AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Today: 22 ರಾಜ್ಯಗಳಲ್ಲಿ ಇನ್ನೆರಡು ದಿನ ಭಾರೀ ಮಳೆ, ಬಿರುಗಾಳಿ

ಇಂದು 22 ರಾಜ್ಯಗಳಲ್ಲಿ ಬಿರುಗಾಳಿಸಹಿತ ಭಾರೀ ಮಳೆ ಸುರಿದಿದೆ. ಭಾರತ ಹವಾಮಾನ ಇಲಾಖೆ (IMD) ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ನಾಳೆಯವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಮುಂದಿನ 3 ದಿನಗಳವರೆಗೆ ದೆಹಲಿ, ಪಂಜಾಬ್, ಹರಿಯಾಣ, ಚಂಡೀಗಢ, ಹಿಮಾಚಲ ಪ್ರದೇಶ, ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಗುಡುಗು ಸಹಿತ ಮಳೆ, ಮಿಂಚು ಮತ್ತು ಬಿರುಗಾಳಿ ಬೀಸುವ ಮುನ್ಸೂಚನೆ ನೀಡಿದೆ. ಮಾರ್ಚ್ 28ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಮಳೆಯಾಗಲಿದೆ.

Weather Today: 22 ರಾಜ್ಯಗಳಲ್ಲಿ ಇನ್ನೆರಡು ದಿನ ಭಾರೀ ಮಳೆ, ಬಿರುಗಾಳಿ
RainfallImage Credit source: PTI
ಸುಷ್ಮಾ ಚಕ್ರೆ
|

Updated on: Mar 26, 2026 | 1:51 PM

Share

ನವದೆಹಲಿ, ಮಾರ್ಚ್ 26: ಕಳೆದ ಒಂದು ವಾರದಿಂದ ಭಾರತದ ಹಲವು ರಾಜ್ಯಗಳಲ್ಲಿ ಅಕಾಲಿಕ ಮಳೆಯಾಗುತ್ತಿದೆ. ಕರ್ನಾಟಕದಲ್ಲೂ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ಹವಾಮಾನ ಇಲಾಖೆ ಸುಮಾರು 22 ರಾಜ್ಯಗಳಲ್ಲಿ ಇಂದು ಮತ್ತು ನಾಳೆ ಗುಡುಗು, ಮಳೆ (Rain Updates) ಮತ್ತು ಬಲವಾದ ಗಾಳಿ ಬೀಸುವ ಮುನ್ಸೂಚನೆ ನೀಡಿದೆ. ವಾಯುವ್ಯ ಭಾರತದಲ್ಲಿ ಮುಂದಿನ ಎರಡು ದಿನಗಳಲ್ಲಿ ತಾಪಮಾನವು 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಬಹುದು ಎಂದು ಹವಾಮಾನ ಅಧಿಕಾರಿಗಳು ತಿಳಿಸಿದ್ದಾರೆ.

ಛತ್ತೀಸ್‌ಗಢ, ಆಂಧ್ರಪ್ರದೇಶ, ಕರ್ನಾಟಕದ ಮಲೆನಾಡು, ತೆಲಂಗಾಣ, ವಿದರ್ಭ, ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಪಶ್ಚಿಮ ರಾಜಸ್ಥಾನದಲ್ಲೂ ಮಳೆಯಾಗಲಿದೆ. ಈ ತಿಂಗಳ 28ರವರೆಗೆ ಕರಾವಳಿ ಕರ್ನಾಟಕ, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ಮರಾಠವಾಡ ಮತ್ತು ಈಶಾನ್ಯ ರಾಜ್ಯಗಳಲ್ಲಿ ಗುಡುಗು ಸಹಿತ ಮಳೆ ಮತ್ತು ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ಕರ್ನಾಟಕ ಹವಾಮಾನ ವರದಿ: ಮಳೆರಾಯನ ಅವಾಂತರಕ್ಕೆ ಹಾರಿ ಹೋಯ್ತು ಸೂರು! ಇಂದೂ ವರುಣನ ಆರ್ಭಟ ಜೋರು

ಮಾರ್ಚ್ 27ರವರೆಗೆ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮಳೆ ಮತ್ತು ಹಿಮಪಾತವಾಗಬಹುದು ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಉತ್ತರ ಭಾರತದಲ್ಲಿ ಬಿರುಗಾಳಿ ಬೀಸುವ ಬಗ್ಗೆ ಎಚ್ಚರಿಕೆ ನೀಡಿದೆ. ಪಂಜಾಬ್, ಹರಿಯಾಣ, ದೆಹಲಿ, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಗುಡುಗು ಸಹಿತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಮಾರ್ಚ್ 29ರವರೆಗೆ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ವ್ಯಾಪಕ ಮಳೆ, ಮಿಂಚು ಮತ್ತು ಬಲವಾದ ಗಾಳಿ ಬೀಸುವ ಬಗ್ಗೆ ಐಎಂಡಿ ಎಚ್ಚರಿಕೆ ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us