AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Today: ತಮಿಳುನಾಡಿನ ಹಲವೆಡೆ ಇನ್ನೆರಡು ದಿನ ಭಾರೀ ಮಳೆ; ಚೆನ್ನೈನಲ್ಲಿ ರೆಡ್ ಅಲರ್ಟ್​ ಘೋಷಣೆ

Tamil Nadu Rain: ತಮಿಳುನಾಡು ಕರಾವಳಿ, ಕಾರೈಕಲ್ ಮತ್ತು ಪುದುಚೇರಿಯಲ್ಲಿ ಇಂದು ಭಾರೀ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ.

Weather Today: ತಮಿಳುನಾಡಿನ ಹಲವೆಡೆ ಇನ್ನೆರಡು ದಿನ ಭಾರೀ ಮಳೆ; ಚೆನ್ನೈನಲ್ಲಿ ರೆಡ್ ಅಲರ್ಟ್​ ಘೋಷಣೆ
ಮಳೆ
TV9 Web
| Updated By: ಸುಷ್ಮಾ ಚಕ್ರೆ|

Updated on: Mar 04, 2022 | 5:50 AM

Share

ಬೆಂಗಳೂರು: ಹಲವು ರಾಜ್ಯಗಳಲ್ಲಿ ಈ ಬಾರಿ ಮುಂಚಿತವಾಗಿಯೇ ಮಳೆಗಾಲ ಶುರುವಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ದಕ್ಷಿಣ ಬಂಗಾಳಕೊಲ್ಲಿಯ ಮಧ್ಯ ಭಾಗಗಳಲ್ಲಿ ವಾಯುಭಾರ ಕುಸಿತವಾಗಿದೆ. ಮುಂದಿನ 48 ಗಂಟೆಗಳಲ್ಲಿ ವಾಯುಭಾರ ಕುಸಿತದ ಪ್ರಭಾವ ವಾಯುವ್ಯ ದಿಕ್ಕಿನಲ್ಲಿ ಶ್ರೀಲಂಕಾದ ಪೂರ್ವ ಕರಾವಳಿಯ ಉತ್ತರ ತಮಿಳುನಾಡು ಕರಾವಳಿಯ ಕಡೆಗೆ ಸಾಗಲಿದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್‌ನಲ್ಲಿ ಇಂದಿನಿಂದ 2 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಇಂದು ತಮಿಳುನಾಡು, ಪುದುಚೇರಿಯಲ್ಲಿ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ IMD ಸಲಹೆ ನೀಡಿದೆ. ಹಾಗೇ, ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಿಂದಾಗಿ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ಮೇಲುಗೈ ಸಾಧಿಸಲಿವೆ. ಇಂದು ಮತ್ತು ಶನಿವಾರ ಚೆನ್ನೈನಲ್ಲಿ ಭಾರೀ ಮಳೆಯಾಗಲಿದೆ. ಚೆನ್ನೈನಲ್ಲಿ ಮೋಡ ಕವಿದ ವಾತಾವರಣವಿದ್ದು, ಇನ್ನೆರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಪ್ರಾದೇಶಿಕ ಹವಾಮಾನ ಇಲಾಖೆಯು ರಾಜ್ಯದ ಇತರ ಜಿಲ್ಲೆಗಳಲ್ಲಿ ಈ ಕೆಳಗಿನ ಎಚ್ಚರಿಕೆಗಳನ್ನು ನೀಡಿದೆ.

ಇಂದು ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಲಾದ ಏರಿಯಾಗಳು- ವಿಲ್ಲುಪುರಂ, ಪುದುಚೇರಿ ಮತ್ತು ಕಡಲೂರು. ಆರೆಂಜ್ ಎಚ್ಚರಿಕೆ ನೀಡಲಾದ ಪ್ರದೇಶಗಳು- ಚೆಂಗಲ್ಪಟ್ಟು, ಮೈಲಾಡುತುರೈ, ನಾಗಪ್ಪಟಿನಂ, ಕಾರೈಕಲ್, ಕಾಂಚೀಪುರಂ, ತಂಜಾವೂರು ಮತ್ತು ತಿರುವಾರೂರ್, ತಿರುವಳ್ಳೂರು, ರಾಣಿಪೇಟ್. ಹಳದಿ ಅಲರ್ಟ್​ ಘೋಷಿಸಲಾದ ಏರಿಯಾಗಳು- ಪುದುಚೇರಿ, ತಿರುವರೂರ್, ತಂಜಾವೂರು, ಪುದುಕೊಟ್ಟೈ, ಕಲ್ಲಕುರುಚಿ, ಅರಿಯಲೂರ್ ಮತ್ತು ಪೆರಂಬಲೂರು, ತಿರುವಳ್ಳೂರ್, ಚೆನ್ನೈ, ವೆಲ್ಲೂರ್, ರಾಣಿಪೇಟ್, ತಿರುಪ್ಪತ್ತೂರ್, ತಿರುವಣ್ಣಾಮಲೈ, ಅರಿಯಲೂರ್, ತಿರುಚ್ಚಿ.

ತಮಿಳುನಾಡು ಕರಾವಳಿ, ಕಾರೈಕಲ್ ಮತ್ತು ಪುದುಚೇರಿಯಲ್ಲಿ ಇಂದು ಭಾರೀ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ನೈಋತ್ಯ ಬಂಗಾಳ ಕೊಲ್ಲಿ ಮತ್ತು ಹಿಂದೂ ಮಹಾಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಭಾರೀ ಮಳೆಯಾಗಲು ಕಾರಣ ಎಂದು ಹವಾಮಾನ ಇಲಾಖೆ ತಿಳಿಸಿದೆ. ತಮಿಳುನಾಡು ಕರಾವಳಿ ಪ್ರದೇಶಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುತ್ತದೆ.

ಮಾರ್ಚ್ 5-6ರಂದು ತಮಿಳುನಾಡಿನ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನೈಋತ್ಯ ಮತ್ತು ಪಶ್ಚಿಮ ಬಂಗಾಳ ಕೊಲ್ಲಿ, ಹಿಂದೂ ಮಹಾಸಾಗರ, ಮನ್ನಾರ್ ಗಲ್ಫ್, ಕೊಮೊರಿನ್ ಮತ್ತು ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಯವರೆಗೂ ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Weather Today: ತಮಿಳುನಾಡು, ಪುದುಚೇರಿ, ದೆಹಲಿ ಸೇರಿ ಈ ರಾಜ್ಯಗಳಲ್ಲಿ ಮಾ. 4ರವರೆಗೆ ಭಾರೀ ಮಳೆ

Weather Today: ಕೇರಳ, ತಮಿಳುನಾಡು, ಲಕ್ಷದ್ವೀಪದಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..