AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Today: ಈ ರಾಜ್ಯಗಳಲ್ಲಿ ಇಂದಿನಿಂದ ಜ. 2ರವರೆಗೆ ಮಳೆ, ವಿಪರೀತ ಚಳಿ

Weather Forecast: ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ಡಿಸೆಂಬರ್ 31ರಿಂದ ಜನವರಿ 2ರವರೆಗೆ ಶೀತ ಗಾಳಿಯ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ. ರಾಜಸ್ಥಾನದಲ್ಲಿ ಜನವರಿ 1 ಮತ್ತು 2ರಂದು ತೀವ್ರ ಚಳಿ ಉಂಟಾಗಲಿದೆ.

Weather Today: ಈ ರಾಜ್ಯಗಳಲ್ಲಿ ಇಂದಿನಿಂದ ಜ. 2ರವರೆಗೆ ಮಳೆ, ವಿಪರೀತ ಚಳಿ
ಚಳಿ
TV9 Web
| Edited By: |

Updated on:Dec 28, 2021 | 7:48 PM

Share

ನವದೆಹಹಲಿ: ಭಾರತದಲ್ಲಿ ಚಳಿಯ ಜೊತೆಗೆ ಮಳೆಯೂ ಸುರಿಯುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD)ಯ ಇತ್ತೀಚಿನ ಹವಾಮಾನ ಮುನ್ಸೂಚನೆಯ ಪ್ರಕಾರ, ಹೊಸ ವರ್ಷಕ್ಕೂ ಮೊದಲು ಈ ವರ್ಷ ಅನೇಕ ರಾಜ್ಯಗಳಲ್ಲಿ ತೀವ್ರವಾದ ಚಳಿ ಮತ್ತು ಶೀತ ಗಾಳಿ ಆವರಿಸಲಿದೆ. ದೇಶದ ಕೆಲವು ಭಾಗಗಳಲ್ಲಿ ಆಲಿಕಲ್ಲು ಮಳೆ ಮತ್ತು ಲಘು ಮಳೆಯಾಗುವ ಸಾಧ್ಯತೆಯಿದೆ. IMDಯ ಇತ್ತೀಚಿನ ಹವಾಮಾನ ಮುನ್ಸೂಚನೆಯಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ರಾಜಸ್ಥಾನದ ಕೆಲವು ಭಾಗಗಳಲ್ಲಿ ಈ ವಾರ ಶೀತ ಗಾಳಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ ಒಂದೆರಡು ದಿನಗಳಲ್ಲಿ ಮಳೆ ಮತ್ತು ಆಲಿಕಲ್ಲು ಸಹಿತ ಮಳೆಯೂ ಆಗಲಿದೆ.

ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ಡಿಸೆಂಬರ್ 31ರಿಂದ ಜನವರಿ 2ರವರೆಗೆ ಶೀತ ಗಾಳಿಯ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ. ರಾಜಸ್ಥಾನದಲ್ಲಿ ಜನವರಿ 1 ಮತ್ತು 2ರಂದು ತೀವ್ರ ಚಳಿ ಉಂಟಾಗಲಿದೆ. IMD ಪ್ರಕಾರ, ಡಿಸೆಂಬರ್ 29 ಮತ್ತು 30ರಂದು ಬಿಹಾರದಲ್ಲಿ ಶೀತ ವಾತಾವರಣ ಇರಲಿದೆ. ಮುಂದಿನ ಮೂರು ದಿನಗಳಲ್ಲಿ ರಾತ್ರಿ ಮತ್ತು ಬೆಳಗಿನ ಸಮಯದಲ್ಲಿ ಪಂಜಾಬ್, ಹರಿಯಾಣ ಮತ್ತು ಉತ್ತರ ರಾಜಸ್ಥಾನದಲ್ಲಿ ಮತ್ತು ಡಿಸೆಂಬರ್ 30 ಮತ್ತು 31ರಂದು ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ದಟ್ಟವಾದ ಮಂಜು ಇರುತ್ತದೆ ಎಂದು ಹವಾಮಾನ ಸಂಸ್ಥೆ ಮುನ್ಸೂಚನೆ ನೀಡಿದೆ.

ವಾಯುವ್ಯ ಭಾರತದ ಭಾಗಗಳಲ್ಲಿ ಇಂದು ಮಳೆ ಹೆಚ್ಚಾಗಲಿದೆ. ಇದೇ ರೀತಿಯ ಪರಿಸ್ಥಿತಿಗಳು ಇಂದು ಮತ್ತು ಡಿಸೆಂಬರ್ 29ರಂದು ಮಧ್ಯ ಭಾರತದ ಮೇಲೆ ಮತ್ತು ಡಿಸೆಂಬರ್ 30ರವರೆಗೆ ಪೂರ್ವ ಭಾರತದಲ್ಲಿ ಮಳೆಯಾಗಲಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಡಿಸೆಂಬರ್ 29ರಂದು ಚದುರಿದ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯಿದೆ.

ಹರಿಯಾಣ, ಚಂಡೀಗಢ, ದೆಹಲಿ ಮತ್ತು ರಾಜಸ್ಥಾನದ ಕೆಲವು ಭಾಗಗಳಲ್ಲಿ ಇಂದು ಲಘುವಾಗಿ ಮಳೆಯಾಗುವ ನಿರೀಕ್ಷೆಯಿದೆ. ಆದರೆ ಡಿಸೆಂಬರ್ 29ರಂದು ಉತ್ತರ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಇಂದು ಪೂರ್ವ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಗುಡುಗು, ಮಿಂಚು ಮತ್ತು ಆಲಿಕಲ್ಲು ಸಹಿತ ಮಳೆಯಾಗಲಿದೆ.

ಇದನ್ನೂ ಓದಿ: Karnataka Weather Today: ಕರ್ನಾಟಕದಲ್ಲಿ ಇನ್ನೂ 4 ದಿನ ಭಾರೀ ಚಳಿ; ಈ ರಾಜ್ಯಗಳಲ್ಲಿ ಇಂದು ಮಳೆ, ಹಿಮಪಾತ

Karnataka Dam Water Level: ದೇಶಾದ್ಯಂತ ನಿಲ್ಲದ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Published On - 7:47 pm, Tue, 28 December 21

Follow Us
Web contact
Web contact

TV9 Kannada

Read More
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?