AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Today: ಉತ್ತರಾಖಂಡ, ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ; ದೆಹಲಿ, ಪಂಜಾಬ್​ನಲ್ಲಿ ಮಳೆ ಸಾಧ್ಯತೆ

Weather Forecast: ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್‌ನಲ್ಲಿ ಜನವರಿ 22ರವರೆಗೆ ಲಘುವಾಗಿ ಮಳೆ ಮತ್ತು ಹಿಮಪಾತ ಉಂಟಾಗಲಿದೆ.

Weather Today: ಉತ್ತರಾಖಂಡ, ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ; ದೆಹಲಿ, ಪಂಜಾಬ್​ನಲ್ಲಿ ಮಳೆ ಸಾಧ್ಯತೆ
ಹಿಮಾಚಲ ಪ್ರದೇಶದಲ್ಲಿ ಹಿಮಪಾತImage Credit source: Twitter
TV9 Web
| Edited By: |

Updated on: Jan 20, 2023 | 9:24 AM

Share

ನವದೆಹಲಿ: ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಇಂದು (ಜನವರಿ 20) ಲಘು ಮಳೆಯಾಗಲಿದೆ (Rainfall) ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹಾಗೇ, ಮುಂದಿನ 48 ಗಂಟೆಗಳ ಕಾಲ ಹಿಮಾಚಲ ಪ್ರದೇಶದ (Himachal Pradesh) ಹೆಚ್ಚಿನ ಪ್ರದೇಶಗಳಲ್ಲಿ ಭಾರೀ ಹಿಮಪಾತ (Snowfall) ಮತ್ತು ಮಳೆಯ ಮುನ್ಸೂಚನೆ ನೀಡಲಾಗಿದೆ.

ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್‌ನಲ್ಲಿ ಜನವರಿ 22ರವರೆಗೆ ಲಘುವಾಗಿ ಮಳೆ ಮತ್ತು ಹಿಮಪಾತ ಉಂಟಾಗಲಿದೆ. ಪಂಜಾಬ್, ಹರಿಯಾಣ, ಚಂಡೀಗಢ, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಜನವರಿ 23-26ರ ಅವಧಿಯಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ದೆಹಲಿಯಲ್ಲಿ ಜನವರಿ 23ರಿಂದ 25ರವರೆಗೆ ಮಳೆ ಬೀಳುವ ನಿರೀಕ್ಷೆಯಿದೆ.

ಇದನ್ನೂ ಓದಿ: Karnataka Weather Today: ಕರ್ನಾಟಕದಲ್ಲಿ ಹೆಚ್ಚುತ್ತಲೇ ಇದೆ ಶೀತ ಗಾಳಿ; ಬೆಂಗಳೂರಿನ ಹವಾಮಾನ ಹೀಗಿದೆ

ಒಡಿಶಾ, ಅಸ್ಸಾಂ, ಮೇಘಾಲಯ ಮತ್ತು ತ್ರಿಪುರಾದ ಹಲವು ಪ್ರದೇಶಗಳಲ್ಲಿ ಜನವರಿ 23ರ ಅವಧಿಯಲ್ಲಿ ದಟ್ಟವಾದ ಮಂಜು ಆವರಿಸುವ ಸಾಧ್ಯತೆಯಿದೆ. ವಾಯುವ್ಯ ಭಾರತದ ಸೀವ್ರಾಲ್ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು ಸುಮಾರು 2 ಡಿಗ್ರಿ ಸೆಲ್ಸಿಯಸ್​ಗೆ ಏರಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಮಧ್ಯಪ್ರದೇಶದಲ್ಲಿ ಕನಿಷ್ಠ ತಾಪಮಾನದಲ್ಲಿ 3ರಿಂದ 5 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

ಮುಂದಿನ ವಾರ 5 ದಿನಗಳ ಕಾಲ ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತವಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. IMD ಪ್ರಕಾರ, ಹಿಮಾಚಲ ಪ್ರದೇಶವು ಜನವರಿ 23ರಿಂದ 26ರವರೆಗೆ ಭಾರೀ ಹಿಮಪಾತ ಮತ್ತು ಮಳೆಗೆ ಸಾಕ್ಷಿಯಾಗಲಿದೆ. ಲಾಹೌಲ್-ಸ್ಪಿತಿ, ಕುಲು, ಕಿನ್ನೌರ್ ಮತ್ತು ಚಂಬಾದ 3ರಿಂದ 4 ಜಿಲ್ಲೆಗಳಲ್ಲಿ 5 ಸೆಂ.ಮೀ ಹಿಮಪಾತ ದಾಖಲಾಗಿದೆ.

ಇದನ್ನೂ ಓದಿ: Karnataka Weather Today: ಇನ್ನೂ 1 ವಾರ ಕರ್ನಾಟಕದಾದ್ಯಂತ ಚಳಿ ಹೆಚ್ಚಳ; ಹವಾಮಾನ ಇಲಾಖೆ ಮುನ್ಸೂಚನೆ

“ಎಲ್ಲ ರೀತಿಯ ಹವಾಮಾನ ಎಚ್ಚರಿಕೆಗೆ ಸರ್ಕಾರ ಸಿದ್ಧವಾಗಿದೆ. ಭಾರೀ ಹಿಮದ ನಡುವೆ ನಿರ್ಬಂಧಿಸಲಾದ ರಸ್ತೆಗಳನ್ನು ತೆರವುಗೊಳಿಸಲು ತಮ್ಮ ಹಿಮ ತೆರವು ಕಾರ್ಯಾಚರಣೆಯೊಂದಿಗೆ ಸಿದ್ಧರಾಗಿರಲು ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಹಿಮಾಚಲ ಪ್ರದೇಶದ ಸಿಎಂ ಸುಖ್ವಿಂದರ್ ಸಿಂಗ್ ಸುಖು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ