AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Today: ಉತ್ತರಾಖಂಡ, ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ; ದೆಹಲಿ, ಪಂಜಾಬ್​ನಲ್ಲಿ ಮಳೆ ಸಾಧ್ಯತೆ

Weather Forecast: ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್‌ನಲ್ಲಿ ಜನವರಿ 22ರವರೆಗೆ ಲಘುವಾಗಿ ಮಳೆ ಮತ್ತು ಹಿಮಪಾತ ಉಂಟಾಗಲಿದೆ.

Weather Today: ಉತ್ತರಾಖಂಡ, ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ; ದೆಹಲಿ, ಪಂಜಾಬ್​ನಲ್ಲಿ ಮಳೆ ಸಾಧ್ಯತೆ
ಹಿಮಾಚಲ ಪ್ರದೇಶದಲ್ಲಿ ಹಿಮಪಾತImage Credit source: Twitter
TV9 Web
| Edited By: |

Updated on: Jan 20, 2023 | 9:24 AM

Share

ನವದೆಹಲಿ: ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಇಂದು (ಜನವರಿ 20) ಲಘು ಮಳೆಯಾಗಲಿದೆ (Rainfall) ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹಾಗೇ, ಮುಂದಿನ 48 ಗಂಟೆಗಳ ಕಾಲ ಹಿಮಾಚಲ ಪ್ರದೇಶದ (Himachal Pradesh) ಹೆಚ್ಚಿನ ಪ್ರದೇಶಗಳಲ್ಲಿ ಭಾರೀ ಹಿಮಪಾತ (Snowfall) ಮತ್ತು ಮಳೆಯ ಮುನ್ಸೂಚನೆ ನೀಡಲಾಗಿದೆ.

ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್‌ನಲ್ಲಿ ಜನವರಿ 22ರವರೆಗೆ ಲಘುವಾಗಿ ಮಳೆ ಮತ್ತು ಹಿಮಪಾತ ಉಂಟಾಗಲಿದೆ. ಪಂಜಾಬ್, ಹರಿಯಾಣ, ಚಂಡೀಗಢ, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಜನವರಿ 23-26ರ ಅವಧಿಯಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ದೆಹಲಿಯಲ್ಲಿ ಜನವರಿ 23ರಿಂದ 25ರವರೆಗೆ ಮಳೆ ಬೀಳುವ ನಿರೀಕ್ಷೆಯಿದೆ.

ಇದನ್ನೂ ಓದಿ: Karnataka Weather Today: ಕರ್ನಾಟಕದಲ್ಲಿ ಹೆಚ್ಚುತ್ತಲೇ ಇದೆ ಶೀತ ಗಾಳಿ; ಬೆಂಗಳೂರಿನ ಹವಾಮಾನ ಹೀಗಿದೆ

ಒಡಿಶಾ, ಅಸ್ಸಾಂ, ಮೇಘಾಲಯ ಮತ್ತು ತ್ರಿಪುರಾದ ಹಲವು ಪ್ರದೇಶಗಳಲ್ಲಿ ಜನವರಿ 23ರ ಅವಧಿಯಲ್ಲಿ ದಟ್ಟವಾದ ಮಂಜು ಆವರಿಸುವ ಸಾಧ್ಯತೆಯಿದೆ. ವಾಯುವ್ಯ ಭಾರತದ ಸೀವ್ರಾಲ್ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು ಸುಮಾರು 2 ಡಿಗ್ರಿ ಸೆಲ್ಸಿಯಸ್​ಗೆ ಏರಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಮಧ್ಯಪ್ರದೇಶದಲ್ಲಿ ಕನಿಷ್ಠ ತಾಪಮಾನದಲ್ಲಿ 3ರಿಂದ 5 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

ಮುಂದಿನ ವಾರ 5 ದಿನಗಳ ಕಾಲ ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತವಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. IMD ಪ್ರಕಾರ, ಹಿಮಾಚಲ ಪ್ರದೇಶವು ಜನವರಿ 23ರಿಂದ 26ರವರೆಗೆ ಭಾರೀ ಹಿಮಪಾತ ಮತ್ತು ಮಳೆಗೆ ಸಾಕ್ಷಿಯಾಗಲಿದೆ. ಲಾಹೌಲ್-ಸ್ಪಿತಿ, ಕುಲು, ಕಿನ್ನೌರ್ ಮತ್ತು ಚಂಬಾದ 3ರಿಂದ 4 ಜಿಲ್ಲೆಗಳಲ್ಲಿ 5 ಸೆಂ.ಮೀ ಹಿಮಪಾತ ದಾಖಲಾಗಿದೆ.

ಇದನ್ನೂ ಓದಿ: Karnataka Weather Today: ಇನ್ನೂ 1 ವಾರ ಕರ್ನಾಟಕದಾದ್ಯಂತ ಚಳಿ ಹೆಚ್ಚಳ; ಹವಾಮಾನ ಇಲಾಖೆ ಮುನ್ಸೂಚನೆ

“ಎಲ್ಲ ರೀತಿಯ ಹವಾಮಾನ ಎಚ್ಚರಿಕೆಗೆ ಸರ್ಕಾರ ಸಿದ್ಧವಾಗಿದೆ. ಭಾರೀ ಹಿಮದ ನಡುವೆ ನಿರ್ಬಂಧಿಸಲಾದ ರಸ್ತೆಗಳನ್ನು ತೆರವುಗೊಳಿಸಲು ತಮ್ಮ ಹಿಮ ತೆರವು ಕಾರ್ಯಾಚರಣೆಯೊಂದಿಗೆ ಸಿದ್ಧರಾಗಿರಲು ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಹಿಮಾಚಲ ಪ್ರದೇಶದ ಸಿಎಂ ಸುಖ್ವಿಂದರ್ ಸಿಂಗ್ ಸುಖು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು