AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಪಾರಾಗಲು 2 ಮಾಸ್ಕ್ ಧರಿಸುವುದು ಪರಿಣಾಮಕಾರಿ; ಆದರೆ ಧರಿಸುವ ಕ್ರಮ ಯಾವುದು? ಇಲ್ಲಿದೆ ಮಾಹಿತಿ..

ಸಾರ್ಸ್ ಕೊವಿಡ್ 19 ಕಣಗಳು ಬಾಯಿ-ಮೂಗು ಪ್ರವೇಶಿಸದಂತೆ ತಡೆಯುವಲ್ಲಿ ಒಂದು ಮಾಸ್ಕ್​ಗಿಂತ, ಎರಡು ಮಾಸ್ಕ್​​ಗಳು ಪರಿಣಾಮಕಾರಿ ಎಂಬುದು ಅಧ್ಯಯನದಲ್ಲಿ ಸ್ಪಷ್ಟವಾಗಿದೆ.

ಕೊರೊನಾದಿಂದ ಪಾರಾಗಲು 2 ಮಾಸ್ಕ್ ಧರಿಸುವುದು ಪರಿಣಾಮಕಾರಿ; ಆದರೆ ಧರಿಸುವ ಕ್ರಮ ಯಾವುದು? ಇಲ್ಲಿದೆ ಮಾಹಿತಿ..
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:May 10, 2021 | 5:00 PM

Share

ದೆಹಲಿ: ಭಾರತದಲ್ಲಿ ಕೊವಿಡ್ 19 ಅಲೆ ಜಾಸ್ತಿಯಾಗಿದೆ. ಕೊವಿಡ್ 19 ಸೋಂಕು ಕಾಲಿಟ್ಟಾಗಿನಿಂದಲೂ ಮಾಸ್ಕ್​ ಎಂಬುದು ಜೀವನದ ಅವಿಭಾಜ್ಯ ಅಂಗವಾಗಿಬಿಟ್ಟಿದೆ. ಈಗಂತೂ ಡಬಲ್ ಮಾಸ್ಕ್​ ಧರಿಸಲು ಆರೋಗ್ಯ ತಜ್ಞರು ಶಿಫಾರಸು ಮಾಡುತ್ತಿದ್ದಾರೆ. ಆದರೆ ಈ ವಿಚಾರದಲ್ಲಿ ಹಲವು ಗೊಂದಲಗಳಿವೆ. ಇನ್ನು ಎರಡು ಮಾಸ್ಕ್ ಹೇಗೆ ಧರಿಸಬೇಕು? ಅದು ಹೇಗಿರಬೇಕು? ಎಂಬ ಬಗ್ಗೆ ಕೇಂದ್ರ ಸರ್ಕಾರ ಭಾನುವಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಎರಡು ಮಾಸ್ಕ್ ಧರಿಸುವ ಕ್ರಮ ಹೇಗಿರಬೇಕು? 1. ಎರಡು ಮಾಸ್ಕ್​ಗಳಲ್ಲಿ ಒಂದು ಸರ್ಜಿಕಲ್ ಮಾಸ್ಕ್ ಆಗಿರಬೇಕು ಹಾಗೂ ಇನ್ನೊಂದು ಎರಡು ಅಥವಾ ಮೂರು ಲೇಯರ್​ಗಳುಳ್ಳ ಬಟ್ಟೆಯ ಮಾಸ್ಕ್​ ಆಗಿರಬೇಕು. 2. ಮೂಗಿನ ಮೇಲ್ಭಾಗವನ್ನು ಗಟ್ಟಿಯಾಗಿ ಬಿಗಿದಿರುವಂತೆ ಮಾಸ್ಕ್ ಧರಿಸಬೇಕು. ಹಾಗೇ, ಉಸಿರಾಟಕ್ಕೆ ಯಾವುದೇ ತೊಂದರೆ ಇಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. 3. ಇದರಲ್ಲಿ ಸರ್ಜಿಕಲ್ ಮಾಸ್ಕ್​ನ್ನು ಬದಲಿಸಬೇಕು. ಬಟ್ಟೆ ಮಾಸ್ಕ್​ನ್ನು ಪ್ರತಿದಿನ ತೊಳೆಯಬೇಕು.

ಏನು ಮಾಡಬಾರದು? 1. ಒಂದೇ ತೆರನಾದ ಎರಡು ಮಾಸ್ಕ್​ಗಳನ್ನು ಧರಿಸಬಾರದು. ಅಂದರೆ ಎರಡೂ ಬಟ್ಟೆಯ ಮಾಸ್ಕ್ ಆಗಬಾರದು ಅಥವಾ ಎರಡೂ ಸರ್ಜಿಕಲ್ ಮಾಸ್ಕ್​ ಆಗಿರಬಾರದು. ಎರಡು ಬೇರೆಬೇರೆ ವಿಧದ ಮಾಸ್ಕ್ ಧರಿಸುವುದು ಕಡ್ಡಾಯ ಹಾಗೂ ಸುರಕ್ಷಿತ. 2. ಪ್ರತಿದಿನವೂ ಮಾಸ್ಕ್ ಚೇಂಜ್ ಮಾಡಲೇಬೇಕು. ಅದರಲ್ಲಿ ಬಟ್ಟೆಯ ಮಾಸ್ಕ್​ನ್ನು ತೊಳೆದು ಬಳಸಬಹುದು.

ಸಾರ್ಸ್ ಕೊವಿಡ್ 19 ಕಣಗಳು ಬಾಯಿ-ಮೂಗು ಪ್ರವೇಶಿಸದಂತೆ ತಡೆಯುವಲ್ಲಿ ಒಂದು ಮಾಸ್ಕ್​ಗಿಂತ, ಎರಡು ಮಾಸ್ಕ್​​ಗಳು ಪರಿಣಾಮಕಾರಿ ಎಂಬುದು ಅಧ್ಯಯನದಲ್ಲಿ ಸ್ಪಷ್ಟವಾಗಿದೆ. ಈ ವಿಚಾರವನ್ನು JAMA ಎಂಬ ಅಂತಾರಾಷ್ಟ್ರೀಯ ಮಟ್ಟದ ವೈದ್ಯಕೀಯ ಜರ್ನಲ್​ ಕೂಡ ಪ್ರಕಟಿಸಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಮತ್ತೆ ಮುಂದೂಡಿಕೆ: ಕೊವಿಡ್​ನಿಂದಾಗಿ ಚುನಾವಣೆ ಬೇಡ ಎಂದ ಕಾಂಗ್ರೆಸ್ ನಾಯಕರು

ಕೊಪ್ಪಳ: ರೆಮ್​ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ ಪ್ರಕರಣ; ಬೆಳಕಿಗೆ ಬಂದ 3 ಲಕ್ಷ ವ್ಯವಹಾರ

Wearing two masks to prevent the Covid 19 infection study reveals

Published On - 4:56 pm, Mon, 10 May 21

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?