AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಪಾರಾಗಲು 2 ಮಾಸ್ಕ್ ಧರಿಸುವುದು ಪರಿಣಾಮಕಾರಿ; ಆದರೆ ಧರಿಸುವ ಕ್ರಮ ಯಾವುದು? ಇಲ್ಲಿದೆ ಮಾಹಿತಿ..

ಸಾರ್ಸ್ ಕೊವಿಡ್ 19 ಕಣಗಳು ಬಾಯಿ-ಮೂಗು ಪ್ರವೇಶಿಸದಂತೆ ತಡೆಯುವಲ್ಲಿ ಒಂದು ಮಾಸ್ಕ್​ಗಿಂತ, ಎರಡು ಮಾಸ್ಕ್​​ಗಳು ಪರಿಣಾಮಕಾರಿ ಎಂಬುದು ಅಧ್ಯಯನದಲ್ಲಿ ಸ್ಪಷ್ಟವಾಗಿದೆ.

ಕೊರೊನಾದಿಂದ ಪಾರಾಗಲು 2 ಮಾಸ್ಕ್ ಧರಿಸುವುದು ಪರಿಣಾಮಕಾರಿ; ಆದರೆ ಧರಿಸುವ ಕ್ರಮ ಯಾವುದು? ಇಲ್ಲಿದೆ ಮಾಹಿತಿ..
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:May 10, 2021 | 5:00 PM

Share

ದೆಹಲಿ: ಭಾರತದಲ್ಲಿ ಕೊವಿಡ್ 19 ಅಲೆ ಜಾಸ್ತಿಯಾಗಿದೆ. ಕೊವಿಡ್ 19 ಸೋಂಕು ಕಾಲಿಟ್ಟಾಗಿನಿಂದಲೂ ಮಾಸ್ಕ್​ ಎಂಬುದು ಜೀವನದ ಅವಿಭಾಜ್ಯ ಅಂಗವಾಗಿಬಿಟ್ಟಿದೆ. ಈಗಂತೂ ಡಬಲ್ ಮಾಸ್ಕ್​ ಧರಿಸಲು ಆರೋಗ್ಯ ತಜ್ಞರು ಶಿಫಾರಸು ಮಾಡುತ್ತಿದ್ದಾರೆ. ಆದರೆ ಈ ವಿಚಾರದಲ್ಲಿ ಹಲವು ಗೊಂದಲಗಳಿವೆ. ಇನ್ನು ಎರಡು ಮಾಸ್ಕ್ ಹೇಗೆ ಧರಿಸಬೇಕು? ಅದು ಹೇಗಿರಬೇಕು? ಎಂಬ ಬಗ್ಗೆ ಕೇಂದ್ರ ಸರ್ಕಾರ ಭಾನುವಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಎರಡು ಮಾಸ್ಕ್ ಧರಿಸುವ ಕ್ರಮ ಹೇಗಿರಬೇಕು? 1. ಎರಡು ಮಾಸ್ಕ್​ಗಳಲ್ಲಿ ಒಂದು ಸರ್ಜಿಕಲ್ ಮಾಸ್ಕ್ ಆಗಿರಬೇಕು ಹಾಗೂ ಇನ್ನೊಂದು ಎರಡು ಅಥವಾ ಮೂರು ಲೇಯರ್​ಗಳುಳ್ಳ ಬಟ್ಟೆಯ ಮಾಸ್ಕ್​ ಆಗಿರಬೇಕು. 2. ಮೂಗಿನ ಮೇಲ್ಭಾಗವನ್ನು ಗಟ್ಟಿಯಾಗಿ ಬಿಗಿದಿರುವಂತೆ ಮಾಸ್ಕ್ ಧರಿಸಬೇಕು. ಹಾಗೇ, ಉಸಿರಾಟಕ್ಕೆ ಯಾವುದೇ ತೊಂದರೆ ಇಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. 3. ಇದರಲ್ಲಿ ಸರ್ಜಿಕಲ್ ಮಾಸ್ಕ್​ನ್ನು ಬದಲಿಸಬೇಕು. ಬಟ್ಟೆ ಮಾಸ್ಕ್​ನ್ನು ಪ್ರತಿದಿನ ತೊಳೆಯಬೇಕು.

ಏನು ಮಾಡಬಾರದು? 1. ಒಂದೇ ತೆರನಾದ ಎರಡು ಮಾಸ್ಕ್​ಗಳನ್ನು ಧರಿಸಬಾರದು. ಅಂದರೆ ಎರಡೂ ಬಟ್ಟೆಯ ಮಾಸ್ಕ್ ಆಗಬಾರದು ಅಥವಾ ಎರಡೂ ಸರ್ಜಿಕಲ್ ಮಾಸ್ಕ್​ ಆಗಿರಬಾರದು. ಎರಡು ಬೇರೆಬೇರೆ ವಿಧದ ಮಾಸ್ಕ್ ಧರಿಸುವುದು ಕಡ್ಡಾಯ ಹಾಗೂ ಸುರಕ್ಷಿತ. 2. ಪ್ರತಿದಿನವೂ ಮಾಸ್ಕ್ ಚೇಂಜ್ ಮಾಡಲೇಬೇಕು. ಅದರಲ್ಲಿ ಬಟ್ಟೆಯ ಮಾಸ್ಕ್​ನ್ನು ತೊಳೆದು ಬಳಸಬಹುದು.

ಸಾರ್ಸ್ ಕೊವಿಡ್ 19 ಕಣಗಳು ಬಾಯಿ-ಮೂಗು ಪ್ರವೇಶಿಸದಂತೆ ತಡೆಯುವಲ್ಲಿ ಒಂದು ಮಾಸ್ಕ್​ಗಿಂತ, ಎರಡು ಮಾಸ್ಕ್​​ಗಳು ಪರಿಣಾಮಕಾರಿ ಎಂಬುದು ಅಧ್ಯಯನದಲ್ಲಿ ಸ್ಪಷ್ಟವಾಗಿದೆ. ಈ ವಿಚಾರವನ್ನು JAMA ಎಂಬ ಅಂತಾರಾಷ್ಟ್ರೀಯ ಮಟ್ಟದ ವೈದ್ಯಕೀಯ ಜರ್ನಲ್​ ಕೂಡ ಪ್ರಕಟಿಸಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಮತ್ತೆ ಮುಂದೂಡಿಕೆ: ಕೊವಿಡ್​ನಿಂದಾಗಿ ಚುನಾವಣೆ ಬೇಡ ಎಂದ ಕಾಂಗ್ರೆಸ್ ನಾಯಕರು

ಕೊಪ್ಪಳ: ರೆಮ್​ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ ಪ್ರಕರಣ; ಬೆಳಕಿಗೆ ಬಂದ 3 ಲಕ್ಷ ವ್ಯವಹಾರ

Wearing two masks to prevent the Covid 19 infection study reveals

Published On - 4:56 pm, Mon, 10 May 21

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!