AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amritpal Singh: ಸನ್​​ಗ್ಲಾಸ್, ಡೆನಿಮ್ ಜಾಕೆಟ್ ಧರಿಸಿ ದೆಹಲಿ ರಸ್ತೆಯಲ್ಲಿ ಕಾಣಿಸಿಕೊಂಡ ಅಮೃತಪಾಲ್ ಸಿಂಗ್

ಅಮೃತಪಾಲ್ ಸಿಂಗ್ ಮತ್ತು ಪಾಪಲ್ ಪ್ರೀತ್ ಸಿಂಗ್ ಹರ್ಯಾಣದ ಕುರುಕ್ಷೇತ್ರದ ಮೂಲಕ ದೆಹಲಿಗೆ ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆತ ಇನ್ನೂ ದೆಹಲಿಯಲ್ಲಿ ತಲೆಮರೆಸಿಕೊಂಡಿದ್ದಾನೆಯೇ ಅಥವಾ ರಾಷ್ಟ್ರ ರಾಜಧಾನಿಯಿಂದಲೂ ತಪ್ಪಿಸಿಕೊಂಡಿದ್ದಾನೆಯೇ ಎಂಬ ಬಗ್ಗೆ ಪೊಲೀಸರು ಹೆಚ್ಚಿನ ವಿವರಗಳನ್ನು ನೀಡಿಲ್ಲ

Amritpal Singh: ಸನ್​​ಗ್ಲಾಸ್, ಡೆನಿಮ್ ಜಾಕೆಟ್ ಧರಿಸಿ ದೆಹಲಿ ರಸ್ತೆಯಲ್ಲಿ ಕಾಣಿಸಿಕೊಂಡ ಅಮೃತಪಾಲ್ ಸಿಂಗ್
ಅಮೃತಪಾಲ್ ಸಿಂಗ್
Follow us
ರಶ್ಮಿ ಕಲ್ಲಕಟ್ಟ
|

Updated on:Mar 28, 2023 | 6:31 PM

ದೆಹಲಿ: ಪಂಜಾಬ್‌ನಿಂದ ಪರಾರಿಯಾಗಿ ಒಂದು ವಾರಕ್ಕೂ ಹೆಚ್ಚು ಕಾಲ ಪೊಲೀಸರಿಂದ ತಲೆಮರೆಸಿಕೊಂಡಿರುವ ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ (Amritpal Singh)ದೆಹಲಿಯಲ್ಲಿ ಕಾಣಿಸಿಕೊಂಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಮೃತಪಾಲ್ ಸಿಂಗ್ ಪೋಲಿಸರಿಂದ ತಪ್ಪಿಸಿಕೊಳ್ಳಲು ಸಿಖ್ ಟರ್ಬನ್ ಧರಿಸದೆ, ಸನ್ ಗ್ಲಾಸ್, ಡೆನಿಮ್ ಜಾಕೆಟ್ ಧರಿಸಿದ್ದರು. ಸಿಸಿಟಿವಿ ವಿಡಿಯೊದಲ್ಲಿ ಅವರ ಸಹಾಯಕ ಪಾಪಲ್‌ಪ್ರೀತ್ ಸಿಂಗ್ ಕೂಡ ಕಾಣಿಸಿಕೊಂಡಿದ್ದಾರೆ. ಇಬ್ಬರೂ ತಮ್ಮ ಗುರುತನ್ನು ಮರೆಮಾಚಲು ಮಾಸ್ಕ್ ಧರಿಸಿದ್ದರು.ಮಾರ್ಚ್ 18 ರಂದು ಪಂಜಾಬ್‌ನಲ್ಲಿ (Punjab) ಆತನನ್ನು ಬಂಧಿಸಲು ಪೊಲೀಸರು ತೆರಳಿದ ಮೂರು ದಿನಗಳ ನಂತರ ಮಾರ್ಚ್ 21ರಂದು ದೆಹಲಿಯಲ್ಲಿ (Delhi) ಕಾಣಿಸಿಕೊಂಡಿರುವುದಾಗಿ ಸಿಸಿಟಿವಿ ವಿಡಿಯೊ ತೋರಿಸಿದೆ.

ಅಮೃತಪಾಲ್ ಸಿಂಗ್ ಮತ್ತು ಪಾಪಲ್ ಪ್ರೀತ್ ಸಿಂಗ್ ಹರ್ಯಾಣದ ಕುರುಕ್ಷೇತ್ರದ ಮೂಲಕ ದೆಹಲಿಗೆ ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆತ ಇನ್ನೂ ದೆಹಲಿಯಲ್ಲಿ ತಲೆಮರೆಸಿಕೊಂಡಿದ್ದಾನೆಯೇ ಅಥವಾ ರಾಷ್ಟ್ರ ರಾಜಧಾನಿಯಿಂದಲೂ ತಪ್ಪಿಸಿಕೊಂಡಿದ್ದಾನೆಯೇ ಎಂಬ ಬಗ್ಗೆ ಪೊಲೀಸರು ಹೆಚ್ಚಿನ ವಿವರಗಳನ್ನು ನೀಡಿಲ್ಲ ಎಂದು ಎನ್​​ಡಿಟಿವಿ ವರದಿ ಮಾಡಿದೆ.

ನಕಲಿ ಪಾಸ್‌ಪೋರ್ಟ್ ಬಳಸಿ ಆತ ಗಡಿ ದಾಟಲು ಪ್ರಯತ್ನಿಸಬಹುದು ಎಂಬ ಶಂಕೆ ಇಂದ ನೆರೆಯ ನೇಪಾಳವು ಈಗಾಗಲೇ ಅಮೃತಪಾಲ್ ಸಿಂಗ್​​ನ್ನು ತನ್ನ ಕಣ್ಗಾವಲು ಪಟ್ಟಿಗೆ ಸೇರಿಸಿದೆ. ಇಬ್ಬರು ವಾಟೆಂಡ್ ವ್ಯಕ್ತಿಗಳು ಪೊಲೀಸರಿಂದ ತಪ್ಪಿಸಿಕೊಂಡು ಹೋಗಿ ಬೇರೊಂದು ಮನೆಯಲ್ಲಿ ಆಶ್ರಯ ಪಡೆದಿರುವುದನ್ನು ತೋರಿಸುವ ಹಲವಾರು ಸಿಸಿಟಿವಿ ಕ್ಲಿಪ್‌ಗಳು ಪಂಜಾಬ್‌ನಿಂದ ಓಡಿಹೋದ ವಾರದಿಂದ ಇಲ್ಲಿಯವರೆಗೆ ಕಾಣಿಸಿಕೊಂಡಿವೆ. ಈ ದೃಶ್ಯಾವಳಿಗಳು ಅವರು ರಾಜ್ಯದಿಂದ ಹೇಗೆ ತಪ್ಪಿಸಿಕೊಂಡರು ಎಂಬುದರ ಕುರಿತು ಪೊಲೀಸರಿಗೆ ಉತ್ತಮ ಚಿತ್ರಣವನ್ನು ರೂಪಿಸಲು ಸಹಾಯ ಮಾಡಿದೆ.

ಇದನ್ನೂ ಓದಿ:ವಿದೇಶಿ ಮಹಿಳೆಗೆ ಜನಿಸಿದ ವ್ಯಕ್ತಿ ಎಂದಿಗೂ ದೇಶಭಕ್ತನಾಗಲು ಸಾಧ್ಯವಿಲ್ಲ: ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಂಸದ ವಾಗ್ದಾಳಿ

ಅಮೃತಪಾಲ್ ಸಿಂಗ್ “ವಾರಿಸ್ ಪಂಜಾಬ್ ದೇ” ನ ಮುಖ್ಯಸ್ಥ. ಇದು ನಟ ಮತ್ತು ಕಾರ್ಯಕರ್ತ ದೀಪ್ ಸಿಧು ಪ್ರಾರಂಭಿಸಿದ ಮೂಲಭೂತ ಸಂಘಟನೆಯಾಗಿದೆ. ಮಂಗಳವಾರ ಅಮೃತಪಾಲ್ ಸಿಂಗ್ ಮತ್ತು ಪಾಪಲ್ ಪ್ರೀತ್ ಸಿಂಗ್ ಎನರ್ಜಿ ಡ್ರಿಂಕ್ ಸೇವಿಸುತ್ತಿರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಆತನನ್ನು ಹಿಡಿಯಲು ಪೊಲೀಸ್ ಕಾರ್ಯಾಚರಣೆ ಪ್ರಾರಂಭವಾದ ಒಂದು ದಿನದ ನಂತರ ಈ ಫೋಟೊ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:25 pm, Tue, 28 March 23

ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ
ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ
ಕಮಲ್ ಹಾಸನ್ ಮೇಲೆ ಕನ್ನಡಿಗರ ಋಣ ಇದೆ, ಕ್ಷಮೆ ಕೇಳಬೇಕು: ಸಾಧುಕೋಕಿಲ
ಕಮಲ್ ಹಾಸನ್ ಮೇಲೆ ಕನ್ನಡಿಗರ ಋಣ ಇದೆ, ಕ್ಷಮೆ ಕೇಳಬೇಕು: ಸಾಧುಕೋಕಿಲ
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ?