AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Today: ತಮಿಳುನಾಡು, ಮಹಾರಾಷ್ಟ್ರ, ಅಸ್ಸಾಂ ಸೇರಿ ಹಲವೆಡೆ ಫೆ. 5ರವರೆಗೆ ಮಳೆ

Weather Forecast: ಇಂದು ಮತ್ತು ಫೆ. 4ರಂದು ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮತ್ತು ಫೆ. 4 ಮತ್ತು 5ರಂದು ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮಳೆಯಾಗಲಿದೆ.

Weather Today: ತಮಿಳುನಾಡು, ಮಹಾರಾಷ್ಟ್ರ, ಅಸ್ಸಾಂ ಸೇರಿ ಹಲವೆಡೆ ಫೆ. 5ರವರೆಗೆ ಮಳೆ
ಮಳೆಯಿಂದ ಹಾಳಾದ ರಸ್ತೆಗಳು
TV9 Web
| Edited By: |

Updated on: Feb 03, 2022 | 6:01 AM

Share

ಬೆಂಗಳೂರು: ಕರ್ನಾಟಕದಲ್ಲಿ ವರುಣನ ಆರ್ಭಟ ಕಡಿಮೆಯಾಗಿದ್ದು, ನೆರೆಯ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಬಿಹಾರ, ಅಸ್ಸಾಂ, ಮೇಘಾಲಯ ಮತ್ತು ಮಧ್ಯ ಮಹಾರಾಷ್ಟ್ರದ ಕೆಲವು ಸ್ಥಳಗಳಲ್ಲಿ ಫೆಬ್ರವರಿ 5ರವರೆಗೆ ಶೀತ ಗಾಳಿ ಬೀಸಲಿದ್ದು, ಮಳೆಯಾಗಲಿದೆ. ಇಂದಿನಿಂದ ಫೆಬ್ರವರಿ 4ರವರೆಗೆ ಪಶ್ಚಿಮ ಹಿಮಾಲಯನ್ ಪ್ರದೇಶದಲ್ಲಿ ಸಾಧಾರಣ ಮಳೆ ಅಥವಾ ಹಿಮಪಾತವಾಗುವ ಸಾಧ್ಯತೆಯಿದೆ. ಇಂದು ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದಲ್ಲಿ ಹಿಮ ಬೀಳುವ ನಿರೀಕ್ಷೆಯಿದೆ. ಇಂದಿನಿಂದ ಫೆಬ್ರವರಿ 4ರವರೆಗೆ ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ವ್ಯಾಪಕ ಮಳೆಯಾಗಲಿದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಉತ್ತರಾಖಂಡದಲ್ಲಿ ಮಳೆಯಾಗಲಿದೆ. ಸಿಕ್ಕಿಂ, ಅರುಣಾಚಲ ಪ್ರದೇಶ, ತ್ರಿಪುರಾ, ಮಣಿಪುರ ಮತ್ತು ಮಿಜೋರಾಂನಲ್ಲಿ ಕೂಡ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು ಮತ್ತು ಕೇರಳದಲ್ಲಿ ಮಳೆ ಹೆಚ್ಚಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ.

ಹಿಮಾಚಲ ಪ್ರದೇಶ, ಉತ್ತರಾಖಂಡದ ಕೆಲವು ಭಾಗಗಳಲ್ಲಿ ಫೆಬ್ರವರಿ 4ರವರೆಗೆ ಭಾರೀ ಮಳೆ ಮತ್ತು ಹಿಮಪಾತ ಉಂಟಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಇಂದು ಮತ್ತು ನಾಳೆ ಪಶ್ಚಿಮ ಹಿಮಾಲಯ ಪ್ರದೇಶದಾದ್ಯಂತ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆ ಮತ್ತು ಹಿಮಪಾತ ಉಂಟಾಗುವ ನಿರೀಕ್ಷೆಯಿದೆ. ಎರಡೂ ರಾಜ್ಯಗಳಾದ್ಯಂತ ಮಳೆ ತೀವ್ರಗೊಳ್ಳಬಹುದು. ಇಂದು ಭಾರೀ ಮಳೆ ಮತ್ತು ಹಿಮಪಾತ ಉಂಟಾಗಲಿದೆ.

ಇಂದು ಹಿಮಾಚಲ ಪ್ರದೇಶದಲ್ಲಿ ಮತ್ತು ಶುಕ್ರವಾರ ಉತ್ತರಾಖಂಡದಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ. ಇಂದು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಲಾಗಿದ್ದು, ಕಂಗ್ರಾ, ಚಂಬಾ, ಕುಲು, ಕಿನ್ನೌರ್ ಮತ್ತು ಲಾಹುಲ್ ಮತ್ತು ಸ್ಪಿತಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಹಿಮ ಉಂಟಾಗಲಿದೆ.

ಉತ್ತರಾಖಂಡಕ್ಕೆ ಸಂಬಂಧಿಸಿದಂತೆ ಗುರುವಾರ ಡೆಹ್ರಾಡೂನ್, ನೈನಿತಾಲ್, ಚಂಪಾವತ್, ಉಧಮ್ ಸಿಂಗ್ ನಗರ, ತೆಹ್ರಿ ಗರ್ವಾಲ್, ಪೌರಿ ಗರ್ವಾಲ್, ರುದ್ರಪ್ರಯಾಗ, ಚಮೋಲಿ, ಅಲ್ಮೋರಾ, ಬಾಗೇಶ್ವರ್ ಮತ್ತು ಪಿಥೋರಗಢ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇಂದು ಮತ್ತು ಫೆಬ್ರವರಿ 4ರಂದು ಮಳೆಯ ಮುನ್ಸೂಚನೆ ನೀಡಲಾಗಿದೆ. ಫೆಬ್ರವರಿ 5ರಿಂದ ವಾಯು ಗುಣಮಟ್ಟವು ಕ್ರಮೇಣ ಕ್ಷೀಣಿಸುತ್ತದೆ.

ಇಂದು ಮತ್ತು ಫೆ. 4ರಂದು ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮತ್ತು ಫೆ. 4 ಮತ್ತು 5ರಂದು ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮಳೆಯಾಗಲಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್‌, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ಮಳೆಯಾಗಲಿದೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಬಿಹಾರ ಮತ್ತು ಒಡಿಶಾದಲ್ಲಿ ಶೀತ ಅಲೆಗಳು ಉಂಟಾಗುವ ಸಾಧ್ಯತೆಯಿದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಮಧ್ಯಪ್ರದೇಶ ಸೇರಿದಂತೆ ವಾಯುವ್ಯ ಮತ್ತು ಮಧ್ಯ ಭಾರತದ ಹಲವಾರು ರಾಜ್ಯಗಳಲ್ಲಿ ಇಂದು ಶೀತ ಅಲೆ ಉಂಟಾಗಲಿದೆ.

ಇಂದು ಮತ್ತು ನಾಳೆ (ಫೆಬ್ರವರಿ 4) ಪಶ್ಚಿಮ ಹಿಮಾಲಯ ಪ್ರದೇಶದಾದ್ಯಂತ ಮಳೆ ಮತ್ತು ಹಿಮಪಾತ ಉಂಟಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವಿಶೇಷವಾಗಿ ಇಂದು ಭಾರೀ ಮಳೆ ಅಥವಾ ಹಿಮಪಾತವಾಗುವ ಸಾಧ್ಯತೆಯಿದೆ. ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ಉತ್ತರ ಪ್ರದೇಶಗಳಲ್ಲಿ ಫೆಬ್ರವರಿ 4ರವರೆಗೆ ವ್ಯಾಪಕವಾದ ಮಳೆಯಾಗಲಿದೆ. ಫೆಬ್ರವರಿ 6ರಿಂದ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಮಳೆಯಾಗಲಿದೆ ಮತ್ತು ಇಂದಿನಿಂದ ಫೆಬ್ರವರಿ 5ರವರೆಗೆ ಮಳೆ ಮತ್ತು ಮೋಡ ಕವಿದ ವಾತಾವರಣವಿರಲಿದೆ.

ಇದನ್ನೂ ಓದಿ: Rain Updates: ದೆಹಲಿ, ಪಂಜಾಬ್, ಹರಿಯಾಣದಲ್ಲಿ ಫೆಬ್ರವರಿ ಮೊದಲ ವಾರದಲ್ಲಿ ಭಾರೀ ಮಳೆ ಸಾಧ್ಯತೆ

Karnataka Weather Today: ಉತ್ತರ ಭಾರತದಲ್ಲಿ ಫೆ. 3ರಿಂದ ಮಳೆ ಹೆಚ್ಚಳ; ಹಿಮಾಚಲ ಪ್ರದೇಶದಲ್ಲಿ ಹಿಮಪಾತ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ