AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Today: ಚಳಿಯ ನಡುವೆ ದೆಹಲಿ, ಹರಿಯಾಣ, ಪಂಜಾಬ್, ಉತ್ತರ ಪ್ರದೇಶದಲ್ಲಿ ಮಳೆಯ ಅಲರ್ಟ್

Rain Updates: ಜನವರಿ 22ರಿಂದ ಜನವರಿ 25ರ ಅವಧಿಯಲ್ಲಿ ದೆಹಲಿ ಮತ್ತು ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ. ಜನವರಿ 23 ಮತ್ತು 24ರಂದು ವಾಯುವ್ಯ ಭಾರತದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

Weather Today: ಚಳಿಯ ನಡುವೆ ದೆಹಲಿ, ಹರಿಯಾಣ, ಪಂಜಾಬ್, ಉತ್ತರ ಪ್ರದೇಶದಲ್ಲಿ ಮಳೆಯ ಅಲರ್ಟ್
ಮಳೆ
TV9 Web
| Edited By: |

Updated on: Jan 18, 2023 | 9:16 AM

Share

ನವದೆಹಲಿ: ದೆಹಲಿ, ನೊಯ್ಡಾ, ಘಾಜಿಯಾಬಾದ್, ಗುರುಗ್ರಾಮ, ಹರಿಯಾಣ, ಪಂಜಾಬ್, ಚಂಡೀಗಢ, ಉತ್ತರ ಪ್ರದೇಶ ಮತ್ತು ಉತ್ತರ ಭಾರತದ ಇತರ ಭಾಗಗಳಲ್ಲಿ ಈಗಾಗಲೇ ಶೀತ ಗಾಳಿ (Cold Wave) ಮತ್ತು ದಟ್ಟವಾದ ಮಂಜಿನಿಂದ ಜನ ಕಂಗೆಟ್ಟಿದ್ದಾರೆ. ಇದರ ನಡುವೆ ಜನವರಿ 21ರಿಂದ 25ರವರೆಗೆ ಈ ರಾಜ್ಯಗಳಲ್ಲಿ ಮಳೆಯಾಗುವ (Rainfall) ಸಾಧ್ಯತೆಗಳು ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಜನವರಿ 22ರಿಂದ ಜನವರಿ 25ರ ಅವಧಿಯಲ್ಲಿ ದೆಹಲಿ ಮತ್ತು ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ. ಜನವರಿ 23 ಮತ್ತು 24ರಂದು ವಾಯುವ್ಯ ಭಾರತದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು IMD ಹೇಳಿದೆ.

ಜಮ್ಮು, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಪಶ್ಚಿಮ ಉತ್ತರ ಪ್ರದೇಶ ಮತ್ತು ಉತ್ತರ ರಾಜಸ್ಥಾನದಲ್ಲಿ ಜನವರಿ 23 ಮತ್ತು 24ರಂದು ಆಲಿಕಲ್ಲು ಮಳೆಯ ಮುನ್ಸೂಚನೆ ನೀಡಲಾಗಿದೆ. ಜನವರಿ 23 ಮತ್ತು 24ರಂದು, ಪಂಜಾಬ್, ಹರಿಯಾಣ, ದೆಹಲಿ ಮತ್ತು ಪಶ್ಚಿಮ ಉತ್ತರ ಪ್ರದೇಶದ ಮೇಲೆ 50 ಕಿಮೀ ವೇಗದ ವೇಗದೊಂದಿಗೆ ಬಲವಾದ ಗಾಳಿಯೊಂದಿಗೆ ಮಳೆಯಾಗುವುದಾಗಿ ಸೂಚಿಸಲಾಗಿದೆ.

ಇದನ್ನೂ ಓದಿ: Karnataka Rain: ಮೈಸೂರು, ಕೊಡಗು, ಚಾಮರಾಜನಗರದಲ್ಲಿ ಇಂದು ಹಗುರ ಮಳೆ ಸಾಧ್ಯತೆ

ಜಮ್ಮು ಮತ್ತು ಕಾಶ್ಮೀರ: ಜನವರಿ 21 ಮತ್ತು ಜನವರಿ 22ರಂದು ಹಲವು ಸ್ಥಳಗಳಲ್ಲಿ ಕಡಿಮೆ ಮಳೆ ಅಥವಾ ಹಿಮ ಬೀಳುವ ಸಾಧ್ಯತೆ ಇದೆ. ಜನವರಿ 23 ಮತ್ತು 24ರಂದು ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಹಿಮಪಾತವಾಗಲಿದೆ. ಜನವರಿ 25ರಂದು ಹಿಮ ಬೀಳುವ ನಿರೀಕ್ಷೆಯಿದೆ.

ಹಿಮಾಚಲ ಪ್ರದೇಶ: ಜನವರಿ 22ರಂದು ಕೆಲವು ಸ್ಥಳಗಳಲ್ಲಿ ತುಂತುರು ಮಳೆ ಅಥವಾ ಹಿಮವನ್ನು ನಿರೀಕ್ಷಿಸಲಾಗಿದೆ. ಜನವರಿ 23 ಮತ್ತು 24ರಂದು ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಹಿಮಪಾತವಾಗಲಿದೆ. ಜನವರಿ 25ರಂದು ಕೆಲವು ಸ್ಥಳಗಳಲ್ಲಿ ಅತಿ ಕಡಿಮೆ ಮಳೆ ಅಥವಾ ಹಿಮಪಾತವಾಗುವ ಸಾಧ್ಯತೆಯಿದೆ.

ಉತ್ತರಾಖಂಡ: ಜನವರಿ 23ರಂದು ಅನೇಕ ಸ್ಥಳಗಳಲ್ಲಿ ಲಘು ಮಳೆಯಾಗಲಿದೆ. ಜನವರಿ 24ರಂದು ಸಾಧಾರಣ ಮಳೆ/ ಹಿಮಪಾತ, ಜನವರಿ 25ರಂದು ಕೆಲವು ಸ್ಥಳಗಳಲ್ಲಿ ಲಘು ಮಳೆ/ ಹಿಮಪಾತವಾಗಲಿದೆ.

ಇದನ್ನೂ ಓದಿ: Bengaluru Weather: ಬೆಂಗಳೂರಿನಲ್ಲಿ ಈ ವಾರವಿಡೀ ಚಳಿ, ಮಂಜಿನ ವಾತಾವರಣ; ಮಲೆನಾಡಿನಲ್ಲಿ ಶೀತ ಗಾಳಿ

ಪಂಜಾಬ್: ಜನವರಿ 22ರಂದು ಕೆಲವು ಸ್ಥಳಗಳಲ್ಲಿ ಅತಿ ಕಡಿಮೆ ಮಳೆಯಾಗಬಹುದು. ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಬಹುದು. ಜನವರಿ 25ರಂದು ಕೆಲವು ಸ್ಥಳಗಳಲ್ಲಿ ಅತಿ ಕಡಿಮೆ ಮಳೆಯಾಗುತ್ತದೆ.

ಹರಿಯಾಣ, ಚಂಡೀಗಢ ಮತ್ತು ದೆಹಲಿ: ಜನವರಿ 22ರಂದು ಅನೇಕ ಸ್ಥಳಗಳಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. ಜನವರಿ 24ರಂದು ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಜನವರಿ 25ರಂದು ಕೆಲವು ಸ್ಥಳಗಳಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಪ್ರದೇಶ: ಜನವರಿ 23 ಮತ್ತು 24ರಂದು ಕೆಲವು ಸ್ಥಳಗಳಲ್ಲಿ ಲಘು ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ