AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ 12 ಜಿಲ್ಲೆಗಳಲ್ಲಿ ಅ. 29ರಿಂದ ಈಶಾನ್ಯ ಮಾನ್ಸೂನ್ ಅಬ್ಬರ

Tamil Nadu Rains: ತಮಿಳುನಾಡಿನಲ್ಲಿ ಈಶಾನ್ಯ ಮಾನ್ಸೂನ್ ಭಾನುವಾರದಿಂದ ಸಕ್ರಿಯಗೊಳ್ಳುವ ನಿರೀಕ್ಷೆಯಿದೆ. ಮುಂದಿನ ಕೆಲವು ದಿನಗಳಲ್ಲಿ ತಮಿಳುನಾಡು ರಾಜ್ಯದಾದ್ಯಂತ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತದೆ. ದಕ್ಷಿಣ ತಮಿಳುನಾಡಿನಲ್ಲಿ ಚಂಡಮಾರುತ ಉಂಟಾಗಲಿದೆ.

ತಮಿಳುನಾಡಿನ 12 ಜಿಲ್ಲೆಗಳಲ್ಲಿ ಅ. 29ರಿಂದ ಈಶಾನ್ಯ ಮಾನ್ಸೂನ್ ಅಬ್ಬರ
ಮಳೆImage Credit source: iStock
ಸುಷ್ಮಾ ಚಕ್ರೆ
|

Updated on: Oct 27, 2023 | 8:14 AM

Share

ಚೆನ್ನೈ: ಹಮೂನ್ ಚಂಡಮಾರುತದ ಆರ್ಭಟ ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡಿದೆ. ಇದರ ನಡುವೆ ಅಕ್ಟೋಬರ್ 29ರಿಂದ ತಮಿಳುನಾಡು ಮತ್ತು ಕರ್ನಾಟಕದಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ತಮಿಳುನಾಡಿನಲ್ಲಿ ಈಶಾನ್ಯ ಮಾನ್ಸೂನ್ ಭಾನುವಾರದಿಂದ ಸಕ್ರಿಯಗೊಳ್ಳುವ ನಿರೀಕ್ಷೆಯಿದೆ. ಮುಂದಿನ ಕೆಲವು ದಿನಗಳಲ್ಲಿ ತಮಿಳುನಾಡು ರಾಜ್ಯದಾದ್ಯಂತ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತದೆ. ದಕ್ಷಿಣ ತಮಿಳುನಾಡಿನಲ್ಲಿ ಚಂಡಮಾರುತ ಉಂಟಾಗಲಿದ್ದು, ವಿಲ್ಲುಪುರಂ, ಕಲ್ಲಕುರಿಚಿ, ಕಡಲೂರು, ಪೆರಂಬಲೂರ್, ಅರಿಯಲೂರ್, ಮೈಲಾಡುತುರೈ, ತಂಜಾವೂರು, ತಿರುವರೂರು, ನಾಗಪಟ್ಟಿಣಂ, ಪುದುಕ್ಕೊಟ್ಟೈನಲ್ಲಿ ಹೈ ಅಲರ್ಟ್​ ಘೋಷಿಸಲಾಗಿದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ತಿಳಿಸಿದೆ. ತಿರುಚಿರಾಪಳ್ಳಿ ಮತ್ತು ದಿಂಡಿಗಲ್ ಜಿಲ್ಲೆಗಳಲ್ಲಿ ಅಕ್ಟೋಬರ್ 29ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಅದೇ ರೀತಿ ಕೊಯಮತ್ತೂರು, ನೀಲಗಿರಿ, ಮೈಲಾಡುತುರೈ, ತಂಜಾವೂರು, ತಿರುವರೂರ್, ನಾಗಪಟ್ಟಣಂ, ಪುದುಕೊಟ್ಟೈ, ತಿರುಚಿರಾಪಳ್ಳಿ, ದಿಂಡಿಗಲ್, ಅರಿಯಲೂರ್, ಪೆರಂಬಲೂರು, ಸೇಲಂ, ನಾಮಕ್ಕಲ್, ವಿರುದುನಗರ, ತೂತುಕುಡಿ, ಮಧುರೈ ಮತ್ತು ಥೇಣಿ ಜಿಲ್ಲೆಗಳಲ್ಲಿ ಅಕ್ಟೋಬರ್ 30ರಂದು ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ತಿಂಗಳಿನಲ್ಲಿ ಮುಂಗಾರು ಕ್ಷೀಣಿಸಿತ್ತು. ಈ ಬಾರಿ ತಮಿಳುನಾಡಿನಲ್ಲಿ ಶೇ. 41ರಷ್ಟು ಮಳೆಯ ಕೊರತೆ ದಾಖಲಾಗಿದೆ. ದಕ್ಷಿಣದ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲ ಜಿಲ್ಲೆಗಳಲ್ಲೂ ಮಳೆ ಬಹಳ ಕಡಿಮೆಯಾಗಿತ್ತು.

ಇದನ್ನೂ ಓದಿ: Karnataka Rain: ರಾಜ್ಯಾದ್ಯಂತ ಒಣಹವೆ, ಅಕ್ಟೋಬರ್ 29ರಿಂದ ಎರಡು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕನ್ಯಾಕುಮಾರಿಯಲ್ಲಿ ಅಕ್ಟೋಬರ್‌ನಲ್ಲಿ ಶೇ. 144ರಷ್ಟು ಅಧಿಕ ಮಳೆಯಾಗಿದೆ. ಈ ಬಾರಿಯ ದುರ್ಬಲ ಮಾನ್ಸೂನ್‌ಗೆ ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಚಂಡಮಾರುತ ಕಾರಣವೆಂದು ಹೇಳಲಾಗಿದೆ. ಕನ್ಯಾಕುಮಾರಿಯಲ್ಲಿ ದಾಖಲೆಯ ಮಳೆಯಾಗಿದ್ದರೂ ಉಳಿದೆಡೆ ಮಳೆಯ ಕೊರತೆಯಾಗಿದೆ. ತಮಿಳುನಾಡಿನಾದ್ಯಂತ ಈವರೆಗೆ ಮುಂಗಾರು ಮಳೆಯಲ್ಲಿ ಶೇ. 41ರಷ್ಟು ಕೊರತೆಯಾಗಿದೆ.

ಇಂದು ತಮಿಳುನಾಡು, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಸಿಕ್ಕಿಂ, ಕೇರಳ, ಆಂಧ್ರಪ್ರದೇಶ, ಅಂಡಮಾನ್-ನಿಕೋಬಾರ್ ದ್ವೀಪಗಳು ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆ ಸುರಿಯುವ ನಿರೀಕ್ಷೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ