರ ಕುರಿತು ಪೊಲೀಸರಿಗೆ ಉತ್ತಮ ಚಿತ್ರಣವನ್ನು ರೂಪಿಸಲು ಸಹಾಯ ಮಾಡಿದೆ.

ಇದನ್ನೂ ಓದಿ:ವಿದೇಶಿ ಮಹಿಳೆಗೆ ಜನಿಸಿದ ವ್ಯಕ್ತಿ ಎಂದಿಗೂ ದೇಶಭಕ್ತನಾಗಲು ಸಾಧ್ಯವಿಲ್ಲ: ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಂಸದ ವಾಗ್ದಾಳಿ

ಅಮೃತಪಾಲ್ ಸಿಂಗ್ “ವಾರಿಸ್ ಪಂಜಾಬ್ ದೇ” ನ ಮುಖ್ಯಸ್ಥ. ಇದು ನಟ ಮತ್ತು ಕಾರ್ಯಕರ್ತ ದೀಪ್ ಸಿಧು ಪ್ರಾರಂಭಿಸಿದ ಮೂಲಭೂತ ಸಂಘಟನೆಯಾಗಿದೆ. ಮಂಗಳವಾರ ಅಮೃತಪಾಲ್ ಸಿಂಗ್ ಮತ್ತು ಪಾಪಲ್ ಪ್ರೀತ್ ಸಿಂಗ್ ಎನರ್ಜಿ ಡ್ರಿಂಕ್ ಸೇವಿಸುತ್ತಿರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಆತನನ್ನು ಹಿಡಿಯಲು ಪೊಲೀಸ್ ಕಾರ್ಯಾಚರಣೆ ಪ್ರಾರಂಭವಾದ ಒಂದು ದಿನದ ನಂತರ ಈ ಫೋಟೊ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:25 pm, Tue, 28 March 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ