AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Alert: ಫೆಬ್ರವರಿ 17ರಿಂದ ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಮಳೆ ಸಾಧ್ಯತೆ

Karnataka Weather: ಫೆಬ್ರವರಿ 17-18ರಂದು ಉತ್ತರ ಕರ್ನಾಟಕದ ಒಳಪ್ರದೇಶಗಳಲ್ಲಿ ಆಲಿಕಲ್ಲು, ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ.

Weather Alert: ಫೆಬ್ರವರಿ 17ರಿಂದ ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಮಳೆ ಸಾಧ್ಯತೆ
ಮಳೆ (ಪ್ರಾತಿನಿಧಿಕ ಚಿತ್ರ)
ರಶ್ಮಿ ಕಲ್ಲಕಟ್ಟ
|

Updated on:Feb 16, 2021 | 3:41 PM

Share

ಬೆಂಗಳೂರು: ಈಶಾನ್ಯ ಮುಂಗಾರು ಮರಳಿದ  ಕಾರಣ ಕಳೆದ ಒಂದು ತಿಂಗಳಿನಿಂದ ಒಣ ಹವೆ ಮುಂದುವರಿದಿದ್ದ ದಕ್ಷಿಣ ಭಾರತದಲ್ಲಿ ಫೆಬ್ರವರಿ 17ರಿಂದ ಮಳೆ ಸಿಂಚನವಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಭಾರತದ ಹವಾಮಾನ ಇಲಾಖೆ (IMD) ಪ್ರಕಾರ ಮಧ್ಯ ಭಾರತದಲ್ಲಿ ಬೀಸುವ ಗಾಳಿ ಮತ್ತು ಬಂಗಾಳ ಕೊಲ್ಲಿ ಕಡೆಯಿಂದ ಉಂಟಾಗಿರುವ ಆರ್ದ್ರತೆಯಿಂದ ಮಳೆ ಬರುವ ಸಾಧ್ಯತೆ ಇದೆ. ದಕ್ಷಿಣ ಭಾರತ ಮತ್ತು ಮಧ್ಯ ಭಾರತದಲ್ಲಿ ಮಿಂಚು ಸಹಿತ ಮಳೆಯಾಗಲಿದೆ.

ಫೆಬ್ರವರಿ 17-18ರಂದು ಉತ್ತರ ಕರ್ನಾಟಕದ ಒಳಪ್ರದೇಶಗಳಲ್ಲಿ ಆಲಿಕಲ್ಲು, ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದ್ದು ಫೆಬ್ರವರಿ 18ರಂದು ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ , ಕಲಬುರ್ಗಿ ಮತ್ತು ಕೊಪ್ಪಳದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮುಂಬರುವ ದಿನಗಳಲ್ಲಿ ಕೇರಳ ಮತ್ತು ಸಮೀಪ ಪ್ರದೇಶಗಳಲ್ಲಿ ಮಳೆಯಾಗಲಿದೆ. ಬುಧವಾರ ಕೇರಳದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ತಿರುವನಂತಪುರಂನಲ್ಲಿರುವ ಹವಾಮಾನ ಇಲಾಖೆ ಹೇಳಿದೆ. ಬಂಗಾಳ ಕೊಲ್ಲಿಯ ನೈಋತ್ಯ ಭಾಗದಲ್ಲಿ ಹುಟ್ಟಿರುವ ಚಂಡಮಾರುತ ದಕ್ಷಿಣ ಭಾರತದತ್ತ ಬೀಸುತ್ತಿರುವ ಕಾರಣ ಆಗ್ನೇಯ ಕರಾವಳಿ ಮತ್ತು ಪೂರ್ವ ಘಟ್ಟ ಭಾಗಗಳಲ್ಲಿ ಶುಕ್ರವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಚೆನ್ನೈಯ ಹವಾಮಾನ ಇಲಾಖೆಯ ಪ್ರಕಾರ ತಮಿಳುನಾಡಿನ ದಕ್ಷಿಣ ಕರಾವಳಿಯಲ್ಲಿ ಗುರುವಾರ, ಉತ್ತರ ಕರಾವಳಿ ಮತ್ತು ಚೆನ್ನೈನಲ್ಲಿ ಶುಕ್ರವಾರ ಮಳೆಯಾಗಲಿದೆ. ಕರ್ನಾಟಕ ಮತ್ತು ಕೇರಳದ ಜನರು ಬುಧವಾರ ಮತ್ತು ಗುರುವಾರ, ಆಂಧ್ರಪ್ರದೇಶದ ಕರಾವಳಿ ಮತ್ತು ಮತ್ತು ತಮಿಳುನಾಡಿನ ಜನರು ಶುಕ್ರವಾರ ಮತ್ತು ಶನಿವಾರ ಎಚ್ಚರದಿಂದಿರುವಂತೆ (yellow watch) ಹವಾಮಾನ ಇಲಾಖೆ ಸೂಚಿಸಿದೆ.

ಇದನ್ನೂ ಓದಿ:  ನೆಲಕಚ್ಚಿದ ಬೆಳೆ: ಮಳೆರಾಯನ ಆರ್ಭಟಕ್ಕೆ ನಲುಗಿದ ಅನ್ನದಾತರು

ಆದಾಗ್ಯೂ, 2021ರ ಆರಂಭದಿಂದಲೇ ದಕ್ಷಿಣ ಭಾರತದ ರಾಜ್ಯಗಳಲ್ಲಿ ಸರಾಸರಿಗಿಂತ ತುಸು ಹೆಚ್ಚೇ ಮಳೆ ಸುರಿದಿತ್ತು. ಜನವರಿ 1- ಫೆಬ್ರುವರಿ 15 ರ ಅವಧಿಯಲ್ಲಿ ಆಂಧ್ರಪ್ರದೇಶದಲ್ಲಿ ಸರಾಸರಿ 16ಮಿಮೀ ಮಳೆಯಾಗಿದೆ. ಅದೇ ವೇಳೆ ಕರ್ನಾಟಕದಲ್ಲಿ 22.4 ಮಿಮೀ, ಕೇರಳದಲ್ಲಿ 105.6 ಮಿಮೀ ಮತ್ತು ತಮಿಳುನಾಡಿನಲ್ಲಿ 138.2 ಮಿಮೀ ಮಳೆಯಾಗಿದೆ.

Published On - 3:41 pm, Tue, 16 February 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!