AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Today: ಈ ರಾಜ್ಯಗಳಲ್ಲಿ ಇಂದಿನಿಂದ ಜ. 2ರವರೆಗೆ ಮಳೆ, ವಿಪರೀತ ಚಳಿ

Weather Forecast: ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ಡಿಸೆಂಬರ್ 31ರಿಂದ ಜನವರಿ 2ರವರೆಗೆ ಶೀತ ಗಾಳಿಯ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ. ರಾಜಸ್ಥಾನದಲ್ಲಿ ಜನವರಿ 1 ಮತ್ತು 2ರಂದು ತೀವ್ರ ಚಳಿ ಉಂಟಾಗಲಿದೆ.

Weather Today: ಈ ರಾಜ್ಯಗಳಲ್ಲಿ ಇಂದಿನಿಂದ ಜ. 2ರವರೆಗೆ ಮಳೆ, ವಿಪರೀತ ಚಳಿ
ಚಳಿ
TV9 Web
| Updated By: ಸುಷ್ಮಾ ಚಕ್ರೆ|

Updated on:Dec 28, 2021 | 7:48 PM

Share

ನವದೆಹಹಲಿ: ಭಾರತದಲ್ಲಿ ಚಳಿಯ ಜೊತೆಗೆ ಮಳೆಯೂ ಸುರಿಯುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD)ಯ ಇತ್ತೀಚಿನ ಹವಾಮಾನ ಮುನ್ಸೂಚನೆಯ ಪ್ರಕಾರ, ಹೊಸ ವರ್ಷಕ್ಕೂ ಮೊದಲು ಈ ವರ್ಷ ಅನೇಕ ರಾಜ್ಯಗಳಲ್ಲಿ ತೀವ್ರವಾದ ಚಳಿ ಮತ್ತು ಶೀತ ಗಾಳಿ ಆವರಿಸಲಿದೆ. ದೇಶದ ಕೆಲವು ಭಾಗಗಳಲ್ಲಿ ಆಲಿಕಲ್ಲು ಮಳೆ ಮತ್ತು ಲಘು ಮಳೆಯಾಗುವ ಸಾಧ್ಯತೆಯಿದೆ. IMDಯ ಇತ್ತೀಚಿನ ಹವಾಮಾನ ಮುನ್ಸೂಚನೆಯಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ರಾಜಸ್ಥಾನದ ಕೆಲವು ಭಾಗಗಳಲ್ಲಿ ಈ ವಾರ ಶೀತ ಗಾಳಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ ಒಂದೆರಡು ದಿನಗಳಲ್ಲಿ ಮಳೆ ಮತ್ತು ಆಲಿಕಲ್ಲು ಸಹಿತ ಮಳೆಯೂ ಆಗಲಿದೆ.

ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ಡಿಸೆಂಬರ್ 31ರಿಂದ ಜನವರಿ 2ರವರೆಗೆ ಶೀತ ಗಾಳಿಯ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ. ರಾಜಸ್ಥಾನದಲ್ಲಿ ಜನವರಿ 1 ಮತ್ತು 2ರಂದು ತೀವ್ರ ಚಳಿ ಉಂಟಾಗಲಿದೆ. IMD ಪ್ರಕಾರ, ಡಿಸೆಂಬರ್ 29 ಮತ್ತು 30ರಂದು ಬಿಹಾರದಲ್ಲಿ ಶೀತ ವಾತಾವರಣ ಇರಲಿದೆ. ಮುಂದಿನ ಮೂರು ದಿನಗಳಲ್ಲಿ ರಾತ್ರಿ ಮತ್ತು ಬೆಳಗಿನ ಸಮಯದಲ್ಲಿ ಪಂಜಾಬ್, ಹರಿಯಾಣ ಮತ್ತು ಉತ್ತರ ರಾಜಸ್ಥಾನದಲ್ಲಿ ಮತ್ತು ಡಿಸೆಂಬರ್ 30 ಮತ್ತು 31ರಂದು ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ದಟ್ಟವಾದ ಮಂಜು ಇರುತ್ತದೆ ಎಂದು ಹವಾಮಾನ ಸಂಸ್ಥೆ ಮುನ್ಸೂಚನೆ ನೀಡಿದೆ.

ವಾಯುವ್ಯ ಭಾರತದ ಭಾಗಗಳಲ್ಲಿ ಇಂದು ಮಳೆ ಹೆಚ್ಚಾಗಲಿದೆ. ಇದೇ ರೀತಿಯ ಪರಿಸ್ಥಿತಿಗಳು ಇಂದು ಮತ್ತು ಡಿಸೆಂಬರ್ 29ರಂದು ಮಧ್ಯ ಭಾರತದ ಮೇಲೆ ಮತ್ತು ಡಿಸೆಂಬರ್ 30ರವರೆಗೆ ಪೂರ್ವ ಭಾರತದಲ್ಲಿ ಮಳೆಯಾಗಲಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಡಿಸೆಂಬರ್ 29ರಂದು ಚದುರಿದ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯಿದೆ.

ಹರಿಯಾಣ, ಚಂಡೀಗಢ, ದೆಹಲಿ ಮತ್ತು ರಾಜಸ್ಥಾನದ ಕೆಲವು ಭಾಗಗಳಲ್ಲಿ ಇಂದು ಲಘುವಾಗಿ ಮಳೆಯಾಗುವ ನಿರೀಕ್ಷೆಯಿದೆ. ಆದರೆ ಡಿಸೆಂಬರ್ 29ರಂದು ಉತ್ತರ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಇಂದು ಪೂರ್ವ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಗುಡುಗು, ಮಿಂಚು ಮತ್ತು ಆಲಿಕಲ್ಲು ಸಹಿತ ಮಳೆಯಾಗಲಿದೆ.

ಇದನ್ನೂ ಓದಿ: Karnataka Weather Today: ಕರ್ನಾಟಕದಲ್ಲಿ ಇನ್ನೂ 4 ದಿನ ಭಾರೀ ಚಳಿ; ಈ ರಾಜ್ಯಗಳಲ್ಲಿ ಇಂದು ಮಳೆ, ಹಿಮಪಾತ

Karnataka Dam Water Level: ದೇಶಾದ್ಯಂತ ನಿಲ್ಲದ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Published On - 7:47 pm, Tue, 28 December 21

ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್