AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Today: ತಮಿಳುನಾಡು, ಪುದುಚೇರಿ, ದೆಹಲಿ ಸೇರಿ ಈ ರಾಜ್ಯಗಳಲ್ಲಿ ಮಾ. 4ರವರೆಗೆ ಭಾರೀ ಮಳೆ

Rain Updates: ಇಂದಿನಿಂದ ಮಾರ್ಚ್​ 4ರ ಅವಧಿಯಲ್ಲಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್ 4ರಂದು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

Weather Today: ತಮಿಳುನಾಡು, ಪುದುಚೇರಿ, ದೆಹಲಿ ಸೇರಿ ಈ ರಾಜ್ಯಗಳಲ್ಲಿ ಮಾ. 4ರವರೆಗೆ ಭಾರೀ ಮಳೆ
ಮಳೆ
TV9 Web
| Edited By: |

Updated on: Mar 03, 2022 | 6:03 AM

Share

Rain Updates: ತಮಿಳುನಾಡು, ಪುದುಚೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ  (Heavy Rain) ಎಂದು ಮುನ್ಸೂಚನೆ ನೀಡಿದೆ. ಏಕೆಂದರೆ ಕಡಿಮೆ ಒತ್ತಡದ ಪ್ರದೇಶವು ಖಿನ್ನತೆಗೆ ತೀವ್ರಗೊಳ್ಳುವ ಸಾಧ್ಯತೆಯಿದೆ. ಆಗ್ನೇಯ ಬಂಗಾಳ ಕೊಲ್ಲಿ, ಅಂಡಮಾನ್ ಸಮುದ್ರ ಮತ್ತು ಹಿಂದೂ ಮಹಾಸಾಗರದ ಪಕ್ಕದ ಪ್ರದೇಶಗಳಲ್ಲಿ ಸೋಮವಾರ ಸಂಜೆ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಪಶ್ಚಿಮ- ವಾಯುವ್ಯ ದಿಕ್ಕಿನಲ್ಲಿ ಶ್ರೀಲಂಕಾದ ಕರಾವಳಿಯ ಕಡೆಗೆ ಮತ್ತು ನಂತರದ 24 ಗಂಟೆಗಳಲ್ಲಿ ಉತ್ತರ ತಮಿಳುನಾಡು ಕರಾವಳಿಯ ಕಡೆಗೆ ಮಳೆ ಹಾಗೂ ಶೀತ ಗಾಳಿ ಚಲಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನಿಂದ ಮಾರ್ಚ್​ 4ರ ಅವಧಿಯಲ್ಲಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್ 4ರಂದು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್ 4 ಮತ್ತು 5ರಂದು ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಮತ್ತು ರಾಯಲಸೀಮಾದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇಂದು ಬೆಳಗ್ಗೆಯಿಂದ ದಕ್ಷಿಣ ಬಂಗಾಳಕೊಲ್ಲಿ ಮತ್ತು ಹಿಂದೂ ಮಹಾಸಾಗರ, ಮನ್ನಾರ್ ಕೊಲ್ಲಿ ಮತ್ತು ಕೊಮೊರಿನ್ ಪ್ರದೇಶದಲ್ಲಿ ಪ್ರಕ್ಷುಬ್ಧವಾಗಿದ್ದ ಸಮುದ್ರ ಪರಿಸ್ಥಿತಿಯು ಇಂದಿನಿಂದ ಮಾರ್ಚ್ 5ರವರೆಗೆ ನೈಋತ್ಯ ಹಾಗೂ ಪಕ್ಕದ ಪಶ್ಚಿಮ ಬಂಗಾಳ ಕೊಲ್ಲಿ, ತಮಿಳುನಾಡಿನಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಮಾರ್ಚ್ 4ರಿಂದ 5ರವರೆಗೆ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಗಳಲ್ಲಿ ಮಳೆಯಾಗಲಿದೆ.

ಇಂದಿನಿಂದ ಮಾರ್ಚ್ 5ರವರೆಗೆ ದಕ್ಷಿಣ ಬಂಗಾಳ ಕೊಲ್ಲಿ ಮತ್ತು ಹಿಂದೂ ಮಹಾಸಾಗರ, ಮನ್ನಾರ್ ಕೊಲ್ಲಿ ಮತ್ತು ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿಯ ನೈಋತ್ಯ ಪ್ರದೇಶಗಳಿಗೆ ತೆರಳದಂತೆ ಮೀನುಗಾರರಿಗೆ ತಿಳಿಸಿದೆ. ಇಂದು ಮತ್ತು ಮಾರ್ಚ್ 5ರಂದು ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಯಲ್ಲಿ ಮಳೆ ಮುಂದುವರೆಯಲಿದೆ.

ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಇಂದು ಮತ್ತು ನಾಳೆ ಜಮ್ಮು-ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶದಲ್ಲಿ ವ್ಯಾಪಕವಾದ ಮಳೆ ಅಥವಾ ಹಿಮಪಾತ ಉಂಟಾಗಲಿದೆ. ಇನ್ನೆರಡು ದಿನ ದೆಹಲಿ, ಪಂಜಾಬ್, ಹರಿಯಾಣ ಮತ್ತು ಚಂಡೀಗಢದಾದ್ಯಂತ ಮತ್ತು ರಾಜಸ್ಥಾನದಲ್ಲಿ ಲಘು ಮಳೆಯ ಮುನ್ಸೂಚನೆ ಇದೆ.

ಇದನ್ನೂ ಓದಿ: Weather Today: ನಾಳೆಯಿಂದ ಕೇರಳ, ತಮಿಳುನಾಡಿನಲ್ಲಿ ಮತ್ತೆ ಮಳೆಯ ಆರ್ಭಟ; ಇಂದಿನ ಹವಾಮಾನ ಹೀಗಿದೆ

Weather Today: ಕೇರಳ, ಲಡಾಖ್ ಸೇರಿ ಹಲವು ರಾಜ್ಯಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​