AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Today: ಉತ್ತರ ಪ್ರದೇಶ, ಉತ್ತರಾಖಂಡ ಸೇರಿ ಈ ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

Rain Updates: ಇಂದು ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Weather Today: ಉತ್ತರ ಪ್ರದೇಶ, ಉತ್ತರಾಖಂಡ ಸೇರಿ ಈ ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ
ಮಳೆ
TV9 Web
| Edited By: |

Updated on: Sep 17, 2022 | 1:29 PM

Share

ನವದೆಹಲಿ: ಉತ್ತರ ಪ್ರದೇಶ (Uttar Pradesh) ಮತ್ತು ಉತ್ತರಾಖಂಡದಲ್ಲಿ (Uttarakhand) ಇಂದು (ಸೆಪ್ಟೆಂಬರ್ 17) ಅತ್ಯಂತ ಭಾರೀ ಪ್ರಮಾಣದಲ್ಲಿ ಮಳೆಯಾಗುವ (Rainfall) ಮುನ್ಸೂಚನೆ ನೀಡಲಾಗಿದೆ. ಮುಂದಿನ 5 ದಿನಗಳ ಕಾಲ ಈಶಾನ್ಯ ಭಾರತದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಲಿದೆ. ಲಕ್ನೋದಲ್ಲಿ ಮಳೆಯಿಂದಾಗಿ 9 ಜನರು ಮೃತಪಟ್ಟಿದ್ದಾರೆ, ಹಲವು ಮನೆಗಳು ಧ್ವಂಸವಾಗಿವೆ. ಇಂದು ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದೆಹಲಿ: ದೆಹಲಿಯಲ್ಲಿ ಇಂದು ಹಗಲಿನಲ್ಲಿ ಮೋಡ ಕವಿದ ವಾತಾವರಣ ಮತ್ತು ಲಘು ಮಳೆಯಾಗುವ ಮುನ್ಸೂಚನೆ ಇದೆ. ಗರಿಷ್ಠ ತಾಪಮಾನವು ಸುಮಾರು 32 ಡಿಗ್ರಿ ಸೆಲ್ಸಿಯಸ್ ಆಗುವ ನಿರೀಕ್ಷೆಯಿದೆ ಎಂದು ಐಎಂಡಿ ಹೇಳಿದೆ.

ರಾಜಸ್ಥಾನ: ಶುಕ್ರವಾರದಿಂದಲೇ ಪೂರ್ವ ರಾಜಸ್ಥಾನದ ಬಹುತೇಕ ಭಾಗಗಳಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗಿದ್ದು, ಮುಂದಿನ ಮೂರರಿಂದ 4 ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಪಶ್ಚಿಮ ರಾಜಸ್ಥಾನದ ಬಹುತೇಕ ಭಾಗಗಳಲ್ಲಿ ಇಂದಿನಿಂದ ಶುಷ್ಕ ಹವಾಮಾನದ ಸಾಧ್ಯತೆಯಿದೆ. ರಾಜಸ್ಥಾನದಲ್ಲಿ ಈ ಬಾರಿ ಮಾನ್ಸೂನ್ ಉತ್ತಮವಾಗಿದೆ. ಹೆಚ್ಚಿನ ಪ್ರದೇಶಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ದಾಖಲಾಗಿದೆ.

ಇದನ್ನೂ ಓದಿ: ಮುಂಬೈನಲ್ಲಿ ಭಾರೀ ಮಳೆ: ಮಹಾರಾಷ್ಟ್ರದ ರಾಯಘಡ, ರತ್ನಗಿರಿ, ಸತಾರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಮಹಾರಾಷ್ಟ್ರ: ಕಳೆದ 24 ಗಂಟೆಗಳಲ್ಲಿ, ಮಹಾರಾಷ್ಟ್ರದಲ್ಲಿ ಕ್ರಮವಾಗಿ 37.71 ಮಿಮೀ, 43.38 ಮಿಮೀ ಮತ್ತು 36.88 ಮಿಮೀ ಸರಾಸರಿ ಮಳೆ ದಾಖಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಒಡಿಶಾ: ಭಾನುವಾರ ವಾಯುವ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಲಿದೆ. ಪುರಿ, ಕಲಹಂಡಿ, ಕಂಧಮಾಲ್, ಬೋಲಂಗೀರ್, ಗಜಪತಿ, ಗಂಜಾಂ ಮತ್ತು ಜಗತ್‌ಸಿಂಗ್‌ಪುರ ಜಿಲ್ಲೆಗಳಲ್ಲಿ ಭಾನುವಾರ 7ರಿಂದ 10 ಮಿಮೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಖುರ್ದಾ, ಕಟಕ್ ಮತ್ತು ಪುರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೋಮವಾರ ಭಾರೀ ಮಳೆ ಬೀಳುವ ಸಾಧ್ಯತೆ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ